ಕಟೀಲು ಆರು ಮೇಳಗಳ ತಿರುಗಾಟ ಆರಂಭ; ಕಾಲಮಿತಿ ಯಕ್ಷಗಾನ ಸೇವೆ

ಸಂಜೆ 5.45ಕ್ಕೆ ಚೌಕಿ ಪೂಜೆ...

Team Udayavani, Nov 24, 2022, 7:26 PM IST

1-wwqeqweqw

ದೀಪಾವಳಿ ಹಬ್ಬವಾದೊಡನೆ ಕರಾವಳಿಯಾದ್ಯಂತ ಸಾಂಸ್ಕೃತಿಕ ನೆಲಮೂಲದ ಹಬ್ಬ , ಆಚರಣೆಗಳಾದ ಜಾತ್ರೆ, ಭೂತಾರಾಧನೆ, ಯಕ್ಷಗಾನ ಮೇಳಗಳ ಸಂಚಾರ ಆರಂಭ. ಇವು ಕೇವಲ ಆಚರಣೆಗಷ್ಟೆ, ಪ್ರದರ್ಶನ ಮತ್ತು ಜೀವನೋಪಾಯಕ್ಕಷ್ಟೇ ಸೀಮಿತವಾಗದೆ ತನ್ನ ಅಂತಃಸತ್ತ್ವ ದಿಂದಾಗಿ ಮೌಲ್ಯಗಳ ಪ್ರಸರಣಕ್ಕೂ ಸಂಸ್ಕಾರಗಳ ಉದ್ದೀಪನಕ್ಕೂ ಕಾರಣವಾಗುತ್ತದೆ. ಕರಾವಳಿಗರ ಭಾವನೆಗಳಲ್ಲಿ ಬಂಧಿ ಯಾಗಿರುವ, ಅ ಧಿದೇವತೆಯ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ತನ್ನ ಆರು ತಂಡಗಳನ್ನೊಡಗೂಡಿ ಇಂದು ದಿಗ್ವಿಜಯಕ್ಕೆ ಸಜ್ಜಾಗಿದೆ. ಜನಮನದಲ್ಲಿ ಕಟೀಲು ದೇವಸ್ಥಾನದ ಕುರಿತಾಗಿ ಯಾವ ರೀತಿಯ ಶ್ರದ್ಧೆ ಇದೆಯೋ ಅದೇ ಸದ್ಭಾವನೆ ಕಟೀಲು ಮೇಳಗಳ ಮತ್ತು ಮೇಳದ ಆರಾಧ್ಯಮೂರ್ತಿಯ ಮೇಲಿದೆ. ಇದೊಂದು ರೀತಿಯ ಜಂಗಮ ದೇವಳವೆಂದೇ ಕರೆಯಬಹುದು. ಇದು ಕಲೆಯ ಮೂಲಕ ದೇವರ ಆರಾಧನೆ.

ಶತಮಾನದ ಐತಿಹಾಸಿಕ ಹಿನ್ನೆಲೆಯಿರುವ ಕಟೀಲು ಮೇಳದ ಸಂಚಾರಕ್ಕೆ ತನ್ನದೇ ಆದ ಸತ್ವಯುತ ಮಹತ್ವ ಮತ್ತು ಧಾರ್ಮಿಕ ಭಾವನೆ ಇದೆ. ಕಲೆಯ ಮೂಲಕ ಆಯಾ ಕಲಾಪ್ರದರ್ಶನದ ವಸ್ತು -ಧ್ವನಿ ಹೊರಡಿಸುವ ಸತ್ವಗಳು, ತತ್ವಗಳು ಧಾರ್ಮಿಕ ಭಾವಗಳು ಇವೆಲ್ಲವೂ ಒಟ್ಟಾಗಿ ಭಾರತೀಯ ಮೌಲ್ಯಗಳನ್ನು ಮತ್ತೆ ಮತ್ತೆ ಜನಮಾನಸದಲ್ಲಿ ಬಡಿದೆಬ್ಬಿಸುವಂಥ ಶಕ್ತಿಯುತ ಕೇಂದ್ರಗಳಾಗಿ ಕೆಲಸ ಮಾಡುತ್ತವೆ

