ಅನಾರೋಗ್ಯ ಸ್ಥಿತಿ: ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪಾಣಾಜೆ ಗ್ರಾ.ಪಂ.
Team Udayavani, Apr 29, 2022, 3:07 PM IST
ಪಾಣಾಜೆ:ಆರ್ಲಪದವು ಮೇಲಿನ ಪೇಟೆಯ ಪ್ರಯಾಣಿಕರ ತಂಗುದಾಣದಲ್ಲಿ ಅನಾರೋಗ್ಯ ಒಳಗಾಗಿದ್ದು ಪ್ರಯಾಣಿಕನ್ನು ರಾತ್ರಿ ಉಪಚರಿಸಿ ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಎ.28ರಂದು ನಡೆದಿದೆ.
ಅನಾರೋಗ್ಯ ಒಳಗಾಗಿದ್ದ ವ್ಯಕ್ತಿ ಕೃಷ್ಣ ಎಂದು ಹೇಳುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ವಿಷಯ ತಿಳಿದು ಗ್ರಾ.ಪಂ.ಅಧ್ಯಕ್ಷೆ ಭಾರತಿ ಭಟ್ ಸಿ. ಯಚ್. ಬುಧವಾರ ರಾತ್ರಿ ಪತಿಯೊಂದಿಗೆ ವ್ಯಕ್ತಿ ಇರುವ ಆರ್ಲಪದವು ಮೇಲಿನ ಪೇಟೆಯ ಪ್ರಯಾಣಿಕರ ತಂಗುದಾಣಕ್ಕೆ ಬಂದು ಉಪಚರಿಸಿ ನೀರು,ಆಹಾರ ವನ್ನು ನೀಡಿದರು, ಸದಸ್ಯರು ಜೆತೆಗಿದ್ದರು.
ಗುರುವಾರ ಬೆಳಿಗ್ಗೆ ಅಧ್ಯಕ್ಷರು ಪಂಚಾಯತ್ ಪಿಡಿಒಗೆ ಮಾಹಿತಿ ನೀಡಿ ಅಂಬ್ಯುಲೆನ್ಸ್ ಗೆ ಬರಲು ತಿಳಿಸಿದರು.ಈ ಸಂದರ್ಭದಲ್ಲಿ ಹೊಯ್ಸಳ ವಾಹನ ಕೂಡ ಸ್ಥಳಕ್ಕೆ ಆಗಮಿಸಿ ವ್ಯಕ್ತಿಯ ಮಾಹಿತಿ ಕಲೆ ಹಾಕಿದೆ. ಹೆಚ್ಚಿನ ವಿವರವನ್ನು ನೀಡಲು ಅಸಾಧ್ಯವಾದ ಸ್ಥಿತಿಯಲ್ಲಿ ಆ ವ್ಯಕ್ತಿ ಇದ್ದರು.
ಊರಿನ ಬಗ್ಗೆ ಕೇಳಿದರೆ ಒಮ್ಮೆ ಧರ್ಮಸ್ಥಳ,ಕೋನಡ್ಕ,ನೇತ್ರಾವತಿ ಎಂದು ಹೇಳುತ್ತಿದ್ದಾನೆ.ಪಾಣಾಜೆ ಪಂಚಾಯತ್,ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ಸಿ ಯಚ್,ಸದಸ್ಯರಾದ ಸುಭಾಸ್ ಚಂಬರಕಟ್ಟ,ಜಯಶ್ರೀ ದೇವಸ್ಯ,ಕೃಷ್ಣಪ್ಪ ಪೂಜಾರಿ,ಪಿಡಿಒ ಚಂದ್ರಮತಿ,ಕಾರ್ಯದರ್ಶಿ ಆಶಾ,ಸಿಬ್ಬಂದಿಗಳು,ಆಶಾ ಕಾರ್ಯಕರ್ತರು,ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla: ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್
Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ
Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು
Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
MUST WATCH
ಹೊಸ ಸೇರ್ಪಡೆ
Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ
ರೈಸ್ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ
Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ
Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್
Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.