ಅಧಿಕ ರಕ್ತದೊತ್ತಡ 


Team Udayavani, May 15, 2018, 4:00 PM IST

15-May-14.jpg

ನಮ್ಮ ಜೀವನ ಶೈಲಿ ಹಾಗೂ ಕೆಲಸದ ಒತ್ತಡಗಳಿಂದ ಆರೋಗ್ಯದ ಕಡೆಗೆ ಗಮನ ನೀಡಲು ಸಮಯ ಸಿಗವುದೇ ಇಲ್ಲ. ವರ್ಷಗಳು ಉರುಳಿದಂತೆ ಆರೋಗ್ಯದಲ್ಲಿ ಉಂಟಾಗುವ ಬದಲಾವಣೆಗಳು ಗಾಬರಿ ಉಂಟು ಮಾಡುತ್ತವೆ. ಹಿಂದೆ ನಮಗೆ ತಿಳಿಯದ ಅನೇಕ ರೋಗಗಳಿಂದು ಮನೆ ಮಾತಾಗುತ್ತಿವೆ. ದಶಕಗಳ ಹಿಂದೆ ವಯಸ್ಸಾದವರಲ್ಲಿ ಕಂಡುಬರುತ್ತಿದ್ದ ಆರೋಗ್ಯ ಸಂಬಂಧಿತ ಕಾಯಿಲೆಗಳು ಈಗ ಯುವ ಪೀಳಿಗೆಯನ್ನೂ ಕಾಡುತ್ತಿದೆ. ಅದಕ್ಕಾಗಿ ನಿಯಮಿತ ಆಹಾರ, ವ್ಯಾಯಾಮ ಮೊದಲಾದವುಗಳನ್ನು ಅಳವಡಿಸಿಕೊಳ್ಳುವುದು ಉತ್ತಮ ಎನ್ನು ತ್ತಾರೆ ವೈದ್ಯರು.

ಇಂತಹ ಆರೋಗ್ಯ ಸಮಸ್ಯೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದು. ರಕ್ತನಾಳ ಮತ್ತು ಅಪಧಮನಿಗಳಲ್ಲಿನ ರಕ್ತದ ಒತ್ತಡ ನಿರಂತರ ಹೆಚ್ಚಾಗುವುದನ್ನು ಅಧಿಕ ರಕ್ತದೊತ್ತಡ ಎನ್ನಲಾಗುತ್ತದೆ. ಇದರಿಂದ ದೇಹದ ಇತರ ಅಂಗಾಂಗಗಳಾದ ಕಣ್ಣು, ಮೂತ್ರಪಿಂಡ ಮತ್ತು ಮೆದುಳಿಗೆ ಹಾನಿಯುಂಟಾಗುವ ಸಾಧ್ಯತೆ ಇರುತ್ತದೆ. ಇದರಲ್ಲಿ ಎರಡು ವಿಧಗಳಿದ್ದು ಪ್ರಾಥಮಿಕ ಹಾಗೂ ಅಧಿಕ ರಕ್ತದೊತ್ತಡ ಎಂಬುದಾಗಿ ವಿಭಾಗಿಸಲಾಗುತ್ತದೆ. ಅಧಿಕ ರಕ್ತದೊತ್ತಡವು ಗಂಭೀರ ಸಮಸ್ಯೆಗಳನ್ನು ಉಂಟು ಮಾಡುವುದರಿಂದ ಸಮಯಕ್ಕೆ ಸರಿಯಾಗಿ ಔಷಧಗಳನ್ನು ಸೇವಿಸುವುದು ಅಗತ್ಯ. 

ಕಾರಣ
ಅಧಿಕ ರಕ್ತದೊತ್ತಡವು ಹೆಚ್ಚಾಗಿ ಆನುವಶಿಂಕವಾಗಿ ಬರುತ್ತದೆ. ಅಂದರೆ ಹೆತ್ತವರು ಅಧಿಕ ರಕ್ತದೊತ್ತಡ ಹೊಂದಿದ್ದರೆ ಭವಿಷ್ಯದಲ್ಲಿ ಮಕ್ಕಳಿಗೆ ಅಧಿಕ ರಕ್ತದೊತ್ತಡ ಬರುವ ಸಾಧ್ಯತೆ ಇದೆ. ಅಲ್ಲದೆ ಅತಿಯಾದ ತೂಕ, ಅಧಿಕ ಉಪ್ಪಿನಾಂಶದ ಆಹಾರ ಸೇವನೆ, ವ್ಯಾಯಾಮದಿಂದ ದೂರ ಇರುವುದರಿಂದಲೂ ಅಧಿಕ ರಕ್ತದೊತ್ತಡ ಬಾಧಿಸಬಹುದು.

ಪರಿಣಾಮ
ಅಧಿಕ ರಕ್ತದೊತ್ತಡ ನಿಯಂತ್ರಿಸದೇ ಇದ್ದಲ್ಲಿ ಕಣ್ಣು, ಮೂತ್ರಪಿಂಡ ಮತ್ತು ಮೆದುಳಿನ ಮೇಲೆ ತೀವ್ರ ಪರಿಣಾಮ ಬೀರಬಹುದು. ಅದರೊಂದಿಗೆ ಮೆದುಳಿನ ರಕ್ತಸ್ರಾವದಿಂದ ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಸಾಧ್ಯತೆಯೂ ಇದೆ. 

