ಕಡಬ ಪರಿಸರದಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಕೃಷಿ ಹಾನಿ, ಅಪಾರ ನಷ್ಟ
Team Udayavani, Apr 21, 2018, 9:25 AM IST
ಕಡಬ: ಪರಿಸರದಲ್ಲಿ ಗುರುವಾರ ಸಂಜೆ ಗಾಳಿ, ಗುಡುಗು, ಮಿಂಚಿನೊಂದಿಗೆ ಸುರಿದ ಭಾರೀ ಮಳೆಗೆ ಹಲವೆಡೆ ಕೃಷಿ, ಸೊತ್ತುಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಮರ್ದಾಳ ಪೇಟೆಯ ಜೈನ ಬಸದಿ ಸಮೀಪದ ತೆಂಗಿನಮರ ರಸ್ತೆಗೆ ಅಡ್ಡಲಾಗಿ ಮುರಿದುಬಿದ್ದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ತೆಂಗಿನ ಮರ ಮುರಿದು ಬೀಳುವ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜೀಪೊಂದು ಕೂದಲೆಳೆಯ ಅಂತರದಲ್ಲಿ ಮರದಡಿ ಸಿಲುಕುವುದರಿಂದ ಪಾರಾಗಿ ಸಂಭಾವ್ಯ ಅಪಾಯ ತಪ್ಪಿತು. ಮರ್ದಾಳದ ವಾಣಿಜ್ಯ ಕಟ್ಟಡದ ಮೆಲ್ಛಾವಣಿಯ ಸುಮಾರು 20ಕ್ಕೂ ಹೆಚ್ಚು ಸಿಮೆಂಟ್ ಶೀಟ್ಗಳು, ಹೊಟೇಲ್ ಕಟ್ಟಡದ ಛಾವಣಿಯ ಹೆಂಚುಗಳು ಗಾಳಿಯ ರಭಸಕ್ಕೆ ಹಾರಿ ಮುಖ್ಯರಸ್ತೆಗೆ ಬಿದ್ದು ಸಂಪೂರ್ಣ ನಾಶವಾಗಿದೆ. ಮರ್ದಾಳ ನಿವಾಸಿ ಸಂಜೀವ ಶೆಟ್ಟಿ ಅವರಿಗೆ ಸೇರಿದ ಅಡಿಕೆ ಶೇಖರಿ ಸಿಟ್ಟಿದ್ದ ಕೊಠಡಿಯ ಸಿಮೆಂಟ್ ಶೀಟ್ ಹಾರಿಹೋಗಿ ಮಳೆನೀರು ಒಳ ಬಂದು ಅಡಿಕೆ ಒದ್ದೆಯಾಗಿ ನಷ್ಟ ಸಂಭವಿಸಿದೆ. ಕಡಬ-ಪಂಜ ರಸ್ತೆಯ ಕೋಡಿಂಬಾಳ, ಓಂತ್ರಡ್ಕ, ವಿದ್ಯಾನಗರ ಮುಂತಾದೆಡೆ ರಸ್ತೆಗಡ್ಡವಾಗಿ ರಸ್ತೆ ಪಕ್ಕದ ಮರದ ಕೊಂಬೆಗಳು ಮುರಿದುಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಕೋಡಿಂಬಾಳ ಪರಿಸರದ ಪಾದೆ, ಪಟ್ನ, ದೊಡ್ಡಕೊಪ್ಪ ಪ್ರದೇಶಗಳಲ್ಲಿ ರಬ್ಬರ್ ಮರಗಳು, ಅಡಿಕೆ ಮರಗಳು ಹಾಗೂ ತೆಂಗಿನ ಮರಗಳು ಗಾಳಿಗೆ ಮುರಿದು ಬಿದ್ದಿವೆ. ಹಲವೆಡೆ ಮರದ ಕೊಂಬೆಗಳು ವಿದ್ಯುತ್ ಲೈನ್ಗೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದುಬಿದ್ದು ವಿದ್ಯುತ್ ಲೈನ್ಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.