ಜೋಡುಪಾಲ: ಸುರಕ್ಷಿತವಲ್ಲ ಮಾಣಿ-ಮೈಸೂರು ರಸ್ತೆ!


Team Udayavani, Oct 30, 2018, 10:29 AM IST

30-october-2.gif

ಅರಂತೋಡು: ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಜೋಡುಪಾಲದಲ್ಲಿ ಇನ್ನೂ ಪೂರ್ಣ ಪ್ರಮಾಣದ ವಾಹನ ಸಂಚಾರ ಸಾಧ್ಯವಾಗದ ಹಿನ್ನೆಲೆಯಲ್ಲಿ ಮತ್ತೆ ಪರ್ಯಾಯ ರಸ್ತೆ ನಿರ್ಮಾಣದ ಬಗ್ಗೆ ಕೊಡಗು ಹಾಗೂ ಸುಳ್ಯ ಗಡಿಭಾಗದ ಜನರು ತೀವ್ರವಾಗಿ ಚಿಂತನೆ ನಡೆಸುತ್ತಿದ್ದಾರೆ.

ಜೋಡುಪಾಲದಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಭೂವಿಜ್ಞಾನಿಗಳು, ಜೋಡುಪಾಲ ಭಾಗ ವಾಸಕ್ಕೆ ಯೋಗ್ಯವಾಲ್ಲ ಎಂದು ತಿಳಿಸಿದ್ದರಿಂದ ಇಲ್ಲಿ ನಿರ್ಮಾಣವಾದ ರಸ್ತೆ ಮಳೆಗಾದಲ್ಲಿ ಯಾವಾಗ ಬೇಕಾದರೂ ಕುಸಿಯಬಹುದು ಎಂದು ಆತಂಕ ಸ್ಥಳೀಯರಲ್ಲಿದೆ.

ಮಾಣಿ – ಮೈಸೂರು ರಾಜ್ಯ ರಸ್ತೆ ಜೋಡುಪಾಲದಲ್ಲಿ ವಾಹನ ಸಂಚಾರಕ್ಕೆ ಇನ್ನೂ ಪೂರ್ಣವಾಗಿ ತೆರೆದುಕೊಂಡಿಲ್ಲ. ಈ ರಸ್ತೆಯನ್ನು ಚತುಷ್ಪಥವಾಗಿ ಪರಿವರ್ತಿಸಲು ತಯಾರಿ ನಡೆದಿದ್ದು, ಜೋಡುಪಾಲದಲ್ಲಿ ಧಾರಣ ಸಾಮರ್ಥ್ಯದ ಬಗ್ಗೆ ತಾಂತ್ರಿಕ ತಜ್ಞರಲ್ಲೇ ಸಂಶಯವಿದೆ. ಈ ರಸ್ತೆಯ ಬದಲಾಗಿ ಇನ್ನೊಂದು ರಾಜ್ಯ ಹೆದ್ದಾರಿ ನಿರ್ಮಿಸಿದರೆ ಅನುಕೂಲ ಆಗಬಹುದು. ಹಾಲಿ ರಸ್ತೆಯಲ್ಲಿ ಹುಣಸೂರಿನಿಂದ ಮಡಿಕೇರಿ ಮಾರ್ಗವಾಗಿ ಸುಳ್ಯಕ್ಕೆ 131 ಕಿ.ಮೀ. ದೂರವಾಗುತ್ತದೆ. ಅದರ ಬದಲು ಭಾಗಮಂಡಲ, ಪಟ್ಟಿ, ತೊಡಿಕಾನ ಹಾಗೂ ಕೊಡಗಿನ ಪೆರಾಜೆ ಮೂಲಕ ಬರಲು ಸಾಧ್ಯವಿದೆ. ಹುಣಸೂರು – ಭಾಗಮಂಡಲ (ರಾಜ್ಯ ಹೆದ್ದಾರಿ) 109 ಕಿ.ಮೀ., ಭಾಗಮಂಡಲ-ಬಾಚಿಮಲೆ (ಅಂತಾರಾಜ್ಯ ಹೆದ್ದಾರಿ) 9 ಕಿ.ಮೀ., ಬಾಚಿಮಲೆ- ಪಟ್ಟಿ- ತೊಡಿಕಾನ (ಅಭಿವೃದ್ಧಿ ಆಗಬೇಕಾದ ರಸ್ತೆ) 9.ಕಿ.ಮೀ., ತೊಡಿಕಾನ- ಪೆರಾಜೆ ಜಿ.ಪಂ. ರಸ್ತೆ 11 ಕಿ.ಮೀ., ಪೆರಾಜೆ- ಸುಳ್ಯ (ರಾಜ್ಯ ಹೆದ್ದಾರಿ) 7 ಕಿ.ಮೀ. ಹೀಗೆ ಒಟ್ಟು 145 ಕಿ.ಮೀ. ದೂರವಾಗುತ್ತದೆ. ಈ ಮಾರ್ಗದಲ್ಲಿ ಮಾಚಿಮಲೆ- ಪಟ್ಟಿ- ತೊಡಿಕಾನ ರಸ್ತೆ ಅಭಿವೃದ್ಧಿಗೆ 2013- 14ನೇ ಸಾಲಿನಲ್ಲಿ ರಾಜ್ಯ ಸರಕಾರದಿಂದ 5 ಕೋಟಿ ರೂ. ಮಂಜೂರಾಗಿದೆ. ಕಡತಗಳಿಗೆ ತಾಂತ್ರಿಕ ಒಪ್ಪಿಗೆ ಬಾಕಿ ಉಳಿದಿದೆ.

