![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-415x229.jpg)
Road Mishap ಕಾಡಬೆಟ್ಟು ಕ್ರಾಸ್: ಲಾರಿ ಪಲ್ಟಿಯಾಗಿ ಬಸ್ಗೆ ಢಿಕ್ಕಿ, ಪ್ರಯಾಣಿಕರಿಗೆ ಗಾಯ
Team Udayavani, May 29, 2024, 9:12 PM IST
![Road Mishap ಕಾಡಬೆಟ್ಟು ಕ್ರಾಸ್: ಲಾರಿ ಪಲ್ಟಿಯಾಗಿ ಬಸ್ಗೆ ಢಿಕ್ಕಿ, ಪ್ರಯಾಣಿಕರಿಗೆ ಗಾಯ](https://www.udayavani.com/wp-content/uploads/2024/05/KSRTC-BUS-XLORRY-620x349.jpg)
ಪುಂಜಾಲಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ಬುಧವಾರ ಸಂಜೆ ಸಂಭವಿಸಿದೆ.
ಅಪಘಾತದಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿ ಸೇರಿದಂತೆ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಡಬೆಟ್ಟು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಇದೇ ವೇಳೆ ಮಂಗಳೂರಿನಿಂದ ಬೆಳ್ತಂಗಡಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗೆ ಢಿಕ್ಕಿಯಾಗಿದೆ.
ಘಟನೆಯಿಂದ ಬಸ್ ಚಾಲಕ, ಅದರಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕನಿಗೆ ಗಾಯವಾಗಿದೆ.
ಲಾರಿ ಚಾಲಕ ಚಿತ್ರದುರ್ಗದ ಹಿರಿಯೂರಿನ ಮಹೇಶ್, ಬಸ್ ಚಾಲಕ ಉಮೇಶ್, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿನಿ ಮಧುರಾ ಇರ್ವತ್ತೂರು, ರಕ್ಷಣ್ ವೇಣುಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಘಟನೆ ಸ್ಥಳೀಯ ಸಿ.ಸಿ.ಕೆಮರಾದಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ. ಕಾಡಬೆಟ್ಟು ಕ್ರಾಸ್ನಲ್ಲಿ ಹಲವಾರು ಅಪಘಾತ ನಡೆದಿದ್ದು, ಇಲ್ಲಿ ಹೆದ್ದಾರಿಯಲ್ಲಿ ಇಲಾಖೆ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.