![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 6, 2019, 12:02 PM IST
ನೆಲ್ಯಾಡಿ: ಶಿರಡಿ ಘಾಟ್ ನ ಮಾರನಹಳ್ಳಿ ಸಮೀಪ ಗುಡ್ಡ ಕುಸಿತ ಸಂಭವಿಸಿದ್ದು, ಐದಾರು ಬಂಡೆ ಕಲ್ಲುಗಳು ರಸ್ತೆ ಬದಿಗೆ ಉರುಳಿ ಬಿದ್ದಿವೆ. ಇನ್ನು ಒಂದು ಬಂಡೆ ಕುಸಿದು ಬೀಳುವ ಹಂತದಲ್ಲಿದ್ದು, ಅಪಾಯಕಾರಿಯಾಗಿ ಗೋಚರಿಸಿದೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ ಎನ್ನಲಾಗಿದೆ.
ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಆದರೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಂಡೆ ಉರುಳಿ ಬಿದ್ದರೆ ಅನಾಹುತ ಉಂಟಾಗುವ ಸಾಧ್ಯತೆ ಇದೆ.
You seem to have an Ad Blocker on.
To continue reading, please turn it off or whitelist Udayavani.