ಕಾಸರಗೋಡಿನ ಶಾಲೆಯಲ್ಲಿ ನವಭಾಷೆಗಳ ಕಲರವ

ಬಹುಭಾಷಾ ಪ್ರೀತಿ

Team Udayavani, Jan 10, 2020, 6:30 AM IST

44

ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮಾತೃಭಾಷೆಯ ಜತೆಗೆ ಹಿಂದಿ, ಇಂಗ್ಲಿಷ್‌ ಕಲಿಯುವುದು ಸಾಮಾನ್ಯ. ಆದರೆ ಕಾಸರಗೋಡು ಸಮೀಪದ ಪಾಂಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ, ತುಳು, ಕೊಂಕಣಿ, ಮರಾಠಿ ಸೇರಿದಂತೆ ಸುಮಾರು ಒಂಬತ್ತು ಭಾಷೆಗಳ ಪರಿಚಯ ಮಾಡಿಕೊಡಲಾಗುತ್ತಿದೆ.

ಹಳ್ಳಿ ಪ್ರದೇಶದಲ್ಲಿರುವ ಪಾಂಡಿ ಶಾಲೆಯಲ್ಲಿ ಅಸೆಂಬ್ಲಿ ವೇಳೆ ತುಳು, ಕನ್ನಡ, ಮರಾಠಿ, ಕೊಂಕಣಿ, ಅರೇಬಿಕ್‌, ಮಲಯಾಳ, ಹಿಂದಿ, ಇಂಗ್ಲಿಷ್‌, ಬ್ಯಾರಿ ಭಾಷೆಯ ಸೊಗಡು ಹರಿಯುತ್ತದೆ. ನಾರಾಯಣ ದೇಲಂಪಾಡಿ ಮುಖ್ಯ ಶಿಕ್ಷಕರಾಗಿದ್ದ ವೇಳೆ ವಿದ್ಯಾರ್ಥಿಗಳ ವಿಕಸನಕ್ಕಾಗಿ ಈ “ಕ್ಲಾಸ್‌ ಅಸೆಂಬ್ಲಿ’ ಎಂಬ ವಿನೂತನ ಯೋಜನೆ ಆರಂಭಿಸಿದ್ದರು.

ಈಗ ವಾರದಲ್ಲಿ ಎರಡು ದಿನ, ಸೋಮವಾರ ಮತ್ತು ಗುರುವಾರ ಶಾಲೆ ಯಲ್ಲಿ 9ಕ್ಕೂ ಹೆಚ್ಚು ಭಾಷೆ ಗಳನ್ನು ಪರಿಚಯ ಮಾಡಿಕೊಡ ಲಾಗು ತ್ತಿದೆ. ಇಲ್ಲಿ 12ರ ವರೆಗೆ ತರಗತಿ ಗಳು ಇವೆಯಾದರೂ ಈ ಚಟು ವಟಿಕೆ ಯನ್ನು 1-10ನೇ ತರಗತಿಯ ಮಕ್ಕಳಿಗೆ ಮಾತ್ರ ನಡೆಸಲಾಗುತ್ತಿದೆ. ಬೆಳಗ್ಗಿನ ಪ್ರಾರ್ಥನೆ ಸಮಯದಲ್ಲಿ ಸುಮಾರು 12 ವಿದ್ಯಾರ್ಥಿಗಳು ಎದುರು ನಿಂತು ಒಂದೊಂದು ಭಾಷೆಯಲ್ಲಿ ಗೀತಾ ವಾಚನ, ವಾರ್ತೆಗಳು, ಪುಸ್ತಕ ಪರಿಚಯ, ಚಿಂತನೆ, ದಿನ ವಿಶೇಷ ಇತ್ಯಾದಿ ನಡೆಸುತ್ತಾರೆ. ಸಾಮಾನ್ಯ ಜ್ಞಾನ ಪ್ರಶ್ನೆಗಳನ್ನು ಕೇಳಿ ಸರಿಯುತ್ತರ ನೀಡಿದವರಿಗೆ ಬಹುಮಾನ ನೀಡಲಾಗುತ್ತದೆ. ಪ್ರತೀ ಬಾರಿ ತರಗತಿ, ವಿದ್ಯಾರ್ಥಿಗಳು ಬದಲಾಗುತ್ತಾರೆ.

ಹಳ್ಳಿಗಾಡಿನ ಶಾಲೆ
ಪಾಂಡಿ ಪ್ರೌಢಶಾಲೆಯು ಕಾಸರಗೋಡಿನಿಂದ ಸುಮಾರು 40 ಕಿ.ಮೀ., ಅಡೂರಿನಿಂದ ಸುಮಾರು 6 ಕಿ.ಮೀ. ದೂರದಲ್ಲಿದೆ. ಮುಖ್ಯ ಶಿಕ್ಷಕರಾಗಿದ್ದ ನಾರಾಯಣ ದೇಲಂಪಾಡಿ ಆರಂಭಿಸಿದ ಚಟುವಟಿಕೆಗಳು ಶಾಲೆಯ ಸ್ವರೂಪವನ್ನೇ ಬದಲಾಯಿಸಿವೆ. ಈಗ 1ರಿಂದ 10ರ ವರೆಗೆ 350ಕ್ಕೂ ಮಿಕ್ಕಿ  ವಿದ್ಯಾರ್ಥಿಗಳಿದ್ದಾರೆ.  ಕನ್ನಡ ಮತ್ತು ಮಲೆಯಾಳ ಭಾಷೆಗಳಲ್ಲಿ ಶಿಕ್ಷಣ ನೀಡ ಲಾಗುತ್ತಿದೆ.

