ಮೇಲ್ದರ್ಜೆಗೇರುವುದೇ ಪೆರಾಜೆ-ತೊಡಿಕಾನ ರಸ್ತೆ?


Team Udayavani, Dec 6, 2018, 11:16 AM IST

6-december-5.gif

ಅರಂತೋಡು: ಪೆರಾಜೆ- ಅಮಚೂರು-ತೊಡಿಕಾನ ರಸ್ತೆ ಬಹಳ ಕಿರಿದಾಗಿದ್ದು, ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ. ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಬೇಕು ಎನ್ನುವ ಸ್ಥಳೀಯರ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಪೆರಾಜೆ ರಾಜ್ಯ ಹೆದ್ದಾರಿಯಿಂದ ಪೆರಾಜೆ-ತೊಡಿಕಾನ ರಸ್ತೆ ಆರಂಭಗೊಳ್ಳುತ್ತದೆ. ಇದು ಅಲ್ಲಲ್ಲಿ ಕಿರಿದಾಗಿದೆ. ರಸ್ತೆಯ ಮಧ್ಯೆ ಅನೇಕ ತಿರುವುಗಳಿವೆ. ಅಲ್ಲಲ್ಲಿ ಡಾಮರು ಕಿತ್ತು ಹೋಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಡಕುಂಟಾಗುತ್ತಿದೆ.

ಅಪಾಯದಲ್ಲಿ ಸೇತುವೆ
ತೊಡಿಕಾನ ಅಮಚೂರು ಸಮೀಪದ ಹೊಳೆಗೆ ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾದ ಸೇತುವೆಯ ಬದಿಯ ಕೆಲ ಭಾಗಗಳು ಕುಸಿತಗೊಂಡಿದ್ದು, ಅಪಾಯದ ಮುನ್ಸೂಚನೆ ಕಂಡುಬರುತ್ತಿದೆ.

ಕಾವೇರಿ ರಸ್ತೆ ಅಭಿವೃದ್ಧಿಗೊಳ್ಳಲಿ
ಪೆರಾಜೆ- ತೊಡಿಕಾನ- ಪಟ್ಟಿ ರಸ್ತೆ ಅಭಿವೃದ್ದಿಯಾಗಬೇಕು ಎನ್ನುವುದು ಪೆರಾಜೆ ಜನತೆಯ ಇನ್ನೊಂದು ಮುಖ್ಯ ಬೇಡಿಕೆ. ಕಾವೇರಿ ರಸ್ತೆಯೂ ಅಭಿವೃದ್ಧಿಯಾಗಬೇಕು ಎನ್ನುವ ಬೇಡಿಕೆಯೂ ಇದೆ.

ಪೆರಾಜೆ ಶಾಸ್ತಾವು ದೇಗುಲ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲ, ಕೊಡಗಿನ ತಲಕಾವೇರಿ, ಭಾಗಮಂಡಲ ಭಗಂಡೇಶ್ವರ ದೇಗುಲಕ್ಕೆ ನೇರ ಸಂಬಂಧಗಳಿವೆ. ಪೆರಾಜೆ- ತೊಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ಮೂಲಕ ಈ ಭಾಗದ ಜನರು ಕೊಡಗಿನ ಭಾಗಮಂಡಲಕ್ಕೆ ಹಾಗೂ ತಲಕಾವೇರಿಗೆ ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಪೆರಾಜೆ ಶಾಸ್ತಾವು ದೇಗುಲದ ಪಕ್ಕ ಈಗಲೂ ಕಾವೇರಿ ಗದ್ದೆ ಇದ್ದು, ಇದರಲ್ಲಿ ಬೆಳೆದ ಕದಿರನ್ನು ತೆಗೆದು ಚೌತಿಯ ಸಂದರ್ಭ ಭಾಗಮಂಡಲದ ಭಗಂಡೇಶ್ವರ ಮತ್ತು ತಲಾಕಾವೇರಿಗೆ ಈ ರಸ್ತೆಯ ಮೂಲಕ ಸಾಗಿ ಕದಿರು ಕಟ್ಟುತ್ತಿದ್ದರು. ಬ್ರಿಟಿಷ್‌ ಸರಕಾರದ ದಾಖಲೆಯಲ್ಲಿ ಇದನ್ನು ‘ಕಾವೇರಿ ರಸ್ತೆ’ ಎಂದೇ ನಮೂದಿಸಲಾಗಿದೆ. ಬ್ರಿಟಿಷ್‌ ಆಡಳಿತದಲ್ಲಿ ಸ್ಥಳೀಯಾಡಳಿತದ ವ್ಯವಸ್ಥೆಗೆ ಸಂಬಂಧಿಸಿದ ಪಟ್ಟಿ ಮಾಡುತ್ತಿದ್ದ ಕಾರಣ ಈ ಊರಿಗೆ ಪಟ್ಟಿ ಎಂಬ ಹೆಸರು ಬಂದಿದೆ ಎಂದು ಹಿರಿಯರು ಹೇಳುತ್ತಾರೆ.