ಶ್ರದ್ಧೆಯ ಹರಕೆ
20ರಿಂದ 25 ವರ್ಷಗಳಿಗಾಗುವಷ್ಟು ಪ್ರದರ್ಶನಗಳು ಈಗಲೇ ನೋಂದಣಿಯಾಗಿರುವುದು ಕರಾವಳಿಗರ ಯಕ್ಷಗಾನದ ಮೇಲಿನ ಶ್ರದ್ಧೆ, ಕಟೀಲು ದುರ್ಗೆಯ ಮೇಲಿನ ಭಕ್ತಿಗೆ ದ್ಯೋತಕವಾಗಿದೆ.

‌ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಪ್ರಿಯೆ. ಆದ್ದರಿಂದ ಭಕ್ತರು ತಮ್ಮ ಬಯಕೆ, ಇಷ್ಟಾರ್ಥ ಸಿದ್ಧಿಗೆ ತಾಯಿಗೆ ಯಕ್ಷಗಾನ ಸೇವೆಯನ್ನು ನೀಡುತ್ತೇವೆ ಎಂದು ಹರಕೆ ಹೊರುತ್ತಾರೆ. ಯಕ್ಷಗಾನ ನಡೆಯುವಲ್ಲಿ ಕಟೀಲು ಶ್ರೀದೇವಿಯೇ ಬರುತ್ತಾಳೆಂಬ ನಂಬಿಕೆ. ತಮ್ಮ ಮನೆಗೆ ಕಟೀಲು ಮಾತೆ ಆಗಮಿಸಬೇಕೆಂದು ಯಕ್ಷಗಾನ ಮಾಡುವ ಮೂಲಕ ದೇವಿಯ ಆರಾಧನೆ ಮಾಡುತ್ತಾರೆ

ದೇವಿ ಮಹಾತ್ಮೆ
ಕಟೀಲು ಮೇಳದಲ್ಲಿ “ಶ್ರೀ ದೇವಿ ಮಹಾತ್ಮೆ ಪ್ರಸಂಗಕ್ಕೆ ವಿಶೇಷ ಪ್ರಾಶಸ್ತ್ಯವಿದ್ದು, ಒಂದೊಂದು ಮೇಳಗಳಲ್ಲಿಯೂ ವರ್ಷಕ್ಕೆ ಕನಿಷ್ಠ 90ರಿಂದ 100ರಷ್ಟು ಇದೇ ಪ್ರಸಂಗವನ್ನು ಆಡಿಸಲಾಗುತ್ತದೆ. “ಶ್ರೀದೇವಿ ಲಲಿತೋಪಾಖ್ಯಾನ’, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಎಲ್ಲಾ ಪೌರಾಣಿಕ ಪ್ರಸಂಗಗಳನ್ನು ಆಡಿಸಲಾಗುತ್ತದೆ. ಈಗಿನ ಜನಮನದಲ್ಲಿ ಮುಖ್ಯವಾಗಿ ಬೇಕಾಗಿರುವಂಥ ಮೌಲ್ಯಪ್ರಜ್ಞೆಯ ಉದಯ ಇಂಥ ಕಲಾತಂಡಗಳ ಪ್ರದರ್ಶನದಿಂದಾಗುತ್ತದೆ. ಅತ್ಯಂತ ಸರಳವಾಗಿ ಭಾರತೀಯ ಮೌಲ್ಯಪರಂಪರೆಯ ಪ್ರಸರಣ ಪ್ರಾಚೀನದಲ್ಲಿ ಆಗುತ್ತಿದ್ದುದು ನಾಟಕ ತಂಡಗಳ (ಭರತನ ನಾಟ್ಯಶಾಸ್ತ್ರಕ್ಕೆ ಸಾಮಿಪ್ಯದಲ್ಲಿ ಇದ್ದು ಪ್ರದರ್ಶನ ಕೊಡುವ ಕಲೆ ಯಕ್ಷಗಾನ ಎಂಬುದು ವಿದ್ವಾಂಸರು ಒಪ್ಪಿದ ವಿಚಾರ) ಮೂಲಕವೆಂಬುದು ಐತಿಹಾಸಿಕ ತಥ್ಯ. ಅದೇ ಪರಂಪರೆಯನ್ನು ಯಕ್ಷಗಾನ ತಂಡಗಳು ಮುಂದುವರಿಸುತ್ತಾ ಇವೆ.