ಆಟಿ ಆಚರಣೆ ಇಲ್ಲಿ ವಿಶೇಷ
ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಮಹತ್ವವಿದೆ. ಆ ವೇಳೆ ಪಾಂಡಿ ಶಾಲೆಯಲ್ಲೂ ಹಬ್ಬದ ಕಳೆ. ವಿದ್ಯಾರ್ಥಿಗಳು ತಂತಮ್ಮ ಮನೆಗಳಿಂದ ವಿವಿಧ ತಿನಿಸುಗಳನ್ನು ತಯಾರಿಸಿ ತರುತ್ತಾರೆ. ಸುಮಾರು 200ಕ್ಕೂ ಮಿಕ್ಕಿ ತಿನಿಸುಗಳಿರುವ ಸಹಭೋಜನವನ್ನು ಎಲ್ಲರೂ ಸೇರಿ ಸವಿಯುತ್ತಾರೆ. ಮಧ್ಯಾಹ್ನದ ಬಿಸಿಯೂಟದ ಜತೆಗೆ ಬೆಳಗ್ಗೆ ಉಪಾಹಾರವಿದೆ. ಇಡ್ಲಿ- ಸಾಂಬಾರ್‌, ವಡಾ, ಹೆಸುರುಕಾಳು ಒಗ್ಗರಣೆ ಇತ್ಯಾದಿ ದಿನಕ್ಕೊಂದರಂತೆ ವಿವಿಧ ಪೌಷ್ಟಿಕ ತಿನಿಸುಗಳು ಇರುತ್ತವೆ. ಸ್ಥಳೀಯ ದೇಲಂಪಾಡಿ ಗ್ರಾ.ಪಂ. ಇದಕ್ಕೆ ಕೈಜೋಡಿಸಿದೆ.

ನಾನು ಮುಖ್ಯ ಶಿಕ್ಷಕನಾಗಿದ್ದಾಗ ಸ್ಥಳೀಯರ ಸಹಕಾರದಿಂದ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕ್ಲಾಸ್‌ ಅಸೆಂಬ್ಲಿ ಪರಿಚಯ ಮಾಡಿಕೊಡಲಾಯಿತು. ಇಲ್ಲಿ ವಿದ್ಯಾರ್ಥಿಗಳೇ ಸಹಪಾಠಿಗಳಿಗೆ ವಿವಿಧ ಭಾಷೆಗಳ ಪರಿಚಯ ಮಾಡಿಕೊಡುತ್ತಾರೆ.
– ನಾರಾಯಣ ದೇಲಂಪಾಡಿ, ಜಿಲ್ಲಾ ಕಾರ್ಯಕ್ರಮಾಧಿಕಾರಿ, ಸಮಗ್ರ ಶಿಕ್ಷಾ ಕೇರಳ

ಕರ್ನಾಟಕ- ಕಾಸರಗೋಡು ಗಡಿನಾಡಿನ ಶಾಲೆಗಳಲ್ಲಿ ಸಾಮಾನ್ಯವಾಗಿ ಕನ್ನಡ, ಹಿಂದಿ, ಮಲೆಯಾಳಂ ಭಾಷೆಗಳ ಪರಿಚಯ ಮಾಡಲಾಗುತ್ತದೆ. ಆದರೆ ಪಾಂಡಿ ಶಾಲೆಯಲ್ಲಿ ವಿಶೇಷ ಎಂಬಂತೆ ಏಳು ಭಾಷೆಗಳನ್ನು ಪರಿಚಯಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಮೂರು ವರ್ಷಗಳಿಂದ ಫಲಿತಾಂಶ ಮತ್ತು ವಿದ್ಯಾರ್ಥಿಗಳ ಸಾಧನೆಯ ದೃಷ್ಟಿಯಿಂದ ಶಾಲೆ ಪ್ರಗತಿ ಸಾಧಿಸಿದೆ.
– ನಂದಿಕೇಶ್‌, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ

ವಿದ್ಯಾರ್ಥಿಗಳಿಗಾಗಿ ಸ್ಕೂಲ್‌ ರೇಡಿಯೋ
ಸ್ವಲ್ಪ ಸಮಯದಿಂದೀಚೆಗೆ ಸ್ಕೂಲ್‌ ರೇಡಿಯೋ “ಪಾಂಡಿ ಸ್ಪಂದನ್‌ 11032′ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಅಂಜಿಕೆಯಿಲ್ಲದೆ ಎಲ್ಲರ ಮುಂದೆ ಮಾತನಾಡಬೇಕು ಎಂಬುದು ಉದ್ದೇಶ. ಶಾಲೆಯಲ್ಲಿ ಸುಮಾರು 20ಕ್ಕೂ ಮಿಕ್ಕಿ ಕೊಠಡಿಗಳಿದ್ದು, ಎಲ್ಲ ಕೊಠಡಿಗಳಿಗೂ ಸೌಂಡ್‌ ಬಾಕ್ಸ್‌ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ರೇಡಿಯೋ ಮಾದರಿಯಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಾರೆ.

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.