![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 4, 2019, 12:27 PM IST
ಸುಬ್ರಹ್ಮಣ್ಯ: ಕುಕ್ಕೆ ದೇವಸ್ಥಾನದ ಆಡಳಿತ ಕಚೇರಿಯೊಳಗೆ ಶನಿವಾರ ಸಂಜೆ ಮಠದ ಸಿಬಂದಿಗೆ ಹಲ್ಲೆ ನಡೆಸಿರುವುದಕ್ಕೆ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಹಲವು ಅರ್ಚಕರು ಹಾಗೂ ಸಿಬಂದಿ ವರ್ಗದವರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದ ಕಾರ್ಯನಿರ್ವ ಹಣಾಧಿಕಾರಿ ರವೀಂದ್ರ ಎಂ. ಎಚ್. ಅವರನ್ನು ಸೋಮವಾರ ಭೇಟಿ ಮಾಡಿದ ಮಠದ 50ಕ್ಕೂ ಅಧಿಕ ಸಿಬಂದಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಕುಕ್ಕೆಯು ಸಾರ್ವಜನಿಕ ದೇಗುಲವಾಗಿದ್ದು, ಎಲ್ಲರಿಗೂ ಮುಕ್ತ ಪ್ರವೇಶಾವಕಾಶವಿದೆ. ದೇವಸ್ಥಾನದ ಗೋಪುರದ ಮುಂದೆ ಇದ್ದ ಮಠದ ಸಿಬಂದಿ ಕುಮಾರ ಬನ್ನಿಂತಾಯರನ್ನು ಏಕಾಏಕಿ ಆಡಳಿತ ಕಚೇರಿಯೊಳಗೆ ಕರೆದೊಯ್ದು ಹಲ್ಲೆ ನಡೆಸಿರುವುದು ಖಂಡನೀಯ. ವ್ಯವಸ್ಥಾಪನ ಸಮಿತಿಯು ದೇಗುಲಕ್ಕೆ ಬರುವ ಭಕ್ತರ ಮೂಲಸೌಕರ್ಯ ಈಡೇರಿಕೆ ಸಹಿತ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರಕಾರದಿಂದ ನೇಮಕಗೊಂಡ ಸಮಿತಿಯಾಗಿದೆ. ಸಮಿತಿ ಸದಸ್ಯರೇ ಹಲ್ಲೆಯಲ್ಲಿ ಭಾಗಿಯಾಗಿರುವುದು ಗೂಂಡಾಗಿರಿ ವರ್ತನೆಯಾಗಿದೆ. ಅವರ ವಿರುದ್ಧ ಕ್ರಮ ಜರಗಿಸಬೇಕು. ಪುಣ್ಯ ಕ್ಷೇತ್ರದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಬಾರದು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ದೇಗುಲದ ಕಾರ್ಯನಿರ್ವಹಣಾಧಿಕಾರಿ, ಆಡಳತ ಮಂಡಳಿ ಜತೆ ಚರ್ಚೆ ನಡೆಸಿ ಮುಂದೆ ಕ್ರಮ ಜರಗಿಸುವ ಭರವಸೆ ನೀಡಿದರು. ಮಠದ ಸಿಬಂದಿಗೆ ದೇವಸ್ಥಾನದ ವ್ಯಾಪ್ತಿಯಲ್ಲಿ ತೊಂದರೆ ಆದಲ್ಲಿ ತನ್ನ ಗಮನಕ್ಕೆ ತಿಳಿಸಿದರು.
ಮೂವರಿಗೂ ಜಾಮೀನು
ಕುಮಾರ ಬನ್ನಿಂತಾಯರಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಾದ ಮಹೇಶ್ಕುಮಾರ್ ಕರಿಕ್ಕಳ, ಗುರುಪ್ರಸಾದ್ ಪಂಜ ಹಾಗೂ ಪ್ರಶಾಂತ್ ಭಟ್ ಮಾಣಿಲ ಅವರಿಗೆ ಸುಳ್ಯ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.