ಕೈಗೂಡುವುದೇ ಪಾಲ್ತಾಡಿ ನೂತನ ಗ್ರಾ.ಪಂ. ಬೇಡಿಕೆ?


Team Udayavani, Aug 12, 2018, 11:42 AM IST

12-agust-6.jpg

ಸವಣೂರು : ಸವಣೂರು ಗ್ರಾ.ಪಂ. ವ್ಯಾಪ್ತಿಕ್ಕೊಳಪಟ್ಟಿರುವ ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ. ಮಾಡಬೇಕು ಎನ್ನುವ ಬೇಡಿಕೆ ಈಡೇರುವುದೆಂದು? ಈ ಬಾರಿಯಾದರೂ ಈಡೇರಬಹುದು ಎನ್ನುವ ಆಶಾಭಾವನೆ ಪಾಲ್ತಾಡಿ ಗ್ರಾಮಸ್ಥರದ್ದು. ಕಳೆದ ಬಾರಿ ಗ್ರಾಮ ಪಂಚಾಯತ್‌ ಪುನರ್ವಿಂಗಡನೆ ಸಮಯದಲ್ಲಿಯೇ ಗ್ರಾಮಸ್ಥರಿಂದ ಪ್ರತ್ಯೇಕ ಗ್ರಾ.ಪಂ.ನ ಬೇಡಿಕೆ ವ್ಯಕ್ತವಾಗಿತ್ತು. ಬಳಿಕ ಗ್ರಾಮಸ್ಥರು ಕಂದಾಯ ಇಲಾಖೆಯ ಸಚಿವರಿಗೆ, ಗ್ರಾ.ಪಂ. ಪುನರ್‌ ವಿಂಗಡನ ಸಮಿತಿಗೆ, ಇಲಾಖೆಯ ನಿರ್ದೇಶಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಪ್ರತ್ಯೇಕ ಗ್ರಾ.ಪಂ. ಕನಸು ಕನಸಾಗಿಯೇ ಉಳಿದಿದೆ.

580 ಕುಟುಂಬಗಳಿವೆ
ಪಾಲ್ತಾಡಿ ಗ್ರಾಮದ ಒಟ್ಟು ವಿಸ್ತೀರ್ಣ 2668.10 ಎಕರೆ ಆಗಿದ್ದು, ಒಟ್ಟು 580 ಕುಟುಂಬಗಳು ವಾಸ್ತ ವ್ಯ ವಿವೆ. 2011ರ ಜನಗಣತಿಯ ಪ್ರಕಾರ 2,838 ಜನಸಂಖ್ಯೆ ಇದೆ. ಇದರಲ್ಲಿ 753 ಪರಿಶಿಷ್ಟ ಜಾತಿ, 220 ಪರಿಶಿಷ್ಟ ಪಂಗಡ, 1,865 ಮಂದಿ ಇತರರು ಇದ್ದಾರೆ. 2,191 ಮಂದಿ ಮತದಾರರಿದ್ದಾರೆ. 2 ವಾರ್ಡ್‌ಗಳನ್ನು ಹೊಂದಿದ್ದು, 8 ಗ್ರಾ.ಪಂ. ಸದಸ್ಯರಿದ್ದಾರೆ.

ವಿವಿಧ ಸೌಕರ್ಯಗಳಿವೆ
ಪಾಲ್ತಾಡಿ, ಅಂಕತ್ತಡ್ಕ, ಮಂಜುನಾಥ ನಗರದಲ್ಲಿ ಸ.ಹಿ.ಪ್ರಾ. ಶಾಲೆ, ಚೆನ್ನಾವರದಲ್ಲಿ ಕಿ.ಪ್ರಾ. ಶಾಲೆ ಇದೆ. ಮಂಜುನಾಥ ನಗರದಲ್ಲಿ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಂಕತ್ತಡ್ಕ, ಮಂಜುನಾಥ ನಗರ, ಚೆನ್ನಾವರ, ಪಾಲ್ತಾಡಿ, ಉಪ್ಪಳಿಗೆಯಲ್ಲಿ ಅಂಗನವಾಡಿ ಕೇಂದ್ರಗಳಿವೆ. ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಯೂ ಪಾಲ್ತಾಡಿಯ ಅಂಕತ್ತಡ್ಕದಲ್ಲಿ ಇದೆ.ಅಂಕತ್ತಡ್ಕದಲ್ಲಿ ಕೊಳ್ತಿಗೆ ಸಹಕಾರಿ ಸಂಘದ ಹಾಗೂ ಮಂಜುನಾಥನಗರದಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿ ಇದೆ.

