ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ರೆಡ್‌ ಅಲರ್ಟ್‌ನಲ್ಲೂ ಭಾರೀ ಮಳೆಯಾಗುತ್ತಿಲ್ಲ

Team Udayavani, Jun 23, 2024, 7:20 AM IST

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಮಂಗಳೂರು: ಮುಂಗಾರು ಅವಧಿಯಲ್ಲಿ ಈ ವರೆಗೆ ರಾಜ್ಯದಲ್ಲಿ ಶೇಕಡಾವಾರು ಉತ್ತಮ ಮಳೆಯಾದರೂ ಕರಾವಳಿ ಮತ್ತು ಮಲೆನಾಡಿನಲ್ಲಿ ಅತ್ಯಧಿಕ ಮಳೆ ಕೊರತೆ ಕಂಡುಬಂದಿದೆ.

ರಾಜ್ಯಕ್ಕೆ ಮುಂಗಾರು ಆಗಮಿಸಿ ಮೂರು ವಾರ ಕಳೆದರೂ ನಿರೀಕ್ಷೆಯಷ್ಟು ಮೋಡ ಸೃಷ್ಟಿಯಾಗದ ಪರಿಣಾಮ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಕರಾವಳಿಯಲ್ಲಿ ಶೇ. 31 ಮತ್ತು ಮಲೆನಾಡಿನಲ್ಲಿ ಶೇ. 42ರಷ್ಟು ಮಳೆ ಕೊರತೆ ಇದೆ. ಆದರೆ ರಾಜ್ಯದಲ್ಲಿ ಒಟ್ಟಾರೆಯಾಗಿ ಶೇ. 8ರಷ್ಟು ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ ಉತ್ತಮ ಮಳೆ ಸುರಿಯುತ್ತದೆ. ಆದರೆ ಈ ಬಾರಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ಜೂ. 1ರಿಂದ 22ರ ವರೆಗೆ ಒಟ್ಟು 130 ಮಿ.ಮೀ. ವಾಡಿಕೆ ಮಳೆ ಆಗಬೇಕಿದ್ದು, ಹೆಚ್ಚುವರಿ ಅಂದರೆ 140 ಮಿ.ಮೀ. ಮಳೆ ಸುರಿದಿದೆ.

ಜಿಟಿ ಜಿಟಿ ಮಳೆ ಮಾಯ!
ಪೂರ್ವ ಮುಂಗಾರು ಮಳೆ ಕೊನೆಗೊಳ್ಳುವ ಸಂದರ್ಭದಲ್ಲಿ ಮಾನ್ಸೂನ್‌ ಮಳೆ ತರುವ ಮೋಡಗಳು ಭೂ ಮಧ್ಯ ರೇಖೆಯ ಮೂಲಕ ಬಂದು ಬಾನಂಗಳದಲ್ಲಿ ಶೇಖರವಾಗಬೇಕು. ಆದರೆ ಈ ಬಾರಿ ಮೋಡದ ಬದಲು ಒಣ ಗಾಳಿ ಮಾತ್ರ ಬೀಸಿದೆ. ಇದರಿಂದಾಗಿ ಪ್ರತೀ ವರ್ಷದಂತೆ ಮುಂಗಾರು ಅವಧಿಯಲ್ಲಿ ಸುರಿಯುವ ಜಿಟಿ ಜಿಟಿ ಮಳೆ ಇನ್ನೂ ಆರಂಭವಾಗಿಲ್ಲ. ಪೂರ್ವ ಮುಂಗಾರು ಮಾರುತಗಳ ಪ್ರಭಾವ ಇನ್ನೂ ಪೂರ್ಣವಾಗಿ ಕಡಿಮೆಯಾಗದ ಪರಿಣಾಮ ಸದ್ಯ ಸಣ್ಣ ಪ್ರಮಾಣದ ಮೋಡಗಳಷ್ಟೇ ಸೃಷ್ಟಿ ಆಗುತ್ತಿವೆ. ಇದೇ ಕಾರಣದಿಂದ ಬೇಸಗೆಯ ರೀತಿಯಲ್ಲೇ ಮಳೆ ಸುರಿಯುತ್ತಿದೆ.

ಪೂರ್ವ ಮುಂಗಾರು ಕಾರಣವೇ?
ಹವಾಮಾನ ಇಲಾಖೆ ತಜ್ಞರ ಪ್ರಕಾರ ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಸುರಿದರೆ ಮುಂದೆ ಆಗಮಿಸುವ ಮುಂಗಾರು ಮಾರುತ ದುರ್ಬಲಗೊಳ್ಳುವ ಸಾಧ್ಯತೆ ಇರುತ್ತದೆ. ವಿಶ್ಲೇಷಕರ ಪ್ರಕಾರ ಪೂರ್ವ ಮುಂಗಾರು ಅವಧಿಯಲ್ಲಿ ಮಳೆ ಹೆಚ್ಚಾದಾಗ ಆಯಾ ಪ್ರದೇಶದಲ್ಲಿ ತೇವಾಂಶವೂ ಹೆಚ್ಚಾಗಿರುತ್ತದೆ. ಆಗ ಆ ಭಾಗದಲ್ಲಿ ವಾತಾವರಣದ ಉಷ್ಣತಾಂಶ ಕಡಿಮೆ ಹಾಗೂ ವಾತಾವರಣದ ಒತ್ತಡ ಹೆಚ್ಚಾಗಿ ಅಲ್ಲಿ ಮೋಡ ಆವರಿಸುವ ಸಾಧ್ಯತೆ ಕಡಿಮೆ. ಇದರಿಂದ ಈ ಪ್ರದೇಶ ದ್ವೀಪದ ರೀತಿ ಮಾರ್ಪಾಡಾಗಿ ಮಳೆಯಾಗುವ ಸಂಭವ ಕಡಿಮೆ ಇರುತ್ತದೆ. ಆದರೆ ಇಲ್ಲಿ ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಮಳೆ ಪ್ರಮಾಣದಲ್ಲಿ ವ್ಯತ್ಯಾಸ ಇರಬಹುದು.

