ಕದ್ರಿ: ಮರ ಉಳಿಸಲು ‘ವೃಕ್ಷ  ಬಂಧನ್‌’


Team Udayavani, Feb 12, 2018, 1:40 PM IST

12-Feb-11.jpg

ಮಹಾನಗರ : ನಗರದ ಕದ್ರಿಯ ಸಿಟಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿರುವ ರಸ್ತೆ ವಿಸ್ತರಣೆ ಹೆಸರಿನಲ್ಲಿ ಮರಗಳನ್ನು ಕಡಿಯುವುದನ್ನು ಪ್ರತಿಭಟಿಸಿ ಹಾಗೂ ಮರಗಳನ್ನು ಉಳಿಸಬೇಕು ಎಂದ ಆಗ್ರಹಿಸಿ ಎನ್‌ಇಸಿಎಫ್‌ (ರಾಷ್ಟ್ರೀಯ ಪರಿಸರ ಸಂಕ್ಷರಣಾ ಒಕ್ಕೂಟ) ಮಂಗಳೂರು ನೇತೃತ್ವದಲ್ಲಿ ಪರಿಸರಾಸಕ್ತರು ಮತ್ತು ನಾಗರಿಕರಿಂದ ಕದ್ರಿಯಲ್ಲಿ ‘ವೃಕ್ಷ ಬಂಧನ್‌’ ಕಾರ್ಯಕ್ರಮ ನಡೆಯಿತು.

ಸಿಟಿ ಆಸ್ಪತ್ರೆ ರಸ್ತೆಯಲ್ಲಿರುವ ದೇವದಾರು ಹಾಗೂ ಪೆಲ್ಟಾಪಾರಂ ಮರಗಳಿಗೆ ಪ್ರತಿಭಟನಗಾರರು ಸಾಮೂಹಿಕವಾಗಿ ವಿವಿಧ ಬಣ್ಣಗಳ ರಿಬ್ಬನ್‌ಗಳನ್ನು ಕಟ್ಟಿ ವೃಕ್ಷ ಬಂಧನ್‌ ನಡೆಸಿ ಯಾವುದೇ ಕಾರಣಕ್ಕೂ ಈ ಮರಗಳನ್ನು ಕಡಿಯಲು ಬಿಡುವುದಿಲ್ಲ ಮತ್ತು ಇದನ್ನು ರಕ್ಷಿಸುತ್ತೇವೆ ಎಂದು ಎಚ್ಚರಿಸಿದರು.

ಪರಿಸರಕ್ಕೆ ಧಕ್ಕೆ
ಎನ್‌ಇಸಿಎಫ್‌ ಕಾನೂನು ಸಲಹೆಗಾರ್ತಿ ಸುಮಾ ನಾಯಕ್‌ ಅವರು ಮಾತನಾಡಿ, ಇಲ್ಲಿ ಹಲವಾರು ವರ್ಷಗಳಿಂದ ಈ ಮರಗಳು ಇವೆ. ಈ ಮರಗಳಿಂದ ರಸ್ತೆ ವಿಸ್ತರಣೆ ಅಥವಾ ಚರಂಡಿ ಕಾಮಗಾರಿಗೆ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಆದರೂ ಇಲ್ಲಿನ ಜನಪ್ರತಿನಿಧಿಗಳು ಯಾರಿಗೋ ಲಾಭ ಮಾಡಿಕೊಡುವ ಉದ್ದೇಶದಿಂದ ಅವುಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಕಡಿಯಲು ಹೊರಟಿದ್ದಾರೆ ಎಂದು ಹೇಳಿದರು.

ನಾವು ಯಾರೂ ಕೂಡ ಅಭಿವೃದ್ಧಿಗೆ ವಿರೋಧಿಗಳಲ್ಲ . ಆದರೆ ಈ ರೀತಿಯಾಗಿ ಮರಗಳನ್ನು ನಾಶಮಾಡಿ ಪರಿಸರಕ್ಕೆ ಧಕ್ಕೆ ತರುವುದನ್ನು ವಿರೋಧಿಸುತ್ತೇವೆ ಎಂದರು.

