ಎಂಆರ್‌ಪಿಎಲ್‌ ತೈಲ ಸಂಸ್ಕರಣೆಗೆ ಕಾವೂರು ಒಳಚರಂಡಿ ನೀರು

44.4 ಎಂಎಲ್‌ಡಿ ಸಾಮರ್ಥ್ಯದ ಕಾವೂರು ಎಸ್‌ಟಿಪಿ

Team Udayavani, May 20, 2019, 6:00 AM IST

b-8

ಕಾವೂರು ಒಳಚರಂಡಿ ಸಂಸ್ಕರಣಾ ಘಟಕ

ಮಹಾನಗರ: ನೀರಿನ ಕೊರತೆ ಇದೀಗ ಕರಾವಳಿಯ ಪ್ರತಿಷ್ಠಿತ ಉದ್ಯಮ ಎಂಆರ್‌ಪಿಎಲ್‌ಗ‌ೂ (ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌) ಬಹುವಾಗಿ ಕಾಡುತ್ತಿದೆ. ಇಲ್ಲಿನ ಮೂರು ಘಟಕಗಳಲ್ಲಿ ಸದ್ಯ ಎರಡನೇ ಘಟಕವು, 44.4 ಎಂಎಲ್‌ಡಿ ಸಾಮರ್ಥ್ಯದ ಕಾವೂರು ಒಳಚರಂಡಿ ಸಂಸ್ಕರಣಾ ಘಟಕದ (ಎಸ್‌ಟಿಪಿ) ಕೊಳಚೆ ನೀರಿನ ಮೂಲಕ ಕಾರ್ಯನಿರ್ವಹಿಸುತ್ತಿದೆ!

ಎಂಆರ್‌ಪಿಎಲ್‌ನಲ್ಲಿ ಮೂರು ಘಟಕಗಳಲ್ಲಿ ತೈಲ ಸಂಸ್ಕರಣೆ ನಡೆಸಲಾಗುತ್ತದೆ. ಇದರಲ್ಲಿ, ವಾರ್ಷಿಕ ನಿರ್ವಹಣೆ ನಿಟ್ಟಿನಲ್ಲಿ ಎಂಆರ್‌ಪಿಎಲ್‌ನ ಮೂರನೇ ಘಟಕದ ಕಾರ್ಯನಿರ್ವಹಣೆಯನ್ನು ಎಪ್ರಿಲ್‌ ಅಂತ್ಯದಲ್ಲಿ ಸ್ಥಗಿತಗೊಳಿಸಲಾಗಿತ್ತು. ನೀರಿಲ್ಲದ ಹಿನ್ನೆಲೆಯಲ್ಲಿ ಇಲ್ಲಿನ ಮೊದಲ ಘಟಕ ಮೇ 9ರಂದು ಸ್ಥಗಿತಗೊಂಡಿತ್ತು.

ಕುದ್ರೋಳಿಯಿಂದ ಕಾವೂರು ಎಸ್‌ಟಿಪಿಗೆ
ಕಾವೂರು ಸಂಸ್ಕರಣಾ ಘಟಕಕ್ಕೆ ಕೊಳಚೆ ನೀರು ಕುದ್ರೋಳಿ ವೆಟ್‌ವೆಲ್‌ನಿಂದ ಬರುತ್ತಿದೆ. ಕುದ್ರೋಳಿ ವೆಟ್‌ವೆಲ್‌ನಿಂದ ಕಾವೂರು ಮುಲ್ಲಕಾಡ್‌ವರೆಗೆ ಪ್ರಸ್ತುತ 750 ಎಂಎಂ ಸಿಐ ಪೈಪ್‌ಗ್ಳ ಮೂಲಕ (ಹಳೆಯ ಕಾಲದ ಪೈಪ್‌ಗ್ಳು) ಒಳಚರಂಡಿ ನೀರು ಸಾಗಿಸಲಾಗುತ್ತಿದೆ. ಕುದ್ರೋಳಿ ವೆಟ್‌ವೆಲ್‌ನಿಂದ ಜಾಮಿಯಾ ಮಸೀದಿ, ಉರ್ವಸ್ಟೋರ್‌, ದಡ್ಡಲ್‌ಕಾಡ್‌ ಮಾರ್ಗವಾಗಿ, ಕುಂಟಿಕಾನ ಫ್ಲೈಓವರ್‌ ಆಗಿ, ಎಸ್‌ಟಿಪಿ ಮುಲ್ಲಕಾಡ್‌ ಸಂಪರ್ಕಿಸುತ್ತಿದೆ. ಎಸ್‌ಟಿಪಿಗೆ ಬಂದ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಎಸ್‌ಇಝಡ್‌-ಎಂಆರ್‌ಪಿಎಲ್‌ ಪಡೆದುಕೊಳ್ಳುತ್ತಿದೆ.

