![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 25, 2021, 3:51 PM IST
ಮೂಡುಬಿದಿರೆ : ಕಲ್ಲಮುಂಡ್ಕೂರು ಪಿದ್ಮಲೆಯ ಗುಡ್ಡಗಾಡು ಪ್ರದೇಶದ ಸುಮಾರು ಮೂವತ್ತು ಎಕರೆ ಜಾಗದಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಶಾಮಕ ದಳದ ನೀರಿನ ಟ್ಯಾಂಕರ್ ಗಳ ಗಾಲಿಗಳು ಸವೆದು ಹೋಗಿ ಹರಿದುಕೊಂಡಿರುವ ಕಾರಣ ಬೆಂಕಿ ಇರುವಲ್ಲಿಗೆ ವಾಹನ ಹೋಗಲಾಗುತ್ತಿಲ್ಲ ಎನ್ನಲಾಗಿದೆ. ಇದು ಮೀಸಲು ಅರಣ್ಯವಾಗಿರುವುದರಿಂದ ಕಲ್ಲಮುಂಡ್ಕೂರು ಮತ್ತು ತೆಂಕಮಿಜಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 200 ಎಕ್ರೆ ಯಲ್ಲಿ ಹರಡಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ಅರಣ್ಯ ಇಲಾಖೆಗೂ ಲಭಿಸಿದ್ದು ಡಿಆರ್ ಎಫ್ ಓ ಸಹಿತ ಸಿಬಂದಿ ಗಳು, ಅಗ್ನಿ ಶಾಮಕರು, ವಿಶೇಷವಾಗಿ ಊರವರು ಬೆಂಕಿ ಆರಿಸಲು ಹರಸಾಹಸ ಪಡುತ್ತಿದ್ದಾರೆ.
ಇಲ್ಲಿಗೆ ಬಂದಿರುವ ಅಗ್ನಿಶಾಮಕ ದಳದ ಟ್ಯಾಂಕರ್ ನ ಟಯರ್ ಗಳು ನಡುವಲ್ಲೇ ಬಾಯಿ ಬಿಟ್ಟು ಕೊಂಡಿವೆ, 4,500 ಲೀ. ನೀರನ್ನು ಹೀರಿಕೊಂಡ ಈ ಟ್ಯಾಂಕರ್ ನ ಚಲಾವಣೆ ಬಹಳ ರಿಸ್ಕ್ ಎನ್ನಲಾಗುತ್ತಿದೆ. ಈ ಟ್ಯಾಂಕರ್ ಪುತ್ತೂರಿನದೆಂದೂ ಮೂಡುಬಿದಿರೆ ಗೆ ಬಂದಿದ್ದ ಹೊಸ ಟ್ಯಾಂಕರ್ ಪುತ್ತೂರಿಗೆ ಹೋಗಿದೆಯೆಂದೂ ಹೇಳಲಾಗುತ್ತಿದೆ.
ಅರಣ್ಯ ಇಲಾಖೆಯವರು ಹೇಳುವಂತೆ “ಅಕೇಶಿಯ ನೆಟ್ಟಿರುವಲ್ಲಿ , ಹುಲ್ಲು ಬೆಳೆದಲ್ಲಿ ಈ ರೀತಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ. ಇಲಾಖಾ ಸಿಬಂದಿ, ಮೂಡುಬಿದಿರೆ ಅಗ್ನಿಶಾಮಕದಳದವರು ಸ್ಥಳದಲ್ಲಿದ್ದು ಪರಿಸ್ಥಿತಿ ಯನ್ನು ನಿಭಾಯಿಸುತ್ತಿದ್ದಾರೆ” ಎಂದರು.
You seem to have an Ad Blocker on.
To continue reading, please turn it off or whitelist Udayavani.