ಅಂಗಾರಗೆ 6ನೇ ಬಾರಿ ಒಲಿದ ಸುಳ್ಯ


Team Udayavani, May 16, 2018, 7:40 AM IST

angara-list-15-5.jpg

ಸುಳ್ಯ: ಏಳನೇ ಬಾರಿ ಕಣಕ್ಕಿಳಿದಿರುವ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌. ಅಂಗಾರ ಅವರು ಆರನೆಯ ಬಾರಿ ಅತ್ಯಧಿಕ ಅಂತರದ ಗೆಲುವು ಪಡೆದಿದ್ದಾರೆ. ಇದರೊಂದಿಗೆ ಸತತ ಆರು ಬಾರಿ ನಿರಂತರ ಗೆಲುವಿನ ದಾಖಲೆಗೆ ಭಾಜನರಾಗಿದ್ದಾರೆ.

26,068 ಅಂತರದ ಗೆಲುವು
ಈ ಹಿಂದಿನ ಐದು ಚುನಾವಣೆಗಳಿಗೆ ಹೋಲಿಸಿದರೆ, ಅಂಗಾರ ಈ ಬಾರಿ ದಾಖಲೆ ಅಂತರದ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಡಾ| ರಘು ಅವರ ವಿರುದ್ಧ 26,068 ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ. ಒಟ್ಟು 1,98,692 ಮತದಾರರಿದ್ದು, 1,68,768 ಮತಗಳು ಚಲಾವಣೆಯಾಗಿವೆ. ಅಂಗಾರ 95,205 ಮತಗಳನ್ನು ಗಳಿಸಿದರೆ, ಡಾ| ರಘು 69,137 ಮತ ಪಡೆದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ 1,372 ಮತಗಳ ಅಂತರದಿಂದ ಪ್ರಯಾಸದ ಗೆಲುವು ದಾಖಲಿಸಿದ್ದ ಅಂಗಾರ, ಐದು ವರ್ಷಗಳ ಅನಂತರ ಗೆಲುವಿನ ಅಂತರವನ್ನು 25 ಸಾವಿರಕ್ಕೂ ಮಿಕ್ಕಿ ಏರಿಸಿಕೊಂಡಿರುವುದು ಗಮನಾರ್ಹ ಸಂಗತಿ. 2018ರ ಚುನಾವಣೆಯಲ್ಲಿ 22 ಸಾವಿರ ಹೊಸ ಮತದಾರರ ಸೇರ್ಪಡೆ, 2013ರ ಚುನಾವಣೆಗಿಂತ 20,952 ಮತಗಳು ಹೆಚ್ಚು ಚಲಾವಣೆಗೊಂಡಿ ರುವುದು, ಚಲಾಯಿತ ಮತ ಪ್ರಮಾಣ ಶೇ. 4 ಹೆಚ್ಚಾಗಿರುವುದು ಕೂಡ ಬಿಜೆಪಿ ಗೆಲುವಿಗೆ ಪೂರಕವಾಗಿದೆ.


16 ಸುತ್ತಿನಲ್ಲಿ ಮುನ್ನಡೆ

ಮತ ಎಣಿಕೆಯ ಹದಿನೇಳು ಸುತ್ತುಗಳ ಪೈಕಿ ಬಿಜೆಪಿ ಹದಿನಾರು ಸುತ್ತಿನಲ್ಲಿ ಮುನ್ನಡೆ ಗಳಿಸಿತ್ತು. ಎರಡನೆ ಸುತ್ತಿನಲ್ಲಿ ಮಾತ್ರ ಕಾಂಗ್ರೆಸ್‌ 209 ಮತಗಳ ಮುನ್ನಡೆ ಹೊಂದಿತ್ತು. ಅಂಚೆ ಮತಗಳ ಪೈಕಿ ಅಂಗಾರ ಅವರಿಗೆ 1,041, ಡಾ| ರಘು ಅವರಿಗೆ 338 ಮತಗಳು ದೊರೆತಿವೆ. ಒಂದು ನೋಟಾ ಹಾಗೂ 16 ಮತಗಳು ತಿರಸ್ಕೃತಗೊಂಡಿವೆ. ಉಳಿದಂತೆ ಬಿಎಸ್‌ಪಿ ಅಭ್ಯರ್ಥಿ ರಘು ಧರ್ಮಸೇನಾ-1,472, ಪಕ್ಷೇತರ ಅಭ್ಯರ್ಥಿಗಳಾದ ಚಂದ್ರಶೇಖರ ಪೆಲತ್ತಡ್ಕ-333, ಸಂಜೀವ ಬಾಬುರಾವ್‌ ಕುರಂದವಾಡ-391, ಸುಂದರ ಕೆ.- 564 ಮತ ಪಡೆದಿದ್ದಾರೆ. 1,310 ನೋಟಾ ಮತಗಳು ದಾಖಲಾಗಿವೆ.

