Indira Hospital; ಉತ್ತಮ ಸಿಬಂದಿಯಿಂದ ಆಸ್ಪತ್ರೆ ಜನಸ್ನೇಹಿ: ದಿನೇಶ್ ಗುಂಡೂರಾವ್
ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ
Team Udayavani, Aug 16, 2024, 12:04 AM IST
ಮಂಗಳೂರು: ಆಸ್ಪತ್ರೆ ಯೊಂದು ಯಶಸ್ವಿ ಹಾಗೂ ಜನಸ್ನೇಹಿ ಎನ್ನಿಸಿಕೊಳ್ಳಬೇಕಾದರೆ ಶುಶ್ರೂಷೆ, ಆರೈಕೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಅಳವಡಿಕೆ ಜತೆಗೆ ಸಹಾನುಭೂತಿ ಇರುವ ಸಿಬಂದಿ, ವೈದ್ಯರ ತಂಡವೂ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಸಂಭ್ರಮಾ ಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಸಂಸ್ಥೆಯ 25ರ ಸಾಧನೆ ಎಂದರೆ ಐತಿಹಾಸಿಕ ದಿನ, ಡಾ| ಸಯ್ಯದ್ ನಿಜಾಮುದ್ದೀನ್ ಅವರು ತಮ್ಮ ಬದ್ಧತೆಯಿಂದ ಅವರ ತಂದೆಯವರ ಆಶೀರ್ವಾದ, ಕುಟುಂಬದ ಸಹಕಾರ ದಿಂದ ಈ ದೊಡ್ಡ ಸಂಸ್ಥೆ ಕಟ್ಟಿದ್ದಾರೆ. ಸಂಸ್ಥೆ ಎಂದರೆ ಕಟ್ಟಡವಲ್ಲ, ಸೇವಾ ಮನೋಭಾವದ ಸಿಬಂದಿ ಮುಖ್ಯ, ಅಂತಹ ಸಿಬಂದಿ, ವೈದ್ಯರ ತಂಡವನ್ನು ರಚಿಸಿ ಯಶಸ್ವಿ ಯಾಗಿದ್ದಾರೆ, ಹಾಗಾಗಿ ಸಂಸ್ಥೆ ನೂರು ವರ್ಷ ಯಶಸ್ವಿಯಾಗಿ ಪೂರೈಸಲಿದೆ ಎಂದರು.
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇಂದಿರಾ ಆಸ್ಪತ್ರೆಯ ನಿರ್ಮಾಣ ಮೂಲಕ ಮಂಗಳೂರಿನ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಿಕ್ಕಿದಂತಾಗಿದೆ ಎಂದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಆಸ್ಪತ್ರೆಯ ರಜತ ವರ್ಷದ ಸಂದರ್ಭದಲ್ಲಿ ಆಡಳಿತವು, ಆಸ್ಪತ್ರೆಯ ಯಶಸ್ಸಿನ ಕಾರಣಕರ್ತರಾದ ಸಿಬಂದಿ, ವೈದ್ಯರನ್ನು ಗುರುತಿಸಿ ಗೌರವಿಸಬೇಕು ಎಂದು ಮನಗಂಡಿರುವುದು ಶುಭಸೂಚಕ ಎಂದರು. ಇಂದಿರಾ ಆಸ್ಪತ್ರೆ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ| ಸಯ್ಯದ್ ನಿಜಾಮುದ್ದೀನ್ ಸ್ವಾಗತಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಯೆನಪೊಯ ವಿವಿ ಕುಲಪತಿ ಯೇನಪೊಯ ಅಬ್ದುಲ್ಲ ಕುಂಞ ಶುಭಹಾರೈಸಿದರು.
ಸಯ್ಯದ್ ಝೊರಾನುದ್ದೀನ್, ಇಂದಿರಾ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ| ತಂಗಂ ವರ್ಗಿàಸ್ ಜೋಶ್ವ, ಡಾ|ಮಹಮ್ಮದ್ ಇಸ್ಮಾಯಿಲ್, ಡಾ| ಮುನೀರ್ ಅಹಮದ್, ಡಾ| ಜಮೀಲಾ, ಡಾ| ವಿಜಯಗೋಪಾಲ್, ಡಾ| ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು. ಸಂಸ್ಥೆಯ ವೈದ್ಯರು ಹಾಗೂ ಸಿಬಂದಿಯನ್ನು ಅವರ ಸೇವೆಗಾಗಿ ಗಣ್ಯರು ಗೌರವಿಸಿದರು. ಹೆರಾ ಪಿಂಟೊ, ಸಾಹಿಲ್ ಜಹೀರ್ ನಿರೂಪಿಸಿದರು.
25 ವರ್ಷಗಳ ಹೆಜ್ಜೆಗುರುತು
ಇಂದಿರಾ ಆಸ್ಪತ್ರೆಯು ಫಳ್ನೀರಿನಲ್ಲಿ 1999ರ ಆ.15ರಂದು ಆರಂಭವಾಗಿದ್ದು, ಅಂದಿನಿಂದ ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವ ಮೂಲಕ ಹೆಸರಾಗಿದೆ. 150 ಹಾಸಿಗೆಯ ಸೇವೆ, ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸಹಿತ ವಿಶಾಲವಾದ ಸೇವೆಗಳನ್ನು ಒದಗಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.