ಮಳೆ ಅಬ್ಬರ: ನದಿಗಳು ಭರ್ತಿ, 2 ಬಲಿ


Team Udayavani, Jul 8, 2018, 11:52 AM IST

8-july-9.jpg

ಪುತ್ತೂರು: ಮಳೆಯ ನಕ್ಷತ್ರ ಪುನರ್ವಸು ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಪುನರ್ವಸು ನಕ್ಷತ್ರ ಆರಂಭಗೊಂಡ 48 ಗಂಟೆಗಳ ಅವಧಿಯಲ್ಲಿ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಗುರುವಾರ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ಕುಂಬ್ರ, ಈಶ್ವರ ಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ಪುರುಷರಕಟ್ಟೆ, ಉಪ್ಪಿನಂಗಡಿ, ನೆಲ್ಯಾಡಿಗಳಲ್ಲಿ ಉತ್ತಮ ಮಳೆಯಾಗಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಶುಕ್ರವಾರ ರಾತ್ರಿ ಸಿಡಿಲು, ಮಿಂಚಿನ ಆರ್ಭಟವೂ ಇತ್ತು. ಮಳೆಯ ಭೀಕರತೆಯನ್ನು ಮನಗಂಡು ಶನಿವಾರ ಪುತ್ತೂರು ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ ಅವರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ರಜೆ ಘೋಷಿಸಿದ್ದರು. 

ಗ್ರಾಮಾಂತರ ಭಾಗಗಳಲ್ಲಿ ಪ್ರಾಕೃತಿಕ ಹಾನಿಯಿಂದ ತೊಂದರೆ ಸಂಭವಿಸದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ಪಕ್ಕದ ಮನೆಗಳಿಗೆ ಶುಕ್ರವಾರ ರಾತ್ರಿ ನೀರು ನುಗ್ಗಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯೂ ನೀರು ನುಗ್ಗಿ ಹಾನಿ ಸಂಭವಿಸಿದೆ. ತೆಂಕಿಲದ ಬಳಿ ಧರೆ ಕುಸಿತ ಉಂಟಾಗಿದೆ. ಮಂಜಲ್ಪಡ್ಪು  ಸಮೀಪವೂ ಧರೆ ಕುಸಿದು ರಸ್ತೆಗೆ ಮಣ್ಣು ಬಿದ್ದಿದೆ. ಶುಕ್ರವಾರ ಬೆಳಗ್ಗಿನಿಂದ ಶನಿವಾರ ಬೆಳಗ್ಗಿನ 24 ಗಂಟೆಗಳ ಅವಧಿಯಲ್ಲಿ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ 1,130.3 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ಜೂ. 13 ಹಾಗೂ 14ರಂದು 846 ಮಿ.ಮೀ. ಮಳೆ ಬಿದ್ದಿರುವುದು ಈ ಮಳೆಗಾಲದ ಗರಿಷ್ಠ ಪ್ರಮಾಣವಾಗಿತ್ತು.

ಪುತ್ತೂರು ನಗರದಲ್ಲಿ 227 ಮಿ.ಮೀ., ಉಪ್ಪಿನಂಗಡಿಯಲ್ಲಿ 177.4 ಮಿ.ಮೀ., ಶಿರಾಡಿಯಲ್ಲಿ 173.4 ಮಿ.ಮೀ., ಕೊಯಿಲದಲ್ಲಿ 180.3 ಮಿ.ಮೀ., ಐತೂರುನಲ್ಲಿ 215 ಮಿ.ಮೀ., ಕಡಬದಲ್ಲಿ 157.2 ಮಿ.ಮೀ. ಮಳೆ ಸುರಿದಿದೆ. ತಾಲೂಕಿನಲ್ಲಿ ಒಟ್ಟು ಸರಾಸರಿ 188.3 ಮಿ.ಮೀ. ಮಳೆಯಾಗಿದೆ.

ಇಬ್ಬರ ಸಾವು
ಸಾಲ್ಮರ ಸಮೀಪದ ಹೆಬ್ಟಾರಬೈಲುನಲ್ಲಿ ಮನೆಗೆ ಪಕ್ಕ ಇದ್ದ ಧರೆ ಕುಸಿತದಿಂದಾಗಿ ಶುಕ್ರವಾರ ರಾತ್ರಿ ಮಲಗಿದ್ದ ಅಜ್ಜಿ, ಮೊಮ್ಮಗ ಅಸುನೀಗಿದ್ದಾರೆ. ಘಟನ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.

ಸುಳ್ಯ: ತುಂಬಿ ಹರಿದ ಪಯಸ್ವಿನಿ
ಸುಳ್ಯ: ತಾಲೂಕಿನಲ್ಲಿ ದಿನವಿಡೀ ಧಾರಕಾರ ಮಳೆ ಸುರಿದಿದೆ. ತೋಡು, ಹೊಳೆ, ನದಿಗಳು ತುಂಬಿ ತುಳುಕಿದ್ದು, ನಗರ ಮತ್ತು ಗ್ರಾಮಾಂತರ ರಸ್ತೆಗಳು ತೋಡಿನಂತಾಗಿದ್ದವು. ಯಾವುದೇ ಹಾನಿ ಉಂಟಾದ ಕುರಿತು ವರದಿಯಾಗಿಲ್ಲ. ನಗರದ ಪೈಚಾರು, ಹಳೆಗೇಟು, ಹೊರವಲಯದ ಕನಕಮಜಲು ಸಹಿತ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲೇ ಮಳೆ ನೀರು ಸಾಗಿ ವಾಹನ ಸವಾರರು ಅಕ್ಷರಶಃ ಪರದಾಟ ನಡೆಸಿದರು. ಗ್ರಾಮಾಂತರ ಭಾಗದ ಕಚ್ಚಾ ರಸ್ತೆಗಳಲ್ಲೂ ವಾಹನ ಓಡಾಟ, ಪಾದಚಾರಿಗಳ ಸಂಚಾರ ದುಸ್ತರವೆನಿಸಿತ್ತು.

ತುಂಬಿದ ಪಯಸ್ವಿನಿ
ಆರೇಳು ವರ್ಷಗಳಲ್ಲಿ ನದಿ, ಹೊಳೆಗಳಲ್ಲಿ ನೀರಿನ ಹರಿವಿನ ಮಟ್ಟ ಸಾಕಷ್ಟು ಏರಿಕೆ ಕಂಡಿತ್ತು. ಭಾಗಮಂಡಲದಲ್ಲಿ ಧಾರಾಕಾರ ಮಳೆ ಉಂಟಾದ ಕಾರಣ, ಪಯಸ್ವಿನಿ ತುಂಬಿ ಹರಿಯಿತು. ಕುಮಾರಧಾರೆಯಲ್ಲಿಯೂ ಹರಿವಿನ ಮಟ್ಟ ಹೆಚ್ಚಿತ್ತು. ಗೌರಿ ಹೊಳೆಯಲ್ಲಿ ನೀರು ತುಂಬಿ ಕುಂಡಡ್ಕ, ಚೆನ್ನಾವರ ಪರಿಸರದ ಕೃಷಿ ತೋಟಗಳಿಗೆ ನುಗ್ಗಿತ್ತು. ಸುಳ್ಯ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಸಂಜೆ ತನಕವೂ ಮಳೆ ಅಬ್ಬರ ಕಡಿಮೆ ಆಗಲಿಲ್ಲ. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.