ಕಡಬ:ಸುತ್ತಾಡಲು ಬಂದು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು!
Team Udayavani, Feb 9, 2018, 11:24 AM IST
ಕಡಬ: ಮನೆಯವರಿಗೆ ತಿಳಿಸದೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದು ಊರಿಗೆ ಹಿಂದಿರುಗಲು ದುಡ್ಡಿಲ್ಲದೆ ನೆಟ್ಟಣ ರೈಲು ನಿಲ್ದಾಣದಲ್ಲಿ ಕಂಗಾಲಾಗಿ ಕುಳಿತಿದ್ದ ಹಾಸನ ಮೂಲದ ಯುವ ಪ್ರೇಮಿಗಳನ್ನು ಕಡಬ ಪೊಲೀಸರು ಠಾಣೆಗೆ ಕರೆದೊಯ್ದು ಕುಳ್ಳಿರಿಸಿದ ಘಟನೆ ಗುರುವಾರ ಸಂಭವಿಸಿದೆ.
ಹಾಸನ ನಿವಾಸಿ ಯುವಕ ನೂತನ್ ಹಾಸ್ಟೆಲ್ನಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದ ತನ್ನ ಪ್ರೇಯಸಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದ. ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಪ್ರೇಮಿಗಳಿಗೆ ತಮ್ಮ ಕೈಯಲ್ಲಿದ್ದ ದುಡ್ಡು ಖಾಲಿಯಾದದ್ದೇ ತಿಳಿಯಲಿಲ್ಲ. ಕೊನೆಗೆ ಊಟಕ್ಕೆ ಹಾಗೂ ಊರಿಗೆ ಹಿಂದಿರುಗಲು ದುಡ್ಡಿಲ್ಲದೆ ಕಂಗಾಲಾಗಿ ಕುಳಿತಿದ್ದ ಅವರು ಸ್ಥಳೀಯರ ಕಣ್ಣಿಗೆ ಬಿದ್ದರು. ಅವರನ್ನು ವಿಚಾರಣೆಗೊಳಪಡಿಸಿದಾಗ ಅವರಿಬ್ಬರೂ ಮನೆಯವರಿಗೆ ತಿಳಿಸದೆ ಬಂದಿರುವುದು ಬೆಳಕಿಗೆ ಬಂತು. ಬಳಿಕ ಕಡಬ ಪೊಲೀಸರಿಗೆ ವಿಚಾರ ಸುದ್ದಿ ಮುಟ್ಟಿಸಲಾಯಿತು. ಪ್ರೇಮಿಗಳನ್ನು ಠಾಣೆಗೆ ಕರೆತಂದ ಪೊಲೀಸರು ಅವರ ಹೆತ್ತವರಿಗೆ ವಿಚಾರ ತಿಳಿಸಿದರು. ಸಂಜೆಯ ವೇಳೆಗೆ ಠಾಣೆಗೆ ಬಂದ ಅವರ ಹೆತ್ತವರು ಮುಚ್ಚಳಿಕೆ ಬರಕೊಟ್ಟು ಊರಿಗೆ ಕರೆದೊಯ್ದರು. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.