Kaikamba: ಎಚ್ಚರ,ಕುಸಿಯುತ್ತಿದೆ ಬೆಳ್ಳಿಬೆಟ್ಟು!;ಗುರುಪುರದ ಬಳಿಯ ಮೂಳೂರಿನಲ್ಲಿ ಗುಡ್ಡ ಜರಿತ

ಹೆದ್ದಾರಿಗೇ ಬಂದು ಬಿದ್ದ ಮಣ್ಣು ಜೆಸಿಬಿ ದಾಳಿ ಕಾರಣ?; ಎಚ್ಚರ ವಹಿಸದಿದ್ದರೆ ಇಲ್ಲೂ ನಡೆದೀತು ಶಿರೂರಿನಂಥದೇ ದುರಂತ

Team Udayavani, Sep 29, 2024, 4:09 PM IST

1

ಕೈಕಂಬ: ಕೇರಳದ ವಯನಾಡ್‌, ಉತ್ತರ ಕನ್ನಡದ ಶಿರೂರಿನಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತಗಳು ಕಣ್ಣೆದುರಿಗೇ ಇವೆ. ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಕೂಡಾ ಅಪಾಯ ತೆರೆದುಕೊಂಡಿದೆ. ಇದರ ನಡುವೆ ಗುರುಪುರ ಸಮೀಪದ ಬೆಳ್ಳಿಬೆಟ್ಟು ಪ್ರದೇಶದಲ್ಲೂ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಯಾವುದೇ ಕ್ಷಣ ಅಪಾಯ ಎದುರಾಗುವ ಆತಂಕ ಮೂಡಿದೆ.
ಕೆತ್ತಿ ಕಲ್‌ ಬಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಗುಡ್ಡ ಜರಿತ ಸಂಭವಿಸಿದಂತೆ, ಗುರುಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೂಳೂರು ಗ್ರಾಮದ ಬೆಳ್ಳಿಬೆಟ್ಟು ಪ್ರದೇಶದಲ್ಲೂ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದು, ಗುಡ್ಡದಲ್ಲಿನ ಮರಗಳು ಕೂಡ ತಲೆ ಕೆಳಗಾಗಿ ಅದರೊಂದಿಗೇ ಬಂದಿವೆ.

ಎರಡು ಬಾರಿ ಕುಸಿತ
ಈಗಾಗಲೇ ಜು.25 ಮತ್ತು ಜು. 31ರಂದು ಎರಡು ಬಾರಿ ಗುಡ್ಡ ಜರಿತವಾಗಿ ಮಣ್ಣು ಕುಸಿದು ಹೆದ್ದಾರಿಗೆ ಬಂದು ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ತಡೆಯಾಗಿತ್ತು. ಈ ಘಟನೆಯಿಂದ ಯಾವುದೇ ಪ್ರಾಣಾ ಪಾಯವಾಗಿಲ್ಲವಾದರೂ ಎಚ್ಚರಿಕೆ, ಅಪಾಯದ ಮುನ್ಸೂಚನೆಯನ್ನು ನೀಡಿದೆ.

ಕುಸಿತಕ್ಕೆ ಕಾರಣವೇನು?
ಕೆತ್ತಿಕಲ್‌ನಲ್ಲಿ ರಾ. ಹೆದ್ದಾರಿ ಕಾಮಗಾರಿ ಒಂದೇ ಅಲ್ಲ, ಈ ಭಾಗದಿಂದ ಮಣ್ಣನ್ನು ಜೆಸಿಬಿ ಮೂಲಕ ಬೇರೆ ಕಡೆ ಒಯ್ಯುವ ಮಣ್ಣು ಮಾಫಿಯಾದಿಂದ ಅಪಾಯ ಹೆಚ್ಚಾಗಿದೆ ಎಂಬ ದೂರು ಕೇಳಿಬಂದಿತ್ತು. ಇದೇ ರೀತಿಯ ಪರಿಸ್ಥಿತಿ ಬೆಳ್ಳಿಬೆಟ್ಟುವಿನಲ್ಲೂ ಇದೆ. ಗುಡ್ಡದ ಮಣ್ಣನ್ನು ಜೆಸಿಬಿಗಳ ಮೂಲಕ ಅಗೆದು ಟಿಪ್ಪರ್‌ನಲ್ಲಿ ಕೊಂಡೊಯ್ಯು ವುದು ಈ ಗುಡ್ಡ ಕುಸಿತಕ್ಕೆ ಕಾರಣವೆಂದು ಅಲ್ಲಿನ ನಿವಾಸಿಗಳು ಹೇಳುತ್ತಾರೆ.

ಎಲ್ಲಿದೆ ಈ ಪ್ರದೇಶ?
ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಪೊಳಲಿ ದ್ವಾರ ಮತ್ತು ಗುರುಪುರ ಪೇಟೆಯ ಮಧ್ಯೆ ಬೆಳ್ಳಿಬೆಟ್ಟು ಪ್ರದೇಶವಿದೆ. ಕಿರಿದಾದ ಹೆದ್ದಾರಿ ತಿರುವುಗಳಿಂದ ಕೂಡಿದೆ. ಇನ್ನೊಂದೆಡೆ ಹೊಸ ರಾಷ್ಟ್ರೀಯ ಕಾಮಗಾರಿ ನಡೆಯುತ್ತಿದ್ದು, ಅದು ಬೇರೆ ಹಾದಿಯಲ್ಲಿ ಸಾಗುತ್ತಿದೆ.

ತಗ್ಗು ಪ್ರದೇಶದ ಮನೆಗಳಿಗೆ ಅಪಾಯ
ಕಳೆದ ಮಳೆಗಾಲದಲ್ಲಿ ಗುಡ್ಡ ಕುಸಿತದಿಂದ ಎರಡು ಬಾರಿ ರಸ್ತೆ ತಡೆಯಾಗಿದೆ. ಹೀಗೇ ಬಿಟ್ಟರೆ ಮುಂದೆ ಅದು ಇನ್ನಷ್ಟು ಕುಸಿದು ಹೆದ್ದಾರಿ ಮತ್ತು ಅದನ್ನೂ ದಾಟಿ ಕೆಳಗೆ ಉರುಳುವ ಅಪಾಯವಿದೆ. ಕೆಳಗಡೆ ತಗ್ಗು ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದು, ಅವುಗಳ ಮೇಲೆ ಗುಡ್ಡವೇ ಎರಗುವ ಅಪಾಯವೂ ಇದೆ. ಗುರುಪುರದಲ್ಲಿ ಕೆಲವು ವರ್ಷಗಳ ಹಿಂದೆ ಗುಡ್ಡವೊಂದು ಜಾರಿ ಹಲವು ಮನೆಗಳನ್ನು, ಜೀವಗಳನ್ನು ಆಪೋಷನ ಪಡೆದಿತ್ತು. ಬೆಳ್ಳಿಬೆಟ್ಟು ಭಾಗದ ಸಮೀಪದಲ್ಲಿಯೇ 100 ಮೀ.ದೂರದ ಗುಡ್ಡದಲ್ಲಿ ಕೆಲವು ಮನೆಗಳ ನಿರ್ಮಾಣವೂ ಆಗುತ್ತಿದೆ. ಗುಡ್ಡ ಕುಸಿದರೆ ಈ ಮನೆಗಳಿಗೂ ಅಪಾಯ ತರಲಿದೆ. ಅದಕ್ಕಿಂತ ಮುಂಚೆಯೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ.

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.