Rain: ಭಾರಿ ಮಳೆ… ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು (ಜುಲೈ 30) ಶಾಲೆಗಳಿಗೆ ರಜೆ ಘೋಷಣೆ
ಚಾರ್ಮಾಡಿಯಲ್ಲಿ ರಸ್ತೆಗೆ ಉರುಳಿದ ಮರ,
Team Udayavani, Jul 30, 2024, 8:38 AM IST
ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಕಳೆದ ರಾತ್ರಿಯಿಂದ ನಿರಂತೆ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ, ಮೃತ್ಯುಂಜಯ ನದಿಗಳು ಉಕ್ಕಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿದ್ದರಿಂದ ಸಂಚಾರಕ್ಕೆ ತಡೆಯಾಗಿದೆ.
ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮರ ಉರುಳಿದ್ದು, ರಸ್ತೆ ತಡೆಯಾಗಿದೆ. ಮಳೆಗಾಲದ ಮುನ್ನ ಅಪಾಯಕಾರಿ ಮರ ತೆರವು ಮಾಡದೆ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಪರದಾಡುವಂತಾಗಿದೆ. ಈ ವಿಚಾರವಾಗಿ ಸಾರ್ವಜನಿಕ ವಲಯದಿಂದ ಇಲಾಖೆ ಬೇಜವಾಬ್ದಾರಿತನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ನದಿ ಸಮೀಪದ ತೋಟಗಳಿಗೆ ನೀರು ನುಗ್ಗಿದೆ. ತೀರ ಗ್ರಾಮಾಂತರ ಸರಕಾರಿ ಶಾಲೆಗಳಲ್ಲಿ ಸ್ವಯಂಪ್ರೇರಿತವಾಗಿ ರಜೆ ನೀಡಲಾಗಿದೆ. ಅಪಾಯದ ಮಟ್ಟ ಮೀರಿ ನದಿ ನೀರು ಹೆಚ್ಚಳವಾಗುತ್ತಿರುವುದರಿಂದ ನೆರೆ ಸಂಭವ ಸಾಧ್ಯತೆ ಎದುರಾಗಿದೆ.
ಈಗಾಗಲೆ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಿಂದ ಧರ್ಮಸ್ಥಳ ಸಮೀಪದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಮುಂಭಾಗ ಸಂಗಮವಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು(ಮಂಗಳವಾರ) ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರು ಉದಯವಾಣಿಗೆ ತಿಳಿಸಿದ್ದಾರೆ.
ಆದರೆ ಮಳೆ ರಾತ್ರಿಯಿಂದಲೇ ಸುರಿಯುತ್ತಿದ್ದರೂ ತಹಶೀಲ್ದಾರ್ ತಡವಾಗಿ ರಜೆ ನಿರ್ಧಾರ ತೆಗೆದಿದ್ದು, ಬಹುತೇಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರು, ಮಕ್ಕಳು ಶಾಲೆಗೆ ತೆರಳುವ ಮಾರ್ಗದಲ್ಲಿದ್ದುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.