“ಅನುಭವ ಜ್ಞಾನ’ ಏನು ಹೇಳುತ್ತದೆ?
ಯಾವ ವರ್ಷ ಚಳಿಗಾಲದಲ್ಲಿ ಚಳಿ ಕಡಿಮೆ ಇರುತ್ತದೆಯೋ ಆ ವರ್ಷ ಮಳೆಯೂ ಕಡಿಮೆ ಎಂಬುದು ಕರಾವಳಿಯ ಕೃಷಿಕರ ಅನುಭವದ ಮಾತು. ಈ ವರ್ಷ ಚಳಿಗಾಲದಲ್ಲಿ ಚಳಿ ಕಡಿಮೆ ಇತ್ತು, ಈಗ ಮಳೆಯೂ ಕಡಿಮೆ ಇದೆ. ಕಳೆದ ವರ್ಷವೂ ಹೀಗೆಯೇ ಇತ್ತು ಎಂಬುದಾಗಿ ಸುಳ್ಯ ಭಾಗದ ಹಿರಿಯ ಕೃಷಿಕ ಎ.ಪಿ. ಸದಾಶಿವ ಮರಿಕೆ ಗಮನ ಸೆಳೆದಿದ್ದಾರೆ.

ಕಳೆದ ವರ್ಷವೂ ಹೀಗಾಗಿತ್ತು
ಕಳೆದ ವರ್ಷ (2023) ರಾಜ್ಯ ಕರಾವಳಿಗೆ ತಡವಾಗಿ ಅಂದರೆ ಜೂ. 10ರಂದು ಮುಂಗಾರು ಪ್ರವೇಶ ಪಡೆದಿತ್ತು. ಮೊದಲ ದಿನ ಜಿಲ್ಲೆಯಾದ್ಯಂತ ಉತ್ತಮ ಮಳೆಯಾದರೂ ಬಳಿಕದ ದಿನಗಳಲ್ಲಿ ಮಳೆ ಕ್ಷೀಣಿಸಿತ್ತು. ವ್ಯಾಪಕವಾಗಿ ಮೋಡ ಸೃಷ್ಟಿಯಾಗದ ಕಾರಣ ಹೀಗಾಗಿತ್ತು. ಮುಂಗಾರು ಆಗಮನದ ಎರಡು ವಾರಗಳ ಬಳಿಕ ಮತ್ತೆ ಮೋಡಗಳು ಸೃಷ್ಟಿಯಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಆರಂಭವಾಗಿತ್ತು.

ಅಲರ್ಟ್‌ ರೆಡ್‌: ಮಳೆ ಇಲ್ಲ !
ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ “ರೆಡ್‌ ಅಲರ್ಟ್‌’ ಘೋಷಣೆ ಮಾಡಿದರೂ ದ.ಕ., ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿಲ್ಲ. ರೆಡ್‌ ಅಲರ್ಟ್‌ ಅವಧಿಯಲ್ಲಿ ಕರಾವಳಿಯಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗಬೇಕು. ಮುಂಗಾರು ಆರಂಭದ ಬಳಿಕ ಜೂ. 9ರಂದು “ರೆಡ್‌ ಅಲರ್ಟ್‌’ ಘೋಷಿಸಲಾಗಿತ್ತು. ಈ ವೇಳೆ ಕೇವಲ 38 ಮಿ.ಮೀ. ಮಳೆ ಮಾತ್ರ ಸುರಿದಿದೆ. ಬಳಿಕ ಜೂ. 22ರಂದು “ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಮುಂಗಾರು ಆಗಮನದ ವೇಳೆ ಜಿಟಿ ಜಿಟಿ ಮಳೆ ದಿನವಿಡೀ ಸುರಿಯುತ್ತದೆ. ಕೇರಳದಿಂದ ರಾಜ್ಯ ಕರಾವಳಿ ಭಾಗಕ್ಕೆ ಜೂನ್‌ 2ರಂದು ಮುಂಗಾರು ಪ್ರವೇಶ ಪಡೆದಿತ್ತು. ಆದರೆ ಆ ವೇಳೆ ಮಳೆ ತರುವ ಮೋಡಗಳು ಸೃಷ್ಟಿಯಾಗದೆ ಮಳೆಯ ಪ್ರಮಾಣ ಕಡಿಮೆ ಇತ್ತು. ಸದ್ಯ ಅದೇ ಪರಿಸ್ಥಿತಿ ಇದ್ದು, ಮುಂದಿನ ಕೆಲವು ದಿನಗಳಲ್ಲಿ ಮತ್ತೆ ಭಾರೀ ಮಳೆ ಆರಂಭವಾಗುವ ನಿರೀಕ್ಷೆ ಇದೆ.
– ಡಾ| ರಾಜೇಗೌಡ, ಹವಾಮಾನ ವಿಜ್ಞಾನಿ, ಬೆಂಗಳೂರು

-  ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.