ಸೂಕ್ತ ನಿವೇಶನವೂ ಇದೆ
ಚೆನ್ನಾವರ, ಅಂಕತ್ತಡ್ಕದಲ್ಲಿ ಮಸೀದಿ, ಮದ್ರಸ ಇವೆ. ಮಂಜುನಾಥ ನಗರ, ಪಾದೆಬಂಬಿಲ, ಅಲ್ಯಾಡಿಯ ಭಜನ ಮಂದಿರಗಳಿವೆ. ಮಂಜುನಾಥ ನಗರದಲ್ಲಿ ಸಿದ್ಧಿವಿನಾಯಕ ಸಭಾಭವನ ಹಾಗೂ ಸುವರ್ಣ ಗ್ರಾಮ ಯೋಜನೆಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನವೂ ಇದೆ. ದೇವಸ್ಥಾನ, ದೈವಸ್ಥಾನಗಳಿದೆ. ಬಂಬಿಲ ಮತ್ತು ಉಪ್ಪಳಿಗೆಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘವಿದೆ. ಯುವಕ ಮಂಡಲ, ಯುವತಿ ಮಂಡಲ ಸಹಿತ ವಿವಿಧ ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳೂ ಇವೆ. ಗ್ರಾ.ಪಂ.ಗೆ ಸೂಕ್ತವಾದ ನಿವೇಶನವೂ ಪಾಲ್ತಾಡಿ ಗ್ರಾಮದಲ್ಲಿದೆ. ಒಟ್ಟಿನಲ್ಲಿ ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕೆನ್ನುವ ಬೇಡಿಕೆ ಪ್ರಬಲವಾಗಿದೆ.

ಕೊನೆ ಘಳಿಗೆಯಲ್ಲಿ ಕೈತಪ್ಪಿತು
ಕಳೆದ ಬಾರಿ ಗ್ರಾ.ಪಂ. ಪುನರ್‌ ವಿಂಗಡನೆಯ ಸಂದರ್ಭ ಪಾಲ್ತಾಡಿ ಗ್ರಾ.ಪಂ. ಅನ್ನು ನೂತನ ಗ್ರಾ.ಪಂ. ಆಗಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆಸಲಾಗಿದೆ. ಕೊನೆ ಗಳಿಗೆಯಲ್ಲಿ ಕೆಲ ವ್ಯತ್ಯಾಸಗಳಿಂದ ತಪ್ಪಿ ಹೋಯಿತು. ಮುಂದಿನ ಬಾರಿಯಾದರೂ ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎ.ಎಸ್‌. ರಝಾಕ್‌ ಅಂಕತ್ತಡ್ಕ ಹೇಳಿದ್ದಾರೆ.

ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಬೇಕೆಂಬ ನಿಟ್ಟಿನಲ್ಲಿ ಗ್ರಾ.ಪಂ. ಸಾಮಾನ್ಯ ಸಭೆ, ಗ್ರಾಮ ಸಭೆಗಳಲ್ಲಿ ಪ್ರಸ್ತಾವಿಸಲಾಗಿದೆ. ಈ ಕುರಿತು ಶಾಸಕರೂ ಮುತುವರ್ಜಿ ವಹಿಸಬೇಕಿದೆ ಎಂದು ಸವಣೂರು ಗ್ರಾ.ಪಂ. ಸದಸ್ಯ ಸತೀಶ್‌ ಅಂಗಡಿಮೂಲೆ ಅವರು ಒತ್ತಾಯಿಸಿದ್ದಾರೆ

ನಿರ್ಣಯ ಮಾಡಿ ಕಳುಹಿಸಲಾಗಿದೆ
ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಮಾಡಬೇಕೆನ್ನುವ ಕೂಗು ಈ ಹಿಂದಿನಿಂದಲೂ ಇದೆ. ಜನರ ಬೇಡಿಕೆಯನ್ನು ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ.
ಇಂದಿರಾ ಬಿ.ಕೆ.
ಸವಣೂರು ಗ್ರಾ.ಪಂ. ಅಧ್ಯಕ್ಷೆ 

ಎಲ್ಲ ಅರ್ಹತೆ ಇದೆ
ಅಭಿವೃದ್ಧಿ ದೃಷ್ಟಿಯಿಂದ ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕು. ಗ್ರಾ.ಪಂ. ಆಗಿ ರೂಪುಗೊಳ್ಳಲು ಎಲ್ಲ ಅರ್ಹತೆಗಳು ಪಾಲ್ತಾಡಿ ಗ್ರಾಮಕ್ಕಿದೆ. ಈ ಕುರಿತು ಪ್ರಯತ್ನಗಳನ್ನು ಮಾಡಬೇಕಿದೆ.
 - ಬಿ.ಕೆ. ರಮೇಶ್‌
ಸ್ಥಾಪಕಾಧ್ಯಕ್ಷರು, ಭಾರತಿ ಗ್ರಾಮ
ವಿಕಾಸ ಪ್ರತಿಷ್ಠಾನ ಪಾಲ್ತಾಡಿ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.