ಹನಿಟ್ರ್ಯಾಪ್ ಪ್ರಕರಣ: ಐವರ ಬಂಧನ
Team Udayavani, Oct 27, 2017, 9:53 AM IST
ವಿಟ್ಲ: ಜಿಲ್ಲೆಯಾದ್ಯಂತ ಭೀತಿಯನ್ನು ಹುಟ್ಟಿಸಿದ್ದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸರ ತಂಡ ಮಾಣಿ ಜಂಕ್ಷನ್ನಲ್ಲಿ ಐದು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ವಿಟ್ಲ ಠಾಣೆ ವ್ಯಾಪ್ತಿಗೆ ಸೇರಿದ ಕುಡ್ತಮುಗೇರಿನಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಹನಿಟ್ರ್ಯಾಪ್ ತಂಡ ಕಾರು, ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಭಾರೀ ಕುತೂಹಲ ಕೆರಳಿಸಿತ್ತು ಮತ್ತು ಈ ತಂಡವನ್ನು ಪತ್ತೆಹಚ್ಚಲು ಪೊಲೀಸರು ವ್ಯಾಪಕ ಬಲೆ ಬೀಸಿದ್ದರು.
ತೊಕ್ಕೋಟು ಕೆ.ಸಿ. ರೋಡ್ ಕೋಮರಂಗಲ ಕ್ವಾರ್ಟರ್ಸ್ ನಿವಾಸಿ ಅಶ್ರಫ್ ಸಂಶೀರ (27), ಫರಂಗಿಪೇಟೆ ಅಮ್ಮೆಮ್ಮಾರ್ ಸಂದ ಬಳಿ ನಿವಾಸಿ ಝೈನುದ್ದೀನ್ (21), ತೊಕ್ಕೊಟ್ಟು ಉಳ್ಳಾಲ ಮಾರ್ಗತಳಿ ನಿವಾಸಿ ಮಹಮ್ಮದ್ ಇಕ್ಬಾಲ್ (27), ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಉಬೈದುಲ್ಲಾ (32), ಸಕಲೇಶಪುರ ಅರೇಹಳ್ಳಿ ಸಂತೋಷ ನಗರ ಮೂಲದ ಅಶ್ರಫ್ ಸಂಶೀರನ ಪತ್ನಿ ಫಝಾì ಯಾನೆ ಫಝಾìನಾ ಸುಮೈಯ್ನಾ (26) ಬಂಧಿತ ಆರೋಪಿಗಳು.
ಇವರಿಂದ ಒಂದು ಪಾಸ್ಪೋರ್ಟ್, 6 ಮೊಬೈಲ್, 2 ಕಾರು, 8 ಗ್ರಾಂ ಚಿನ್ನ, 7.5 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿಟ್ಲಪಟ್ನೂರು ಗ್ರಾಮದ ಪರ್ತಿಪ್ಪಾಡಿ ನಿವಾಸಿ ಮಹಮ್ಮದ್ ಹನೀಫ್ ಫೇಸ್ಬುಕ್ ಮೂಲಕ ಪರಿಚಯವಾದ ಯುವತಿ ಜತೆಗೆ ಚಾಟ್ ಮಾಡಿ, ಕ್ರಮೇಣ ಫೋನ್ ಮೂಲಕ ಕೆಲವು ತಿಂಗಳ ಹಿಂದೆ ಪರಿಚಯವಾಗಿತ್ತು. ತಾಯಿಗೆ ಆರೋಗ್ಯ ಸರಿ ಇಲ್ಲ ಎಂದು ಹಣ ಕೇಳಿ ಮನೆಗೆ ಬರ ಹೇಳಿದ ಯುವತಿ ಗೆಳತಿ ಜತೆ ಮುಡಿಪುವಿನಲ್ಲಿ ಹನೀಫ್ರನ್ನು ಭೇಟಿಯಾಗಲು ತಿಳಿಸಿದ್ದಳು. ತನ್ನ ಜತೆ ಬಂದಿದ್ದ ಗೆಳತಿಯನ್ನು ಕುಡ್ತಮುಗೇರು ಮನೆಗೆ ಕರೆದು ಕೊಂಡು ಹೋಗುವಂತೆ ಹೇಳಿ, ಬಳಿಕ ರಾತ್ರಿ ತಂಡದೊಂದಿಗೆ ಮನೆ ಮೇಲೆ ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.