ಹೊಸ ಪೈಪ್‌ಲೈನ್‌ ಕಾಮಗಾರಿ
ಕಾವೂರು ಎಸ್‌ಟಿಪಿಗೆ ಸಂಪರ್ಕ ಕಲ್ಪಿಸುವ ತ್ಯಾಜ್ಯ ನೀರಿನ ಪೈಪ್‌ಲೈನ್‌ ಹಳೆಯದ್ದಾಗಿರುವುದರಿಂದ ಇದೀಗ ಪಾಲಿಕೆ ವತಿಯಿಂದ ಹೊಸದಾಗಿ ಕುದ್ರೋಳಿ ವೆಟ್‌ವೆಲ್‌ನಿಂದ ಕಾವೂರು ಮುಲ್ಲಕಾಡುವರೆಗೆ 7.65 ಕಿ.ಮೀ ಉದ್ದದಲ್ಲಿ 1100ಎಂಎಂ ಡಿಐ ಪೈಪ್‌ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ನೇತ್ರಾವತಿ-ಕಾವೂರು ಎಸ್‌ಟಿಪಿಯೇ ಆಧಾರ! ಎಂಆರ್‌ಪಿಎಲ್‌ ರಿಫೈನರಿಯನ್ನು ಚಲಾಯಿಸುವುದಕ್ಕೆ ಪ್ರತಿದಿನ 6 ಎಂಜಿಡಿ ಯಷ್ಟು ನೀರು ಬೇಕಾಗುತ್ತದೆ.

ಇದರಲ್ಲಿರುವ ಕ್ಯಾಪ್ಟಿವ್‌ ಪವರ್‌ ಪ್ಲಾಂಟ್‌ ಮೂಲಕ ವಿದ್ಯುತ್‌ ಉತ್ಪಾದಿಸಲು ನೀರು ಬೇಕು. ಅತ್ಯಧಿಕ 300, 400 ಡಿಗ್ರಿ ಸೆಲ್ಸಿ ಯಸ್‌ ಉಷ್ಣತೆಯಲ್ಲಿ ಕಚ್ಚಾ ತೈಲ ವನ್ನು ಸಂಸ್ಕರಿಸಲಾಗುತ್ತಿದ್ದು, ಅದನ್ನು ತಣಿ ಸುವುದಕ್ಕೆ ಮತ್ತೆ ಭಾರೀ ಪ್ರಮಾ ಣದ ನೀರಿನ ಅಗತ್ಯವಿದೆ. ಇದಕ್ಕಾಗಿ ನೇತ್ರಾವತಿ ನದಿ, ಕಾವೂರು ಒಳಚರಂಡಿ ಸಂಸ್ಕರಣಾ ಘಟಕದಿಂದ ನೀರು ಪಡೆಯಲಾಗುತ್ತಿತ್ತು. ನೇತ್ರಾವತಿಯ ನೀರು ಸದ್ಯ ಸ್ಥಗಿತವಾದ ಕಾರಣ ಎರಡನೇ ಮೂಲವನ್ನು ಆಶ್ರಯಿಸಲಾಗಿದೆ.

ತಣ್ಣೀ ರು ಬಾವಿಯಲ್ಲಿ ರಾಜ್ಯದ ಮೊದಲ ಸಮುದ್ರ ನೀರು ಸಂಸ್ಕ ರಣಾ ಘಟಕ (ಡಿಸಲೈನೇಶನ್‌ ಪ್ಲಾಂಟ್‌) ನಿರ್ಮಾಣ ಕಾಮಗಾರಿ ಈಗಾ  ಗಲೇ ಆರಂಭಿಸಲಾಗಿದೆ. ಸಮು   ದ್ರದ ಉಪ್ಪು ನೀರನ್ನು ಸಂಸ್ಕರಿ ಸುವ ಈ ಯೋಜನೆ ಯಿಂದ ಪ್ರತಿ ದಿನ 5 ಮಿ.ಗ್ಯಾಲನ್‌ ನೀರು ಉತ್ಪಾದಿ ಸಬಹುದು.