5 ಕೋ.ರೂ. ಅನುದಾನ; ಕಾಮಗಾರಿಗೆ ತೊಡಕು
ತೊಡಿಕಾನ- ಪಟ್ಟಿ- ಬಾಚಿಮಲೆ ರಸ್ತೆ ಅಭಿವೃದ್ಧಿಗೆ ರಾಜ್ಯ ಸರಕಾರ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ಕೆಲಸ ನಡೆಯಬೇಕಾಗಿದೆ. ಅರಣ್ಯ ಪ್ರದೇಶದಲ್ಲಿ ಈ ರಸ್ತೆ ಹಾದು ಹೋಗುವುದರಿಂದ ಕೆಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕಿದೆ. ಆ ಬಳಿಕವಷ್ಟೇ ಕೆಲಸ ಪೂರ್ಣಗೊಳಿಸಲು ಸಾಧ್ಯ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಸ್ತಾರಗೊಳ್ಳಬೇಕು
ಪೆರಾಜೆ-ತೊಡಿಕಾನ-ಪಟ್ಟಿ-ಭಾಗಮಂಡಲ ರಸ್ತೆ ಒಂದು ಧಾರ್ಮಿಕ ಇತಿಹಾಸ ಸಂಬಂಧವುಳ್ಳ ರಸ್ತೆ. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲ,ಪೆರಾಜೆ ಶ್ರೀ ಶಾಸ್ತಾವು ದೇಗುಲ, ಅಡೂರು ಶ್ರೀ ಮಹಾಲಿಂಗೇಶ್ವರ ದೇಗುಲ, ತಲಕಾವೇರಿ, ಭಾಗಮಂಡಲ ಭಗವಂಡೇಶ್ವರ ದೇಗುಲ ಧಾರ್ಮಿಕ ಐತಿಹಾಸಿಕ ಸಂಬಂಧ ಹೊಂದಿದೆ. ಇಲ್ಲಿನ ರಸ್ತೆ ಮೂಲಕವೇ ಹಿಂದಿನ ಕಾಲದಲ್ಲಿ ಜನರು ತೆರಳುತ್ತಿದ್ದರು. ಈ ರಸ್ತೆ ಅಭಿವೃದ್ಧಿಯಾಗಬೇಕು. ತೊಡಿಕಾನ-ಅಮಚೂರು-ಪೆರಾಜೆ ರಸ್ತೆ ತುಂಬಾ ಕಿರಿದಾಗಿದ್ದು, ಎರಡು ವಾಹನಗಳು ಎದುರುಗೊಂಡಾಗ ಸಮಸ್ಯೆಯಾಗುತ್ತಿದೆ. ಈ ರಸ್ತೆ ವಿಸ್ತಾರಗೊಳ್ಳಬೇಕು.
– ಎ.ಸಿ. ಹೊನ್ನಪ್ಪ ಅಮಚೂರು, ಸ್ಥಳೀಯರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.