ಪಿಲಿಕುಳ ಕಂಬಳ ವಿಚಾರದಲ್ಲಿ ಶಾಸಕರ ಕಡೆಗಣನೆ; ದ.ಕ ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಶಾಸಕ ಗರಂ
Team Udayavani, Sep 6, 2024, 4:50 PM IST
ಮಂಗಳೂರು: ಸರಕಾರಿ ಅನುದಾನದಲ್ಲಿ ಮಾಡುವ ಪಿಲಿಕುಳ ಕಂಬಳ ಆಯೋಜನೆಯಲ್ಲಿ ಸ್ಥಳೀಯ ಶಾಸಕರನ್ನು ದ.ಕ ಜಿಲ್ಲಾಧಿಕಾರಿಯವರು ಸಂಪೂರ್ಣವಾಗಿ ಪರಿಗಣನೆ ಮಾಡದೆ ಅವಮಾನ ಮಾಡಿದ್ದಾರೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು, ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ ಜಿಲ್ಲಾ ಕಂಬಳ ಸಮಿತಿಯ ನಿರ್ಧಾರದ ಪ್ರಕಾರ ಪಿಲಿಕುಳದಲ್ಲಿಯೂ ಕಂಬಳ ಇದೆ ಎಂದು ಗೊತ್ತಾಯಿತು. ಕಂಬಳ ಸಮಿತಿಯ ಅಧ್ಯಕ್ಷ ಆಯಾ ಕ್ಷೇತ್ರದ ಶಾಸಕನೇ ಆಗಬೇಕು ಎಂದು ಪ್ರೊಟೋಕಾಲ್ ಇದೆ, ಕಳೆದ ನಾಲ್ಕನೇ ತಾರೀಕಿಗೆ ಮೀಟಿಂಗ್ ಆಯ್ತು, ಅದರ ಬಗ್ಗೆಯೂ ನನಗೆ ಮಾಹಿತಿ ನೀಡಲಿಲ್ಲ.
ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕಾದ ಸರಕಾರಿ ನೆಲೆಯ ಪಿಲಿಕುಳ ಕಂಬಳದ ಬಗ್ಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಯಾವುದೇ ಮಾಹಿತಿ ನೀಡದೆ ಹಾಗೂ ನನ್ನನ್ನು ನಿರ್ಲಕ್ಷಿಸಿ ಸಭೆ, ಪೂರ್ವತಯಾರಿ ನಡೆಸಿದ್ದಾರೆ. ಈ ಹಿಂದೆಯೂ ಎಂಆರ್ ಪಿಎಲ್ 4 ನೇ ಹಂತದ ವಿಸ್ತರಣೆ, ಅಂತಾರಾಷ್ಟ್ರೀಯ ಸರ್ಫಿಂಗ್ ಪಂದ್ಯಾವಳಿ, ವಿಮಾನ ನಿಲ್ದಾಣದಿಂದ ಮಳೆ ಅನಾಹುತ ಆದಾಗಲೂ ನನ್ನ ಗಮನಕ್ಕೆ ತಾರದೆ ಜಿಲ್ಲಾಧಿಕಾರಿಗಳು ಸಭೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಮೂಲಕ ಎಲ್ಲಾ ಹಂತಗಳಲ್ಲೂ ನನ್ನನ್ನು ನಿರ್ಲಕ್ಷಿಸಿ, ಅವಮಾನ ಮಾಡಿದ ಜಿಲ್ಲಾಧಿಕಾರಿಯವರ ವಿರುದ್ದ ಹಕ್ಕುಚ್ಯುತಿ ಮಂಡಿಸಲಾಗುವುದು. ಸ್ಪೀಕರ್, ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ದೂರು ನೀಡಲಾಗಿದೆ. ಹಾಗೂ ಬಿಜೆಪಿ ಶಾಸಕರ ನೇತೃತ್ವದಲ್ಲಿ ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರಿಗೆ ರಾಜಕೀಯ ಆಸಕ್ತಿ ಇರುವುದಾದರೆ ಸಸಿಕಾಂತ್ ಸೆಂಥಿಲ್ ಅವರಂತೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಸೇರಲಿ ಎಂದು ಹೇಳಿದ ಕೋಟ್ಯಾನ್ ಅವರು, ನಾನು ಹಿಂದುಳಿದ ವರ್ಗದ ಎಂಎಲ್ ಎ ಎಂಬ ಕಾರಣಕ್ಕೆ ಜಿಲ್ಲಾಧಿಕಾರಿಯವರು ನನಗೆ ಅವಮಾನ ಮಾಡುತ್ತಿದ್ದಾರಾ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ವೇಳೆ ಶಾಸಕರಾದ ವೇದವ್ಯಾಸ ಕಾಮತ್, ಡಾ। ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ: Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್ಸಿ ನ್ಯಾಯಾಲಯ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.