ಕಟೀಲು ಮೇಳದ ಕಲಾವಿದರು, ದೇವಸ್ಥಾನದ ಅರ್ಚಕ ವೃಂದ, ಮೇಳದ ವ್ಯವಸ್ಥಾಪಕರು , ದೇವಳದ ಆಡಳಿತ ಮಂಡಳಿಯ ಒಟ್ಟಂದದ ಕಾರ್ಯಪಟುತ್ವದಲ್ಲಿ ಇಲ್ಲಿಯವರೆಗೂ ಸಮರ್ಥವಾಗಿ ನಡೆದುಕೊಂಡು ಬಂದ ಮೌಲ್ಯ ಪ್ರಸರಣದ ಈ ಕಾರ್ಯ ಈ ವರುಷವೂ ಯಶಸ್ವಿಯಾಗಿ ನಡೆಯಲಿ ಎಂಬುದು ಹಾರೈಕೆ.

ಟ್ರಸ್ಟ್‌
ಕಟೀಲು ಆರು ಮೇಳಗಳಿಗೂ ಶ್ರೀ ದುರ್ಗಾಪರಮೇಶ್ವರೀ ಯಕ್ಷಧರ್ಮ ಭೋಧಿನಿ ಚಾರಿಟೇಬಲ್‌ ಟ್ರಸ್ಟ್‌ ನಿಂದ ಆರು ಬಸ್‌, ಆರು ಲಾರಿ ಹಾಗೂ ಜನರೇಟರ್‌ ಸೆಟ್‌ ಹಾಗೂ ವಿದ್ಯುದಲಂಕಾರ, ಧ್ವನಿವರ್ಧಕ ನೀಡಿದ್ದಾರೆ.

ಕಾಲಮಿತಿ
ಜಿಲ್ಲಾಧಿಕಾರಿಯವರು ಇದೊಂದು ವಿಶೇಷ ಪ್ರಕರಣ ಎಂದು ಪರಿಭಾವಿಸಿ ರಾತ್ರಿ 12.30ರವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಲಿಖಿತ ಅನುಮತಿ ನೀಡಿದ್ದಾರೆ. ಆದ್ದರಿಂದ ಈ ವರ್ಷ ಕಟೀಲು ಮೇಳಗಳು ಆರಂಭದ ಹಾಗೂ ಕೊನೆಯ ದಿನ ಪೂರ್ಣರಾತ್ರಿ ಪ್ರದರ್ಶನ ನೀಡಿ, ತಿರುಗಾಟವಿಡೀ ಸಂಜೆ 5.45ಕ್ಕೆ ಚೌಕಿ ಪೂಜೆ ನಡೆಸಿ 6.45ವರೆಗೆ ಪೂರ್ವರಂಗ ಪ್ರದರ್ಶನ ನೀಡಿ, ರಾತ್ರಿ 12.30ರವರೆಗೆ ಪ್ರಸಂಗ ಪ್ರದರ್ಶನ ನೀಡಲಿವೆ.
-ವಿ| ಹರಿನಾರಾಯಣದಾಸ ಆಸ್ರಣ್ಣ , ಕಟೀಲು

ಲೇಖನ : ಕೃಷ್ಣಪ್ರಕಾಶ ಉಳಿತ್ತಾಯ, ಮಂಗಳೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.