Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫಲ
Team Udayavani, Sep 27, 2024, 7:25 AM IST
ಮಂಗಳೂರು: ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕಾಗಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನ ನಡೆಸುತ್ತಿದ್ದೆ. ಕಳೆದ ವರ್ಷ 0.03 ಸೆಕೆಂಡ್ ಅಂತರದಿಂದ ಹಾಟ್ ಸೀಟ್ ತಪ್ಪಿತ್ತು. ಈ ವರ್ಷ ಅವಕಾಶ ಸಿಕ್ಕಿದ್ದು, ಈ ಮೂಲಕ ನನ್ನ ಹಾಗೂ ತಂದೆಯ ಕನಸು ನನಸಾಗಿದೆ ಎಂದು ಸೋನಿ ಟಿವಿಯಲ್ಲಿ ಪ್ರಸಾರಗೊಳ್ಳುವ ಕೌನ್ ಬನೇಗಾ ಕರೋಡ್ಪತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ 11 ಪ್ರಶ್ನೆಗಳಿಗೆ ಸರಿ ಉತ್ತರ ನೀಡಿರುವ ಮಂಗಳೂರಿನ ಪಂಪ್ವೆಲ್ ನಿವಾಸಿ ಅಪೂರ್ವ ಶೆಟ್ಟಿ ಸಂತಸ ಹಂಚಿಕೊಂಡಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಹಾಟ್ ಸೀಟ್ ವಂಚಿತಳಾದ ಹಿನ್ನೆಲೆಯಲ್ಲಿ ಈ ಬಾರಿಯೂ ಜಲ್ದಿ 5 ಬಜಲ್ ರೌಂಡ್ನಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೆಬಿಸಿ ಅನುಭವ ರೋಮಾಂಚನ ಉಂಟು ಮಾಡಿದೆ. ನನ್ನ ಕಾರ್ಯಕ್ರಮ ಸೆ.27ರಂದು ರಾತ್ರಿ 9ಕ್ಕೆ ಸೋನಿ ಟಿವಿಯಲ್ಲಿ ಪ್ರಸಾರಗೊಳ್ಳಲಿದೆ ಎಂದವರು ತಿಳಿಸಿದರು. ಬಿಕಾಂ ಪದವೀಧರೆಯಾಗಿರುವ ಅಪೂರ್ವ ಯುಪಿಎಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ತಂದೆ ಲೋಕನಾಥ ಶೆಟ್ಟಿ ಹಾಗೂ ಸಹೋದರಿ ಅನನ್ಯ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.