ತಡೆಗಟ್ಟುವುದು ಹೇಗೆ?
ಯಾವುದೇ ಆರೋಗ್ಯ ಸಮಸ್ಯೆಗೆ ವ್ಯಾಯಾಮ ಹಾಗೂ ನಿಯಮಿತ ಆಹಾರ ನಿರ್ವಹಣೆ ಬಹಳ ಮುಖ್ಯ. ಅಧಿಕ ರಕ್ತದೊತ್ತಡಕ್ಕೂ ಇದೇ ಪರಿಹಾರ. ನಿಯಮಿತ ಏರೋಬಿಕ್‌ ವ್ಯಾಯಾಮ ಮತ್ತು ಸರಿಯಾದ ಆಹಾರ ಕ್ರಮದಿಂದ ಸಕ್ರಿಯ ಜೀವನ ಶೈಲಿಯನ್ನು ಅನುಸರಿಸಬೇಕು. ಅದರೊಂದಿಗೆ ಆಹಾರದಲ್ಲಿ ಅತಿಯಾದ ಉಪ್ಪು, ಸಿಹಿ ಸೇವನೆ ಕಡಿಮೆ ಮಾಡಬೇಕು. ತೂಕ ಇಳಿಸಿದರೆ ಉತ್ತಮ. ಧೂಮಪಾನ ಮತ್ತು ಮಧ್ಯ ಸೇವನೆಯನ್ನು ನಿಲ್ಲಿಸುವುದರಿಂದ ಕೂಡ ಅಧಿಕ ರಕ್ತದೊತ್ತಡವನ್ನು ತಡೆಗಟ್ಟಬಹುದು. 

ಚಿಕಿತ್ಸೆ ಅನಿವಾರ್ಯ
ಹೆಚ್ಚಾಗಿ ಬದಲಾದ ಜೀವನ ಶೈಲಿಯಿಂದ ಅನೇಕ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಅಧಿಕ ರಕ್ತದೊತ್ತಡವಾಗುವವರೆಗೆ ಕಾದು ಅದಕ್ಕೆ ಬೇಕಾಗುವ ಚಿಕಿತ್ಸೆಯನ್ನು ಪಡೆಯುವುದಕ್ಕಿಂತ ಮುಂಚಿತವಾಗಿ ಜಾಗರೂಕತೆ ವಹಿಸುವುದು ಅವಶ್ಯ. ಅಧಿಕ ರಕ್ತದೊತ್ತಡವನ್ನು ತಡೆಯಲು ಚಿಕ್ಕ ವಯಸ್ಸಿನಿಂದಲೇ ಜೀವನಶೈಲಿಯನ್ನು ಕೊಂಚ ಬದಲಾಯಿಸಿಕೊಳ್ಳುವುದು ಉತ್ತಮ. ಇಲ್ಲವಾದ್ದಲ್ಲಿ ಕಾಯಿಲೆಯ ತೀವ್ರತೆ ಮತ್ತು ವಯಸ್ಸಿಗನುಗುಣವಾಗಿ ಔಷಧ ವನ್ನು ಸೇವಿಸಬೇಕಾಗಬಹುದು. ಆಧಿಕ ರಕ್ತದೊತ್ತಡದಿಂದ ಉಂಟಾಗುವ ದೀರ್ಘಾವಧಿಯ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಲು ಜೀವನಪೂರ್ತಿ ಔಷಧ ಸೇವಿಸಬೇಕಾದ ಪರಿಸ್ಥಿತಿಯೂ ಎದುರಾಗಬಹುದು. 

ಎಚ್ಚರ ವಹಿಸಿ
ರೋಗ ಬಂದ ಬಳಿಕ ಲಕ್ಷಾಂತರ ರೂ. ಹಣ ಖರ್ಚು ಮಾಡುವುದಕ್ಕಿಂತ ರೋಗ ಬರುವ ಮುನ್ನ ಎಚ್ಚರವಹಿಸಬೇಕಾಗಿರುವುದು ಮುಖ್ಯ. ಹಾಗಾಗಿ ದಿನನಿತ್ಯ ವ್ಯಾಯಾಮ, ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆ ಮಾಡಿ ಕೊಳ್ಳುವುದು ಉತ್ತಮ ಮಾರ್ಗ. ಸಮಸ್ಯೆ ಲಕ್ಷಣಗಳು ಕಂಡು ಬಂದಾಗ ನೀವೇ ಔಷಧ ಸೇವಿಸುವ ಬದಲು ಸೂಕ್ತ ವೈದ್ಯರನ್ನು ಸಂಪರ್ಕಿಸಬೇಕು.
-ಡಾ| ಜನಾರ್ದನ್‌ ಕೆ., ವೈದ್ಯರು, ಬಂಟ್ಸ್‌ಹಾಸ್ಟೆಲ್‌

ಪ್ರಜಾ ಶೆಟ್ಟಿ

ಟಾಪ್ ನ್ಯೂಸ್

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

de

Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.