4 ತ್ಯಾಜ್ಯ ಸಂಸ್ಕರಣಾ ಘಟಕ
ಕುದ್ರೋಳಿ, ಪಾಂಡೇಶ್ವರ, ಪಡೀಲ್‌, ಎಕ್ಕೂರು, ಕೊಟ್ಟಾರಚೌಕಿ ಸಹಿತ ನಗರದ ಒಟ್ಟು 22 ಕಡೆಗಳಲ್ಲಿ ಪಾಲಿಕೆಯು ವೆಟ್‌ವೆಲ್‌ ನಿರ್ಮಿಸಲಾಗಿದೆ. ಅಂದರೆ, ಶೌಚಾಲಯ, ಪಾತ್ರೆ ತೊಳೆಯುವ ನೀರು ಒಳಚರಂಡಿಯ ಮೂಲಕ ಮ್ಯಾನ್‌ಹೋಲ್‌ (ಒಟ್ಟು 24,365) ದಾಟಿ, ವೆಟ್‌ವೆಲ್‌ಗೆ ಹರಿಯುತ್ತದೆ. ಅಲ್ಲಿಂದ ನಗರದ ನಾಲ್ಕು ಕಡೆಗಳಲ್ಲಿ ಪಾಲಿಕೆ ವತಿಯಿಂದ ನಿರ್ಮಿಸಿರುವ ಎಸ್‌ಟಿಪಿಗೆ (ಸಂಸ್ಕರಣಾ ಘಟಕ) ಬರುತ್ತದೆ. 16 ಎಂಎಲ್‌ಡಿ ಸಾಮರ್ಥ್ಯದ ಸುರತ್ಕಲ್‌ ಎಸ್‌ಟಿಪಿ, 20 ಎಂಎಲ್‌ಡಿಯ ಜಪ್ಪಿನಮೊಗರು ಎಸ್‌ಟಿಪಿ, 44.4 ಎಂಎಲ್‌ಡಿಯ ಕಾವೂರು ಎಸ್‌ಟಿಪಿ, 8.7 ಎಂಎಲ್‌ಡಿ ಸಾಮರ್ಥ್ಯದ ಪಚ್ಚನಾಡಿ ಎಸ್‌ಟಿಪಿಯಲ್ಲಿ ತ್ಯಾಜ್ಯ ನೀರು ಸಂಸ್ಕರಣೆಯಾಗುತ್ತದೆ. ಇದರಲ್ಲಿ ಕಾವೂರು ಎಸ್‌ಟಿಪಿಯ ನೀರು ಮಾತ್ರ ಸದ್ಯ ಎಂಆರ್‌ಪಿಎಲ್‌ ಪಡೆದುಕೊಳ್ಳುತ್ತಿದೆ.

ಒಳಚರಂಡಿ ನೀರೇ ಆಧಾರ
ನೀರಿನ ಕೊರತೆ ಎದುರಾದ ಹಿನ್ನೆಲೆಯಲ್ಲಿ ಎಂಆರ್‌ಪಿಎಲ್‌ನ ಎರಡನೇ ಘಟಕ ಮಾತ್ರ ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಕಾವೂರಿನ ಒಳಚರಂಡಿ ಸಂಸ್ಕರಿತ ನೀರನ್ನು ಬಳಸಲಾಗುತ್ತಿದೆ. ಸದ್ಯಕ್ಕೆ ಈ ನೀರು ಆಧಾರವಾಗಿದೆ.
– ಎಂ. ವೆಂಕಟೇಶ್‌, ವ್ಯವಸ್ಥಾಪಕ ನಿರ್ದೇಶಕರು, ಎಂಆರ್‌ಪಿಎಲ್‌

-  ದಿನೇಶ್‌ ಇರಾ

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Tulu ಲಿಪಿ ಯುನಿಕೋಡ್‌ಗೆ! ಹೊಸ ಮೈಲಿಗಲ್ಲು

Tulu ಲಿಪಿ ಯುನಿಕೋಡ್‌ಗೆ! ಹೊಸ ಮೈಲಿಗಲ್ಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.