ಅನಾಥ ಸ್ಥಿತಿಯಲ್ಲಿ ಹೈಮಾಸ್ಟ್‌ ದೀಪ, ಪ್ರವೇಶ ದ್ವಾರದಲ್ಲಿ ಮರಣ ಗುಂಡಿ!


Team Udayavani, Oct 29, 2018, 12:38 PM IST

29-october-8.gif

ಸುಳ್ಯ : ನಗರದ ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣದ ಬಳಿ ನ.ಪಂ. ಹೈಮಾಸ್ಟ್‌ ದೀಪ ಕಂಬ ಕಿತ್ತೆಗೆದು ಮರು ಜೋಡಿಸದ ಕಾರಣ ಅನಾಥ ಸ್ಥಿತಿಯಲ್ಲಿ ಬಿದ್ದಿದೆ..!

ನಗರ ಪಂಚಾಯತ್‌ ವ್ಯಾಪ್ತಿಗೆ ಸೇರಿರುವ ಹೈಮಾಸ್ಟ್‌ ದೀಪವನ್ನು ಹಲವು ತಿಂಗಳ ಹಿಂದೆ ಕಾಮಗಾರಿ ನೆಪದಲ್ಲಿ ತೆರವುಗೊಳಿಸಿ, ಸನಿಹದ ಕಂಪೌಂಡ್‌ ಬಳಿ ಇಡಲಾಗಿತ್ತು. ಅದಾದ ಕೆಲ ದಿನಗಳಲ್ಲಿ ಅಲ್ಲಿ ನಡೆಸಲು ಉದ್ದೇಶಿಸಿದ ಪ್ರತಿಮೆ ನಿರ್ಮಾಣವನ್ನು ಖಾಸಗಿ ಬಸ್‌ ನಿಲ್ದಾಣ ಬಳಿಗೆ ಸ್ಥಳಾಂತರಿಸಲಾಯಿತು. ಕಾರಣ ಹೈಮಾಸ್ಟ್‌ ದೀಪ ಮತ್ತೆ ಅಳವಡಿಸಲು ಅವಕಾಶ ಒದಗಿತ್ತು.

ಆದರೆ ಏಳೆಂಟು ತಿಂಗಳು ಕಳೆದರೂ, ಅನಾಥ ಸ್ಥಿತಿಯಲ್ಲಿರುವ ಕಂಬಕ್ಕೆ ಮರು ಜನ್ಮ ಸಿಕ್ಕಿಲ್ಲ. ಬೆಂಗಳೂರು, ಪುತ್ತೂರು ಸೇರಿದಂತೆ ನಾನಾ ಭಾಗಕ್ಕೆ ಬಸ್‌ನಲ್ಲಿ ತೆರಳುವ ಜನರು ಬಸ್‌ ನಿಲ್ದಾಣದ ಪ್ರವೇಶ ದ್ವಾರದ ಬಳಿಯಲ್ಲಿನ ಈ ಹೈಮಾಸ್ಟ್‌ ದೀಪ ಕಂಬ ಬಳಿ ನಿಲ್ಲುತ್ತಾರೆ. ಅವರಿಗೆ ಬೆಳಕಿನ ವ್ಯವಸ್ಥೆಗೆ ಇದು ಸಹಕಾರಿ ಆಗಿತ್ತು.

ದೀಪ ತೆರವುಗೊಳಿಸಿದ ಮೇಲೆ ಇಲ್ಲಿ ಬಸ್‌ಗಾಗಿ ಕಾಯಲು ಅಸಾಧ್ಯವಾಗಿದೆ. ಬ್ಯಾಗ್‌ ಇನ್ನಿತ್ತರ ಬೆಲೆ ಸಾಮಗ್ರಿಗಳನ್ನು ಹಿಡಿದುಕೊಂಡು ಕತ್ತಲಲ್ಲಿ ನಿಲ್ಲಬೇಕಿದೆ. ಈ ಬಗ್ಗೆ ನ.ಪಂ. ಗಮನಕ್ಕೆ ತಂದರು ಏನು ಪ್ರಯೋಜನ ಆಗಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ. ನ.ಪಂ. ಸಾಮಾನ್ಯ ಸಭೆಗಳಲ್ಲಿ ಈ ವಿಚಾರ ಪ್ರಸ್ತಾಪಗೊಂಡಿದ್ದರೂ, ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ತೆರವುಗೊಳಿಸುವಾಗ ತೋರಿದ ಉತ್ಸಾಹ ಮರು ಜೋಡಣೆಗೆ ಕಂಡು ಬಂದಿಲ್ಲ. ಹೀಗಾಗಿ ಸಾವಿರಾರು ಮೌಲ್ಯದ ಕಂಬ ತುಕ್ಕು ಹಿಡಿಯುತ್ತಿದೆ. ಜತೆಗೆ ಪ್ರಯಾಣಿಕರು ಕತ್ತಲಲ್ಲಿ ನಿಲ್ಲುವಂತಾಗಿದೆ.

ಮರಣ ಗುಂಡಿ..! 
ಸುಳ್ಯ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳುವ ಪ್ರವೇಶ ದ್ವಾರದ ಬಳಿಯಲ್ಲಿನ ಚರಂಡಿ ಬಾಯ್ದೆರೆದು ಅಪಾಯ ಆಹ್ವಾನಿಸುತ್ತಿದೆ. ಬಸ್‌ ನಿಲ್ದಾಣದಿಂದ ನಗರದ ಮುಖ್ಯ ರಸ್ತೆಗೆ ಸಂಪರ್ಕ ಇರುವ ಚರಂಡಿಯ ಸ್ಲಾಬ್‌ ತೆರೆದಿದ್ದು, ರಾತ್ರಿ ವೇಳೆ ಕೊಂಚ ಯಾಮಾರಿದೂ ಪ್ರಾಣಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ.ಪಾದಚಾರಿಗಳು ಸ್ಲಾಬ್‌ ಮೇಲೆ ನಡೆದು ನಿಲ್ದಾಣ ಪ್ರವೇಶಿವುದುಂಟು. ನೂರಾರು ವಿದ್ಯಾರ್ಥಿಗಳು, ವಯಸ್ಕರು ಇಲ್ಲಿ ಓಡಾಡುತ್ತಾರೆ. ಅದಾಗ್ಯೂ ಸಂಬಂಧಪಟ್ಟವರು ಗಮನಕ್ಕೆ ಬಾರದಿರುವುದು ಅಚ್ಚರಿಯ ಸಂಗತಿ.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.