ಈ ರಸ್ತೆ ಅಭಿವೃದ್ಧಿಯಾದಲ್ಲಿ ಸಂಪಾಜೆ- ಮಡಿಕೇರಿ ರಸ್ತೆಗೆ ಪರ್ಯಾಯವಾಗಿ ರೂಪುಗೊಂಡು ಹಾಲಿ ರಸ್ತೆಯ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಭಾಗಮಂಡಲ, ತಲಕಾವೇರಿಯಿಂದ ಸುಬ್ರಹ್ಮಣ್ಯ- ಧರ್ಮಸ್ಥಳಕ್ಕೆ ಪ್ರಯಾಣಿಸಲು ಅತೀ ಹತ್ತಿರದ ರಸ್ತೆಯಾಗಲಿದೆ. ಈ ದಾರಿಯಲ್ಲಿ ಭಾಗಮಂಡಲದಿಂದ ಸುಬ್ರಹ್ಮಣ್ಯಕ್ಕೆ ಈಗಿರುವ 145 ಕಿ.ಮೀ. ಬದಲು ಅಂತರ ಕೇವಲ 50 ಕಿ.ಮೀ.ಗೆ ಇಳಿಯುತ್ತದೆ. ಇದು ಸರಕಾರಿ ದಾಖಲೆಗಳಲ್ಲಿ ಕಾವೇರಿ ರಸ್ತೆ ಎಂದು ನಮೂದಾಗಿದೆ. ಭಾಗಮಂಡಲ ಕ್ಷೇತ್ರಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಪೂಜೆಗಳ ಸಂಬಂಧ ಇರುವ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ, ಪೆರಾಜೆ ಶಾಸ್ತವೇಶ್ವರ ದೇವಸ್ಥಾನ, ಆಡೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸಿದರೆ, ಭಾಗಮಂಡಲ ತಲಕಾವೇರಿ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಲ್ಲದು ಎಂದು ಸ್ಥಳೀಯರು ಅಭಿಪ್ರಾಯಪಡುತ್ತಾರೆ.

ಅಭಿವೃದ್ಧಿ ಆಗಲಿ
ಬಾಚಿಮಲೆ-ಪಟ್ಟಿ- ತೊಡಿಕಾನ ರಸ್ತೆ ಅಭಿವೃದ್ಧಿಯ ಬಗ್ಗೆ ಅನೇಕ ವರ್ಷಗಳಿಂದ ದೇವಾಲಯ ವತಿಯಿಂದ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರಕಾರ 5 ಕೋಟಿ ರೂ. ಮಂಜೂರು ಮಾಡಿದೆ. ಅಡೂರು ಮಹಾಲಿಂಗೇಶ್ವರ, ಪೆರಾಜೆ ಶಾಸ್ತವೇಶ್ವರ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ, ಭಾಗಮಂಡಲ, ತಲಕಾವೇರಿಗೂ ಸಂಬಂಧಿಸಿದ ಈ ಐತಿಹಾಸಿಕ ರಸ್ತೆಗೆ ‘ಕಾವೇರಿ ರಸ್ತೆ’ ಎಂಬ ಹೆಸರೂ ದಾಖಲೆಗಳಲ್ಲಿದೆ. ಈ ರಸ್ತೆ ಅಭಿವೃದ್ಧಿ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರಿಗೆ ಪತ್ರ ಬರೆಯಲಾಗಿದೆ. ಜೋಡುಪಾಲ ರಸ್ತೆಗೆ ಪರ್ಯಾಯವಾಗಿ ಇದನ್ನು ಅಭಿವೃದ್ಧಿ ಮಾಡಬಹುದಾಗಿದೆ.
– ಆನಂದ ಕಲ್ಲಗದ್ದೆ
ವ್ಯವಸ್ಥಾಪಕ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ
ದೇವಾಲಯ, ತೊಡಿಕಾನ 

 ತೇಜೇಶ್ವರ್‌ ಕುಂದಲ್ಪಾಡಿ

ಪರ್ಯಾಯ ರಸ್ತೆ ಬೇಕು
ಮಾಣಿ – ಮೈಸೂರು ರಸ್ತೆ ಒಂದು ಪ್ರಮುಖ ರಸ್ತೆಯಾಗಿದ್ದರೂ ಜೋಡುಪಾಲದಲ್ಲಿ ಸಂಭವಿಸಿದ ಭೂಕುಸಿತದಿಂದ ರಸ್ತೆ ಕುಸಿತಗೊಂಡು ಕಾಮಗಾರಿಯಾದರೂ ಇನ್ನೂ ಎಲ್ಲ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಿಲ್ಲ. ಮುಂದಿನ ಮಳೆಗಾದಲ್ಲಿ ಈ ರಸ್ತೆ ಉಳಿಯುವ ಬಗ್ಗೆ ಜನರಿಗೆ ಮತ್ತೆ ಸಂಶಯ ಕಾಡುತ್ತಿದೆ. ಈ ರಸ್ತೆಗೆ ಬದಲಾಗಿ ಇನ್ನೊಂದು ಪರ್ಯಾಯ ರಸ್ತೆ ನಿರ್ಮಾಣ ಅಗತ್ಯ ಇದೆ.
– ರಮೇಶ್‌
ಜೋಡುಪಾಲ

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.