ನೈಋತ್ಯ ಶಿಕ್ಷಕರ ಕ್ಷೇತ್ರ: ಕೆ.ಕೆ. ಮಂಜುನಾಥ್‌ ಕಾಂಗ್ರೆಸ್‌ ಅಭ್ಯರ್ಥಿ


Team Udayavani, Oct 14, 2017, 9:40 AM IST

Congress-Party-Logo-650.jpg

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆ ಸೇರಿದಂತೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೊಡಗಿನ ಕೆ.ಕೆ. ಮಂಜುನಾಥ್‌ ಅವರು ಸ್ಪರ್ಧಿಸುತ್ತಿದ್ದು ಶಿಕ್ಷಕ ಮತದಾರರು ಅವರನ್ನು ಬೆಂಬಲಿಸಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಜುನಾಥ್‌ ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಲ್ಲ ಎಂದು ಪ್ರತಿಸ್ಪರ್ಧಿಗಳಿಂದ ಅಪಪ್ರಚಾರ ನಡೆಯುತ್ತಿದೆ.  ಮಂಜುನಾಥ್‌ ಅವರು ಪಕ್ಷದ ಅಭ್ಯರ್ಥಿಯಾಗಿದ್ದು ಈ ಬಾರಿ ಶಿಕ್ಷಕರ ಕ್ಷೇತ್ರಕ್ಕೆ ಓರ್ವ ಶಿಕ್ಷಕರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇದೇ ರೀತಿ ಪದವೀಧರರ ಕ್ಷೇತ್ರಕ್ಕೆ ಎಸ್‌.ಪಿ. ದಿನೇಶ್‌ ಅಭ್ಯರ್ಥಿಯಾಗಿರುತ್ತಾರೆ ಎಂದರು.

ನೋಂದಾಯಿಸಿ
ದ.ಕ. ಜಿಲ್ಲೆಯಲ್ಲಿ ಸುಮಾರು 8,000ದಿಂದ 10,000ದ ವರೆಗೆ ಶಿಕ್ಷಕ ಮತದಾರರು ಹಾಗೂ ಸುಮಾರು 50,000 ಪದವೀಧರ ಮತದಾರರಿದ್ದಾರೆ. ಈ ಹಿಂದಿನ ಮತದಾರರ ಪಟ್ಟಿ ರದ್ದುಗೊಂಡಿದ್ದು ಹೊಸದಾಗಿ ಪಟ್ಟಿ ಸಿದ್ಧವಾಗುತ್ತಿದೆ. ಶಿಕ್ಷಕರು ಹಾಗೂ ಪದವೀಧರರು ಸ್ವಯಂಪ್ರೇರಿತರಾಗಿ ಹೆಸರು ನೋಂದಾಯಿಸಬೇಕು ಎಂದು ಕೋರಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡಿದೆ ಎಂದವರು ವಿವರಿಸಿದರು.

ಯಶಸ್ವಿ ಅಭಿಯಾನ
ಸೆ. 23ರಿಂದ ನಡೆಯುತ್ತಿರುವ ಮನೆಮನೆಗೆ ಕಾಂಗ್ರೆಸ್‌ ಅಭಿಯಾನ ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಪಕ್ಷದ ಎಲ್ಲ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದವರು ಹೇಳಿದರು.

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಮಾತನಾಡಿ, 1994ರಲ್ಲಿ ಹೈಸ್ಕೂಲ್‌ ಶಿಕ್ಷಕನಾಗಿ ಸೇರಿದ ನಾನು ಶಿಕ್ಷಕರ ಸಂಘದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದೇನೆ. ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರೇ ಆಯ್ಕೆಯಾಗಬೇಕು ಎಂಬುದು ನನ್ನ ನಿಲುವು ಆಗಿದ್ದು ಈ ಹಿನ್ನೆಲೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು. ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಸದಾಶಿವ ಉಳ್ಳಾಲ, ಸಂತೋಷ್‌ ಕುಮಾರ್‌ ಶೆಟ್ಟಿ, ಅಬ್ದುಲ್‌ ಸಲೀಂ, ಅಪ್ಪಿ, ನಜೀರ್‌ ಬಜಾಲ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಉಪಸ್ಥಿತರಿದ್ದರು.

ಗಾಂಜಾ: ಕಠಿನ ಕ್ರಮಕ್ಕೆ ಆಗ್ರಹ
ಜಿಲ್ಲೆಯಲ್ಲಿ ಮಾದಕ ದ್ರವ್ಯ ಹಾವಳಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಇದಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಈಗಾಗಲೇ ಸರಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಕೂಡ ಆಗ್ರಹ ಮಾಡುತ್ತಿದೆ ಎಂದು ಹರೀಶ್‌ ಕುಮಾರ್‌ ಹೇಳಿದರು.

ಅ. 22ರಂದು ಸಿಎಂ ಬಂಟ್ವಾಳಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 22ರಂದು ಬಂಟ್ವಾಳಕ್ಕೆ ಅಗಮಿಸಲಿದ್ದು ಸುಮಾರು 300 ಕೋ.ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು ಎಂದು ಹರೀಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.