ವಸತಿ ಯೋಜನೆ ನೋಡಲ್‌ ಅಧಿಕಾರಿಗಳಿಗೆ 2 ವರ್ಷಗಳಿಂದ ಬಂದಿಲ್ಲ ವೇತನ !


Team Udayavani, Jun 3, 2018, 6:00 AM IST

rs.jpg

ಪುತ್ತೂರು: ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ನೋಡಲ್‌ ಅಧಿಕಾರಿಗಳಾಗಿ ವಿವಿಧ ವಸತಿ ಯೋಜನೆ
ಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಿಭಾಯಿಸುತ್ತಿರುವ 206 ಮಂದಿಗೆ 2 ವರ್ಷಗಳಿಂದ ಸಂಬಳವೇ ಸಿಕ್ಕಿಲ್ಲ…!

ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು 176 ತಾಲೂಕು ಹಾಗೂ 30 ಜಿಲ್ಲೆಗಳಿಗೆ ವಸತಿ ಯೋಜನೆಯ ನೋಡಲ್‌ ಅಧಿಕಾರಿಗಳನ್ನು 2011ರಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಡಾ| ಅಂಬೇಡ್ಕರ್‌ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಯೋಜನೆ, ಬಸವ ವಸತಿ ಸಹಿತ ಎಲ್ಲ ವಸತಿ ಯೋಜನೆಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಇವರಿಗೆ ನೀಡಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ
2015ರ ತನಕ ಇವರಿಗೆ ಸಮರ್ಪಕವಾಗಿ ಸಂಬಳವನ್ನೂ ನೀಡಲಾಗಿತ್ತು. 2015ರಲ್ಲಿ ಈ ವಸತಿ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್‌ ಅಧಿಕಾರಿಗಳನ್ನು ಗುತ್ತಿಗೆ ಆಧಾರ ವ್ಯವಸ್ಥೆಯಿಂದ ಹೊರಗುತ್ತಿಗೆಗೆ ಬದಲಿಸುವ ಪ್ರಯತ್ನ ಸರಕಾರದ ಮಟ್ಟದಲ್ಲಿ ನಡೆದಿದ್ದು, ಇದರ ವಿರುದ್ಧ ನೋಡಲ್‌ ಅಧಿಕಾರಿಗಳು ರಾಜ್ಯ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇವರ ಹೋರಾಟ ನ್ಯಾಯಾಲಯದ ಏಕ ಸದಸ್ಯ ಪೀಠದಲ್ಲಿ ವಿಫಲವಾಗಿದ್ದರೂ ಇದೀಗ ಇವರ ದೂರು ದ್ವಿಸದಸ್ಯ ಪೀಠದಲ್ಲಿದೆ. ಯಥಾಸ್ಥಿತಿಯನ್ನು ಕಾಯ್ದು ಕೊಳ್ಳುವಂತೆ ಆದೇಶವನ್ನೂ ನೀಡಲಾಗಿದೆ.

ಎಲ್ಲಿ ಎಡವಟ್ಟಾಯಿತು ?
ಹೊರಗುತ್ತಿಗೆ ಆಧಾರದಡಿ ನೇಮಕಾತಿಯನ್ನು ವಿರೋಧಿಸಿ ನೋಡಲ್‌ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಲು ಹತ್ತಿದ ಬಳಿಕ ಅವರ ಸಂಬಳವನ್ನು ತಡೆ ಹಿಡಿಯಲಾಯಿತು. ಕಾನೂನಾತ್ಮಕ ಹೋರಾಟ ನಡೆಸುತ್ತಲೇ ಈ 206 ಮಂದಿ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ ಸಂಬಳ ಇಲ್ಲದೇ ಕೆಲಸ ಮಾಡುವ ಅನಿವಾರ್ಯ ಸ್ಥಿತಿ ಇವರದ್ದಾಗಿದೆ.

ಈ ಮಧ್ಯೆ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಕೊಟ್ರೇಶ್‌ ಅವರು ಸಂಬಳ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿತ್ಯ ವಸತಿ ಯೋಜನೆಗಳ ಅನುಷ್ಠಾನ, ಅನುಮೋದನೆ, ಜಿಪಿಎಸ್‌ ಎಂದು ಓಡಾಡುವ ಇವರಿಗೆ ತಮ್ಮ ಬದುಕಿನ ಜಿಪಿಎಸ್‌ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಸಮಸ್ಯೆಗೆ ಸ್ಪಂದಿಸಲಿ
ರಾಜ್ಯವನ್ನು ಗುಡಿಸಲು ಮುಕ್ತವಾಗಿಸಲು 2011ರಿಂದ ದುಡಿಯುತ್ತಿದ್ದ ಈ ವರ್ಗದ ಸಮಸ್ಯೆಗೆ ಸರಕಾರ ತತ್‌ಕ್ಷಣ ಸ್ಪಂದಿಸಬೇಕಾಗಿದೆ. ನ್ಯಾಯಯುತ ಹೋರಾಟವನ್ನು ಮಾಡಲು ಮುಂದಾಗಿರುವ ಸಿಬಂದಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ನಿಲ್ಲಿಸುವ ಮೂಲಕ ಇವರ ಬದುಕಿಗೆ ಮತ್ತೆ ಚೈತನ್ಯ ನೀಡುವ ಪ್ರಕ್ರಿಯೆಗೆ ಮುಂದಾಗಬೇಕಾಗಿದೆ.

ದ. ಕ. ಜಿಲ್ಲೆಯಲ್ಲೂ ರಾಜೀವ್‌ ಗಾಂಧಿ ಗ್ರಾಮೀಣ ವಸತಿ  ನಿಗಮದ ನೋಡಲ್‌ ಅಧಿಕಾರಿಗಳಾಗಿ 6 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಜಿ.ಪಂ. ಆಡಳಿತ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯದಲ್ಲಿ ಇವರಿಗೆ ನಿರ್ಮಿತಿ ಕೇಂದ್ರದ ಮೂಲಕ ವೇತನ ನೀಡಲಾಗುತ್ತಿತ್ತು. ನಿಗಮ ಹಾಗೂ ನೋಡಲ್‌ ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿದೆ. ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. 
– ಡಾ| ಎಂ.ಆರ್‌. ರವಿ
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.