Mangaluru ಕೋರ್ಡೆಲ್‌ ಚರ್ಚ್‌ ಪುಣ್ಯ ಕ್ಷೇತ್ರವಾಗಲಿ

ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವದಲ್ಲಿ ಬಿಷಪ್‌ ರೈ| ರೆ| ಡಾ| ಸಲ್ಡಾನ್ಹಾ

Team Udayavani, Sep 17, 2023, 11:52 PM IST

Mangaluru ಕೋರ್ಡೆಲ್‌ ಚರ್ಚ್‌ ಪುಣ್ಯ ಕ್ಷೇತ್ರವಾಗಲಿ

ಮಂಗಳೂರು: ಕುಲಶೇಖರದ ಕೋರ್ಡೆಲ್‌ ಚರ್ಚ್‌ (ಹೊಲಿಕ್ರಾಸ್‌ ಚರ್ಚ್‌) ಇದರ ಶತಮಾನೋತ್ತರ ಸುವರ್ಣ ಮಹೋತ್ಸವ ಸಂಭ್ರಮ ರವಿವಾರ ನಡೆಯಿತು.

ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಸಂಭ್ರಮದ ಬಲಿ ಪೂಜೆಯನ್ನು ನೆರವೇರಿಸಿದರು. ಮಂಗಳೂರು ಸಿಟಿ ವಲಯದ ಮುಖ್ಯ ಗುರು ವಂ| ಜೇಮ್ಸ್‌ ಡಿ’ ಸೋಜಾ, ಕೋರ್ಡೆಲ್‌ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಕ್ಲಿಫರ್ಡ್‌ ಫೆರ್ನಾಂಡಿಸ್‌, ಸಹಾಯಕ ಗುರುಗಳಾದ ವಂ| ಐವನ್‌ ಕೊರ್ಡರಿಯೋ ಮತ್ತು ವಂ| ಪಾವ್ಲ್ ಡಿ’ಸೋಜಾ ಮತ್ತು ಅತಿಥಿ ಗುರುಗಳು ಉಪಸ್ಥಿತರಿದ್ದರು.

ಬಿಷಪ್‌ ಸಲ್ಡಾನ್ಹಾ ಅವರು ದೇವರ ವಾಕ್ಯದ ಸಂದೇಶವನ್ನು ನೀಡಿ ಭಕ್ತರಿಗೆ ಪವಿತ್ರ ಶಿಲುಬೆಯ ಆಶೀರ್ವಾದ ಕೋರಿದರು. ಹಲವು ಧಾರ್ಮಿಕ ಸಹೋದರರು, ಧರ್ಮ ಭಗಿನಿಯರು, ಕುಲಶೇಖರ ಚರ್ಚ್‌ ಮತ್ತು ವಿವಿಧ ಚರ್ಚ್‌ಗಳ ಭಕ್ತರು ಭಾಗವಹಿಸಿದ್ದರು.

ಬಲಿಪೂಜೆಯ ಬಳಿಕ ಅಭಿನಂದನ ಸಮಾರಂಭ ನಡೆಯಿತು. ಕುಲಶೇಖರ ಚರ್ಚ್‌ನಲ್ಲಿ ಸೇವೆ ಸಲ್ಲಿಸಿದ ಧರ್ಮ ಗುರುಗಳು, ಸಹಾಯಕ ಗುರುಗಳು ಮತ್ತು ಚರ್ಚ್‌ನಿಂದ ಧರ್ಮ ಗುರುಗಳಾದವರು ಸೇರಿದಂತೆ ಒಟ್ಟು 103 ಮಂದಿಯನ್ನು ಸಮ್ಮಾನಿಸಲಾಯಿತು. ಬಿಷಪ್‌ ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಧರ್ಮಾಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರನ್ನು ಸಮ್ಮಾನಿಸಲಾಯಿತು.
ಬಿಷಪ್‌ ಅವರು ಮಾತನಾಡಿ, ಕುಲಶೇಖರ ಚರ್ಚ್‌ನಲ್ಲಿ ಸೇವೆ ಸಲ್ಲಿಸಿದ ಧರ್ಮ ಗುರುಗಳು ಮತ್ತು ಧಾರ್ಮಿಕ ವ್ಯಕ್ತಿಗಳ ಕಾರ್ಯ ಅಭಿನಂದನೀಯ. ಮುಂಬರುವ ದಿನಗಳಲ್ಲಿ ಪವಿತ್ರ ಶಿಲುಬೆಗೆ ಸಮರ್ಪಿಸಿದ ಈ ಚರ್ಚ್‌ ಪುಣ್ಯ ಕ್ಷೇತ್ರವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು. ಚರ್ಚ್‌ನ ಧರ್ಮಗುರು ವಂ| ಕ್ಲಿಫರ್ಡ್‌ ಫೆರ್ನಾಂಡಿಸ್‌ ಅವರು 150 ವರ್ಷಗಳ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

ಚರ್ಚ್‌ನ ಉಪಾಧ್ಯಕ್ಷರಾದ ರೂತ್‌ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್‌ ಡೆಸಾ, 21 ಆಯೋಗಗಳ ಸಂಯೋಜಕ ಡೋಲ್ಫಿ ಡಿ’ಸೋಜಾ, ಮಾಧ್ಯಮ ಸಂಯೋಜಕ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತ ರಿದ್ದರು. ರಿಚಾರ್ಡ್‌ ಆಲ್ವಾರಿಸ್‌ ನಿರೂಪಿ ಸಿದರು. ಸಹಾಯಕ ಗುರು ಐವನ್‌ ಕೊರ್ಡೆರಿಯೋ ವಂದಿಸಿದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.