ಕೇಬಲ್‌ ಸಂಪರ್ಕಕ್ಕೆ ಅಧಿಕ ಶುಲ್ಕ: 13 ಸಾ. ರೂ. ದಂಡ


Team Udayavani, Jul 8, 2019, 9:54 AM IST

cable

ಮಂಗಳೂರು: ಕೇಬಲ್ ಸಂಪರ್ಕ ಒದಗಿಸುವ ಸ್ಯಾಟ್‌-1 ಸಂಸ್ಥೆ ಮಾಲಕರು ಚಾನೆಲ್‌ ಸಂಪರ್ಕಕ್ಕೆ ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ದ.ಕ.ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಯು ಆರೋಪಿಗೆ 13,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಅತ್ತಾವರ ವೈದ್ಯನಾಥ ನಗರದ ಲಕ್ಷ್ಮೀಕಾಂತ್‌ ಅವರು ಸ್ಯಾಟ್‌-1 ಕೇಬಲ್‌ ಸಂಸ್ಥೆಯ ಸಂಪರ್ಕ ಪಡೆದಿದ್ದರು. 300 ರೂ. ನಿಗದಿತ ಮೌಲ್ಯಕ್ಕೆ ತಮಗೆ ಇಷ್ಟದ ಚಾನೆಲ್‌ಗ‌ಳನ್ನು ಪಡೆದಿದ್ದರು. ಆದರೆ, ಇತ್ತೀಚೆಗೆ ಅವರು ಕ್ರಿಕೆಟ್‌ ಮ್ಯಾಚ್‌ ನೋಡಲು ಸ್ಟಾರ್‌ ವಾಹಿನಿ ವೀಕ್ಷಿಸಲು ಮುಂದಾದಾಗ ಆ ಚಾನೆಲ್‌ ದೊರಕುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಪರ್ಕ ಒದಗಿಸಿದ ಕೇಬಲ್‌ ಕಂಟ್ರಾಕ್ಟರ್‌ರನ್ನು ಸಂಪರ್ಕಿಸಿದಾಗ ಆ ಚಾನೆಲ್‌ಗೆ ಇನ್ನೂ ಹೆಚ್ಚುವರಿ 20 ರೂ. ನೀಡಬೇಕು ಎಂದು ಹೇಳಿದರು. ಹೆಚ್ಚುವರಿ 20 ರೂ. ನೀಡದ ಹಿನ್ನೆಲೆಯಲ್ಲಿ ಲಕ್ಷಿಕಾಂತ್‌ ಅವರ ಮನೆಗೆ ಕೇಬಲ್‌ ಸಂಪರ್ಕ ನೀಡಿರಲಿಲ್ಲ.

ಎಲ್ಲ ಚಾನೆಲ್‌ಗ‌ಳಿಗೆ ಒಟ್ಟು 300 ರೂ. ಪ್ಯಾಕೇಜ್‌ ನಿಗದಿಪಡಿಸಲಾಗಿದ್ದರೂ, ಅಕ್ರಮವಾಗಿ ಕೇಬಲ್‌ ಕಾಂಟ್ರಾಕ್ಟರ್‌ 20 ರೂ. ಹೆಚ್ಚು ವಸೂಲಿಗೆ ಮುಂದಾಗಿದ್ದರು ಎಂದು ಆರೋಪಿಸಿ ಗ್ರಾಹಕರ ವೇದಿಕೆಗೆ ವಕೀಲ ದೀನನಾಥ್‌ ಶೆಟ್ಟಿ ಮುಖಾಂತರ ದೂರು ಸಲ್ಲಿಸಿದ್ದು, ಸ್ಯಾಟ್‌-1 ಕೇಬಲ್‌ ಕಂಟ್ರಾಕ್ಟರ್‌ಗೆ ನೋಟಿಸ್‌ ನೀಡಲಾಗಿತ್ತು.

ದ.ಕ.ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ ನೀಡಿದ ನೋಟಿಸ್‌ಗೆ ಪ್ರಾರಂಭದಲ್ಲಿ ಮನ್ನಣೆ ನೀಡದೆ ಬಳಿಕ ಕೇಬಲ್‌ ಮಾಲಕರು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಗ್ರಾಹಕ ಲಕ್ಷಿಕಾಂತ್‌ಗೆ ಅನ್ಯಾಯ ಆಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಸ್ಯಾಟ್‌-1 ಕೇಬಲ್‌ ಮಾಲಕರು 300 ರೂ. ಪ್ಯಾಕೇಜ್‌ನಲ್ಲೇ ಸ್ಟಾರ್‌ ಟಿವಿ ಚಾನೆಲ್‌ ಅನ್ನು ಒದಗಿಸಬೇಕು ಹಾಗೂ ಪರಿಹಾರವಾಗಿ 10,000 ರೂ. ಮತ್ತು ನ್ಯಾಯಾಲಯದ ಶುಲ್ಕ 3,000 ರೂ. ನೀಡಬೇಕೆಂದು ಆದೇಶಿಸಿದೆ. ಈ ಪರಿಹಾರ ಮೊತ್ತವನ್ನು ಆದೇಶ ಜಾರಿಗೊಳಿಸಿದ ಒಂದು ತಿಂಗಳೊಳಗಾಗಿ ನೀಡಬೇಕೆಂದು ನ್ಯಾಯಾಲಯದ ಸೂಚನೆ ನೀಡಿದೆ.

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.