ಕುಮಾರಧಾರಾ ನದಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಅವಭೃಥ ಸ್ನಾನ
Team Udayavani, Nov 26, 2017, 10:51 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿ ಜಾತ್ರೆ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಶನಿವಾರ ಬೆಳಗ್ಗೆ ಪುಣ್ಯ ನದಿ ಕುಮಾರಧಾರಾದಲ್ಲಿ ಶ್ರೀ ದೇವರ ನೌಕಾವಿಹಾರ ಮತ್ತು ಅವಭೃಥ ಉತ್ಸವ ನಡೆಯಿತು. ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯರು ಅವಭೃಥ ಉತ್ಸವದ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಸಹಸ್ರಾರು ಭಕ್ತರು ಶ್ರೀ ದೇವರ ಅವಭೃಥ ಸ್ನಾನದಲ್ಲಿ ಭಾಗವಹಿಸಿದರು.
ಓಕುಳಿ ಪೂಜೆ, ಓಕುಳಿ ಚೆಲ್ಲಾಟ
ಬೆಳಗ್ಗೆ ದೇಗುಲದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ನೆರವೇರಿತು. ಬಳಿಕ ದೇವರಿಗೆ ಓಕುಳಿ ಸಮರ್ಪಣೆಯಾಗಿ ಭಕ್ತರಿಗೆ ಓಕುಳಿ ಪ್ರೋಕ್ಷಣೆ ಮತ್ತು ಓಕುಳಿ ಚೆಲ್ಲಾಟ ನಡೆಯಿತು. ಅನಂತರ ಶ್ರೀ ದೇವರ ಅವಭೃಥ ಉತ್ಸವದ ಸವಾರಿ ಶ್ರೀ ದೇಗುಲದಿಂದ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನೆರವೇರಿತು.
ನೌಕಾವಿಹಾರ
ಕುಮಾರಧಾರಾ ನದಿಯ ಮತ್ಸ್ಯ ತೀರ್ಥದಲ್ಲಿ ಶ್ರೀ ದೇವರ ನೌಕಾವಿಹಾರ ನಡೆಯಿತು. ಕುಮಾರಧಾರೆಯ ಮತ್ಸ್ಯತೀರ್ಥದ ಶ್ರೀ ದೇವರ ಜಳಕದಗುಂಡಿಯಲ್ಲಿ ಶ್ರೀ ದೇವರ ಅವಭೃಥ ಉತ್ಸವದ ಧಾರ್ಮಿಕ ವಿಧಿವಿಧಾನವನ್ನು ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯ ನೆರವೇರಿಸಿದರು. ಜಳಕದ ಬಳಿಕ ಕುಮಾರಧಾರಾ ನದಿತೀರದ ಅವಭೃಥ ಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನೆರವೇರಿತು. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃಥ ಉತ್ಸವದ ಸಂದರ್ಭದಲ್ಲಿ ಕ್ಷೇತ್ರದ ಗಜರಾಣಿ ಯಶಸ್ವಿ ಎಲ್ಲರಂತೆ ತಾನೂ ಕೂಡ ಸ್ನಾನ ಮಾಡಿ, ಜಲಕ್ರೀಡೆಯಾಡಿ ಸಂಭ್ರಮಿಸಿತು.
ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್., ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರ ಶೇಖರ ಪೇರಾಲ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಗೌಡ ಬಳ್ಳೇರಿ, ಮಾಧವ ಡಿ., ಮಾಸ್ಟರ್ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ ಮತ್ತು ಭಕ್ತರು ಉಪಸ್ಥಿತರಿದ್ದರು. ಅನಂತರ ದೇಗುಲಕ್ಕೆ ಶ್ರೀ ದೇವರ ಸವಾರಿ ಹೊರಟಿತು. ಅಲ್ಲಲ್ಲಿ ಭಕ್ತರು ಹೂ, ಹಣ್ಣುಕಾಯಿ, ಕರ್ಪೂರಾರತಿಗಳನ್ನು ದೇವರಿಗೆ ಸಮರ್ಪಿಸಿದರು.
ಡಿ. 1ರಂದು ಬಂಡಿ ಉತ್ಸವ
ಡಿ. 1ರಂದು ಕೊಪ್ಪರಿಗೆ ಇಳಿಯುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ. ಅಂದು ರಾತ್ರಿ ನೀರಿನಲ್ಲಿ ಶ್ರೀ ದೇವರ ಬಂಡಿ ಉತ್ಸವ ನಡೆಯಲಿದೆ. ದೇಗುಲದ ಹೊರಾಂಗಣದ ಸುತ್ತಲೂ ನೀರನ್ನು ತುಂಬಿಸಲಾಗುತ್ತದೆ. ರಾತ್ರಿ ಮಹಾ ಪೂಜೆಯ ಬಳಿಕ ಪಾಲಕಿ ಉತ್ಸವ ನೆರವೇರಿದ ಬಳಿಕ ನೀರಿನಲ್ಲಿ ಶ್ರೀ ದೇವರ ಬಂಡಿ ರಥೋತ್ಸವ ನಡೆಯುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.