ಗೆಲುವಿನ ಓಟ
ದೊಡ್ಡತೋಟ ದಾಸನಕಜೆ ಕುಂಟಿಕಾನ ನಿವಾಸಿ ಸುಳ್ಳಿ ಅಂಗಾರ ಅವರು 1987ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ಅವರ ವಿರುದ್ಧ ಪರಾಜಿತಗೊಂಡಿದ್ದರು. 1994ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ 52,133 ಮತ ಪಡೆದು 15,051 ಅಂತರದಿಂದ ಗೆಲುವು ಪಡೆದಿದ್ದರು. 1999ರಲ್ಲಿ ಅಂಗಾರ ಅವರು ಕುಶಲ ಅವರ ವಿರುದ್ಧ 54,814 ಮತ ಪಡೆದು 6,997 ಅಂತರದಿಂದ ಗೆಲುವು ಪಡೆದಿದ್ದರು. 2004ರಲ್ಲಿ ಕಾಂಗ್ರೆಸ್‌ನ ಡಾ| ರಘು ಅವರ ವಿರುದ್ಧ ಅಂಗಾರ ಅವರು 61,480 ಮತ ಗಳಿಸಿ 17,085 ಅಂತರದ ಗೆಲುವು ದಾಖಲಿಸಿದ್ದರು. 2008ರಲ್ಲಿ ಕಾಂಗ್ರೆಸ್‌ನ ಡಾ| ರಘು ವಿರುದ್ಧ 61,144 ಮತ ಪಡೆದು, 4,322 ಅಂತರದಿಂದ ಗೆದ್ದಿದ್ದರು. 2013ರಲ್ಲಿ ಕಾಂಗ್ರೆಸ್‌ನ ಡಾ| ರಘು ವಿರುದ್ಧ ಅಂಗಾರ ಅವರು 65,013 ಮತ ಪಡೆದು, 1,372 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಕಾಂಗ್ರೆಸ್‌ಗೆ ಸೋಲು
1994ರಿಂದ ನಿರಂತರವಾಗಿ ಸೋಲು ಕಾಣುತ್ತಿರುವ ಕಾಂಗ್ರೆಸ್‌ ಈ ಬಾರಿ ಗೆಲ್ಲುವ ನಿರೀಕ್ಷೆ ಪ್ರದರ್ಶಿಸಿತ್ತು. ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಲು ತಯಾರಿ ನಡೆಸಿತ್ತು. ಕ್ಷೇತ್ರದಲ್ಲಿಯೂ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿಯ ಸ್ಪರ್ಧೆಯ ಲಕ್ಷಣ ಕಾಣಿಸಿತ್ತು. ಆದರೆ ಮತದಾನ ಸಂದರ್ಭದಲ್ಲಿ ಬೂತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಮುಂದೆ ಕಾಂಗ್ರೆಸ್‌ ಮಂಕಾದಂತೆ ಕಂಡಿತ್ತು. ಶೇ. 80ಕ್ಕಿಂತ ಹೆಚ್ಚು ಮತದಾನ ದಾಖಲಾದ ಸಂದರ್ಭದಲ್ಲೇ ಬಿಜೆಪಿ 15 ಸಾವಿರಕ್ಕಿಂತ ಅಧಿಕ ಮತಗಳ ಅಂತರದಿಂದ ಗೆಲ್ಲುವ ಲೆಕ್ಕಾಚಾರ ಮೂಡಿಸಿತ್ತು. ಅಂಗಾರ ಅವರು 25 ಸಾವಿರ ಮತಗಳ ಅಂತರದ ಗೆಲುವಿನ ವಿಶ್ವಾಸ ಹೊಂದಿದ್ದರು. ಫಲಿತಾಂಶದಲ್ಲಿ ಅದು ನಿಜವಾಗಿದೆ.

4 ಬಾರಿ ಮುಖಾಮುಖೀ
ಕಾಂಗ್ರೆಸ್‌ ಅಭ್ಯರ್ಥಿ ಡಾ| ರಘು ಮತ್ತು ಬಿಜೆಪಿ ಅಭ್ಯರ್ಥಿ ಎಸ್‌. ಅಂಗಾರ ಪರಸ್ಪರ ಮುಖಾಮುಖೀ ಆಗಿದ್ದು ಇದು ನಾಲ್ಕನೇ ಬಾರಿ. ಸತತ ನಾಲ್ಕು ಬಾರಿಯೂ ಅಂಗಾರ ಅವರ ಎದುರು ರಘು ಸೋಲನುಭವಿಸಿದ್ದಾರೆ. ಮೂರು ಚುನಾವಣೆಗಳಲ್ಲಿ ಡಾ| ರಘು ಅವರ ಸೋಲಿನ ಅಂತರ ಇಳಿಮುಖಗೊಂಡಿರುವುದರಿಂದ ನಾಲ್ಕನೇ ಬಾರಿಗೆ ಸ್ಪರ್ಧೆಗೆ ಅವಕಾಶ ದೊರೆತಿತ್ತು. ಆದರೆ ಮೊದಲ ಮೂರು ಚುನಾವಣೆಗಳಿಗಿಂತಲೂ ಭಾರಿ ಅಂತರದಿಂದ ಡಾ| ರಘು ಪರಾಜಿತಗೊಂಡಿದ್ದಾರೆ.

— ಕಿರಣ್‌ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.