ಅಭಿವೃದ್ಧಿಯ ಹೆಸರಿನಲ್ಲಿ ನಾಶ
ಎನ್‌ಇಸಿಎಫ್‌ ಮುಖಂಡ ಶಶಿಧರ ಶೆಟ್ಟಿ ಮಾತನಾಡಿ, ಸ್ಮಾರ್ಟ್‌ ನಗರದ ಹೆಸರಿನಲ್ಲಿ ಮಂಗಳೂರನ್ನು ಸ್ಮಾರಕ
ಸಿಟಿಯಾಗಿ ಮಾಡಲು ಇಲ್ಲಿ ಆಡಳಿತ ವ್ಯವಸ್ಥೆ ಹೊರಟಿದೆ. ಅಭಿವೃದ್ಧಿಯ ಹೆಸರಿನಲ್ಲಿ ಅನಾವಶ್ಯಕವಾಗಿ ಮರಗಳನ್ನು
ಕಡಿದು ನಾಶ ಮಾಡಲಾಗುತ್ತಿದೆ. ಈಗಾಗಲೇ ನಗರದಲ್ಲಿ ಲಕ್ಷಾಂತರ ಮರಗಳು ನಾಶವಾಗಿವೆ ಎಂದು ಹೇಳಿದರು.

ಮನಪಾ ಗ್ರೀನ್‌ ಸೆಸ್‌ ರೂಪದಲ್ಲಿ ಸಂಗ್ರಹಿಸುತ್ತಿರುವ ಕೋಟ್ಯಾಂತರ ರೂ. ನಗರದಲ್ಲಿ ಹಸಿರುಕರಣ ಉದ್ದೇಶಕ್ಕೆ
ಬಳಕೆ ಮಾಡದೆ ಇತರ ಉದ್ದೇಶಗಳಿಗೆ ವರ್ಗಾಯಿಸುತ್ತಿದೆ ಎಂದರು. ಇದೀಗ ಕದ್ರಿ ಪ್ರದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ
ಮರಗಳನ್ನು ಕಡಿಯಲು ಮನಪಾ ಮುಂದಾಗಿದೆ. ಇದಕ್ಕೆ ಚರಂಡಿ ಕಾಮಗಾರಿಯ ಕಾರಣ ನೀಡಲಾಗುತ್ತಿದೆ. ಚರಂಡಿ ಕಾಮಗಾರಿಯನ್ನು ಮರಗಳನ್ನು ಕಡಿಯದೆ ಕೈಗೊಳ್ಳಲು ಅವಕಾಶವಿದೆ ಎಂದರು. ಎನ್‌ಇಸಿಎಫ್‌ ಮುಖಂಡರಾದ ಡ್ಯಾನಿಯಲ್‌, ಅನಿತಾ ಭಂಡಾರ್‌ಕಾರ್‌, ರೋಹಿಣಿ, ವಂ| ವಾಟ್ಸಾನ್‌, ಜೀತು ಮಿಲಾನಿ, ಪಿಯುಸಿಎಲ್‌ನ ಪಿ.ಬಿ. ಡೇಸಾ
ಮತ್ತಿತರರು ಉಪಸ್ಥಿತರಿದ್ದರು.

ಹಮ್‌ ಲಡೇಂಗೆ.. ಹಮ್‌ ಜೀತೇಂಗೆ..
ಪ್ರತಿಭಟನಕಾರರು ‘ಉಳಿಸಿ ಉಳಿಸಿ ಮರಗಳನ್ನು ಉಳಿಸಿ.. ಹಮ್‌ ಲಡೇಂಗೆ..ಹಮ್‌ ಜೀತೇಂಗೆ…’ ಘೋಷಣೆಗಳನ್ನು ಕೂಗಿದರು. ಮರಗಳನ್ನು ಕಡಿಯಲು ಮುಂದಾಗಿರುವುದನ್ನು ಈಗಾಗಲೇ ಅರಣ್ಯ ಸಚಿವ ಬಿ. ರಮಾನಾಥ ರೈ ಅವರ ಗಮನಕ್ಕೆ ತಂದು ಈ ಮರಗಳನ್ನು ಉಳಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಸ್ಪಂದಿಸಿರುವ ಸಚಿವರು, ಮರಗಳನ್ನು ಕಡಿಯಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎನ್‌ಇಸಿಎಫ್‌ ಮುಖಂಡ ಶಶಿಧರ ಶೆಟ್ಟಿ ಹೇಳಿದರು. 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.