ರೋನ್‌ರೋಚ್‌ ಅವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪ್ರದಾನ


Team Udayavani, Jul 11, 2017, 2:25 AM IST

Award-10-7.jpg

ಬಿಕರ್ನಕಟ್ಟೆ: ಖ್ಯಾತ ಕೊಂಕಣಿ ಸಾಹಿತಿ ರೋನ್‌ ರೋಚ್‌ ಅವರಿಗೆ 2017ನೇ ಸಾಲಿನ ದಿ| ವಿಕ್ಟರ್‌ ರೊಡ್ರಿಗಸ್‌ ಆಂಜೆಲೊರ್‌ ಸ್ಮಾರಕ ಕೊಂಕಣಿ ಸಾಹಿತ್ಯ ಪ್ರಶಸ್ತಿಯನ್ನು ರವಿವಾರ ನಗರದ ಬಿಕರ್ನಕಟ್ಟೆ ಬಾಲ ಯೇಸು ಪುಣ್ಯಕ್ಷೇತ್ರದ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಮಂಗಳೂರು ಧರ್ಮಪ್ರಾಂತದ ಎಪಿಸ್ಕೋಪಲ್‌ ವಿಗಾರ್‌ ಕಾರ್ಮೆಲೈಟ್‌ ಧರ್ಮಗುರು ರೆ| ಡಾ| ಪಿಯುಸ್‌ ಡಿ’ಸೋಜಾ ಅವರು ಪ್ರಶಸ್ತಿ ಪ್ರದಾನ ಮಾಡಿದರು. ದಿವಂಗತ ವಿಕ್ಟರ್‌ ರೊಡ್ರಿಗಸ್‌ ಅವರ ಸೇವಾ ಮನೋಭಾವವನ್ನು ಕೊಂಡಾಡಿದ ಅವರು ಪ್ರಶಸ್ತಿ ವಿಜೇತ ರೋನ್‌ ರೋಚ್‌ ಅವರ ಕೊಂಕಣಿ ಸಾಹಿತ್ಯದ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದರು.

ಪ್ರಶಸ್ತಿಯು 10,000 ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ, ಫಲಪುಷ್ಪ, ಶಾಲು ಮತ್ತು ಸಮ್ಮಾನವನ್ನು ಒಳಗೊಂಡಿದೆ. ಮುಖ್ಯ ಅತಿಥಿ ಧರ್ಮಗುರು ರೆ| ಡಾ| ವಿಲ್ಫೆ†ಡ್‌ ರೊಡ್ರಿಗಸ್‌ ಅವರು ಕೊಂಕಣಿ ಪ್ರತಿಕೆ “ನಮಾನ್‌ ಬಾಳೊಕ್‌ ಜೆಜು’ 2001ರಲ್ಲಿ ಆರಂಭಿಸುವಾಗ ದಿವಂಗತ ವಿಕ್ಟರ್‌ ರೊಡ್ರಿಗಸ್‌ ಅವರು ನೀಡಿದ ಸಹಕಾರವನ್ನು ಸ್ಮರಿಸಿದರು. ಇನ್ನೋರ್ವ ಮುಖ್ಯ ಅತಿಥಿ ಖ್ಯಾತ ಕೊಂಕಣಿ ಸಾಹಿತಿ ನವೀನ್‌ ಕುಲಶೇಖರ್‌ ಅವರು ಕೊಂಕಣಿ ಭಾಷೆ, ಸಾಹಿತ್ಯವನ್ನು ಅಳಿಯದೆ ಉಳಿಸಲು ಹೆಚ್ಚೆಚ್ಚು ಜನರು ಪತ್ರಿಕೆಗಳನ್ನು ಖರೀದಿಸಿ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು. 

ಪ್ರಶಸ್ತಿ ಸ್ವೀಕರಿಸಿದ ರೋನ್‌ ರೋಚ್‌ ಅವರ ಪರವಾಗಿ ಅವರ ಪತ್ನಿ ಗ್ರೇಸ್‌ ಮಾರಿಯಾ ಅವರು ತಮ್ಮ ಪತಿಯ ಕೊಂಕಣಿ ಸಾಹಿತ್ಯ ಸೇವೆಯನ್ನು ಪರಿಗಣಿಸಿ ನೀಡಿದ ಪ್ರಶಸ್ತಿಗೋಸ್ಕರ ಕೃತಜ್ಞತೆ ಸಲ್ಲಿಸಿದರು. ಸಮನ್ವಯ ಸಂಸ್ಥೆಯ ನಿರ್ದೇಶಕ ರೆ| ಡಾ| ರೊನಾಲ್ಡ್‌ ಕುಟಿನ್ಹೊ ಅವರು ಸ್ವಾಗತಿಸಿ, ಸೆಲಿನ್‌ ರೊಡ್ರಿಗಸ್‌ ವಂದಿಸಿದರು. ರೆ| ಡಾ| ಪಿಯುಸ್‌ ಪಿಂಟೊ ಅವರು ಪ್ರಶಸ್ತಿ ವಿಜೇತರನ್ನು ಪರಿಚಯಿಸಿ, ಡೊಲ್ಫಿ ಲೋಬೊ ಕಾಸ್ಸಿಯಾ ನಿರೂಪಿಸಿದರು. ದಿ| ವಿಕ್ಟರ್‌ ರೊಡ್ರಿಗಸ್‌ ಅವರ ಜೀವನಕ್ಕೆ ಸಂಬಂಧಿಸಿದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ಹಲವಾರು ಕೊಂಕಣಿ ಸಾಹಿತಿಗಳು ಮತ್ತು ಪ್ರಶಸ್ತಿ ವಿಜೇತರ ಬಂಧು ಮಿತ್ರರು ಹಾಗೂ ದಿವಂಗತ ವಿಕ್ಟರ್‌ರವರ ಕುಟುಂಬದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.