ಜ. 13: ರಾಮ-ಲಕ್ಷ್ಮಣ ಕಂಬಳ
Team Udayavani, Jan 5, 2019, 12:30 AM IST
ಮಂಗಳೂರು: ನಗರದ ಬಂಗ್ರ ಕೂಳೂರು ಗೋಲ್ಡ್ಫಿಂಚ್ ಸಿಟಿಯಲ್ಲಿ ಎರಡನೇ ವರ್ಷದ ಹೊನಲು ಬೆಳಕಿನ ರಾಮ-
ಲಕ್ಷ್ಮಣ ಜೋಡುಕರೆ ಕಂಬಳ ಎಂಆರ್ಜಿ ಗ್ರೂಪ್ನ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಜ. 13ರಂದು ಬೆಳಗ್ಗೆ 9.30ರಿಂದ ನಡೆಯಲಿದೆ ಎಂದು ಕಂಬಳ ಸಂಘಟಕ ತಲಪಾಡಿ ದೊಡ್ಡಮನೆ ಕ್ಯಾ| ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಂಕನಾಡಿ ಗರೋಡಿ ಅಧ್ಯಕ್ಷ ಕೆ. ಚಿತ್ತರಂಜನ್ ಉದ್ಘಾಟಿಸಲಿದ್ದು, ಮೇಯರ್ ಭಾಸ್ಕರ್ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6ಕ್ಕೆ ಸಭಾಕಾರ್ಯಕ್ರಮ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಚಿವರಾದ ಡಿ.ವಿ. ಸದಾನಂದ ಗೌಡ, ಯು.ಟಿ. ಖಾದರ್, ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ನಳಿನ್ ಕುಮಾರ್ , ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ. ಜ. 14ರಂದು ಬೆಳಗ್ಗೆ 8ಕ್ಕೆ ಬಹುಮಾನ ವಿತರಣೆ ನಡೆಯಲಿದ್ದು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಂಬಳದಲ್ಲಿ ಸುಮಾರು 100 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಶಾಸಕ ಉಮಾನಾಥ ಕೋಟ್ಯಾನ್, ಕಂಬಳ ಗೌರವ ಸಲಹೆಗಾರ ಪ್ರಸಾದ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷ ನಿತಿನ್ ಶೆಟ್ಟಿ ಅಗರಿ, ಪ್ರ. ಕಾರ್ಯದರ್ಶಿ ಉಳ್ಳಾಲ ನಂದನ್ ಮಲ್ಯ, ಸುಜಿತ್ ಪ್ರತಾಪ್, ಮುಖ್ಯ ಸಂಘಟಕ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಉಪಾಧ್ಯಕ್ಷ ಜೋಯ್ಲಸ್ ಡಿ”ಸೋಜಾ ಪತ್ರಿಕಾಗೋಷ್ಠಿಯಲ್ಲಿದ್ದರು.
ಚಿನ್ನದ ಬಹುಮಾನ
ಕನೆ ಹಲಗೆ ವಿಭಾಗದಲ್ಲಿ ಪ್ರಥಮ 2 ಪವನು, ದ್ವಿತೀಯ 1 ಪವನು, ಹಗ್ಗ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ 2 ಪವನು,
ದ್ವಿತೀಯ 1ಪವನು, ಅಡ್ಡಹಲಗೆ, ಹಗ್ಗ, ನೇಗಿಲು, ಕಿರಿಯ ವಿಭಾಗದಲ್ಲಿ ಪ್ರಥಮ 1ಪವನು, ದ್ವಿತೀಯ ಅರ್ಧ ಪವನು ಚಿನ್ನ ಬಹುಮಾನ ನೀಡಲಾಗುತ್ತದೆ. ನಿಖರ ಫಲಿತಾಂಶಕ್ಕಾಗಿ ಲೇಸರ್ ಬೀಂ ನೆಟ್ವರ್ಕ್ ಸಿಸ್ಟಂ, ವೀಡಿಯೋ ದಾಖಲೀಕಣ, ನಡೆಯಲಿದೆ ಎಂದು ಬೃಜೇಶ್ ಚೌಟ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.