ಕೆವಿಜಿ ಪುತ್ಥಳಿ ಸ್ಥಾಪನೆ: ಜಿಲ್ಲಾಡಳಿತ ನೋಟಿಸ್‌


Team Udayavani, Jan 28, 2019, 4:59 AM IST

28-january-3.jpg

ಸುಳ್ಯ : ನಗರದ ಖಾಸಗಿ ಬಸ್‌ ನಿಲ್ದಾಣದ ಬಳಿ ನಿರ್ಮಿಸಿದ ಆಧುನಿಕ ಸುಳ್ಯದ ನಿರ್ಮಾತೃ ಕುರುಂಜಿ ವೆಂಕಟ್ರ ಮಣ ಗೌಡ ಅವರ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಪಡೆದಿರುವ ದಾಖಲೆ ಕೇಳಿ ಜಿಲ್ಲಾಡಳಿತ ನೋಟಿಸ್‌ ಜಾರಿ ಮಾಡಿದೆ. ಪೂರಕ ದಾಖಲೆ ನೀಡದಿದ್ದರೆ 10 ದಿನ ಗಳೊಳಗೆ ತೆರವುಗೊಳಿಸುವ ಎಚ್ಚರಿಕೆ ನೀಡಿದೆ.

ನಗರ ಪಂಚಾಯತ್‌ ವ್ಯಾಪ್ತಿಯ ಖಾಸಗಿ ಬಸ್‌ ನಿಲ್ದಾಣದ ಬಳಿ ಕುರುಂಜಿ ಪುತ್ಥಳಿ ಸ್ಥಾಪಿಸಿದರೆ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತದೆ ಎಂದು ಡಿ.ಎಂ. ಶಾರಿಖ್‌ ಅವರು ಜಿಲ್ಲಾಧಿಕಾರಿ ಕಚೇರಿಗೆ ದೂರು ನೀಡಿದ್ದರು. ಈ ಬಗ್ಗೆ ಜಿಲ್ಲಾಡಳಿತವು ನ.ಪಂ. ಮುಖ್ಯಾಧಿಕಾರಿ, ಮಂಗಳೂರು ರಾ.ಹೆ. ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್‌, ಕೆವಿಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಮೈಸೂರು ಮೇಟಗಳ್ಳಿ ಕರ್ನಾಟಕ ರೋಡ್‌ ಡೆವಲಪ್‌ಮೆಂಟ್ ಕಾರ್ಪೋರೇಶನ್‌ ವಿಭಾಗದ ಎಂಜಿನಿಯರ್‌ ಅವರನ್ನು ಪ್ರತಿವಾದಿ ಗಳನ್ನಾಗಿಸಿ ಜ. 7ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಣೆ ನಡೆಸಿತ್ತು.

ಈ ಸಂದರ್ಭ ನ.ಪಂ. ಮುಖ್ಯಾಧಿಕಾರಿ 2015 ಆಗಸ್ಟ್‌ 29ರಂದು ನ.ಪಂ. ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ಒದಗಿಸಿದ್ದರು. ಆದರೆ ಇದನ್ನು ಅಧಿಕೃತ ಅನುಮತಿ ಎಂದು ಪರಿಗಣಿಸಲು ಅಸಾಧ್ಯ ಎಂದು ತೀರ್ಮಾನಿಸಲಾಗಿತ್ತು. ಉಳಿದ ಪ್ರತಿವಾದಿಗಳು ಪೂರಕ ದಾಖಲೆಗಳ ಮೂಲಕ ಪುತ್ಥಳಿ ಸ್ಥಾಪನೆ ಬಗ್ಗೆ ಸಮರ್ಥಿಸಿಕೊಂಡಿರದ ಕಾರಣ ಮುಂದಿನ ಹಂತದ ಪ್ರಕ್ರಿಯೆಗೆ ಮುಂದಾಗಿತ್ತು.

ತೆರವಿನ ಎಚ್ಚರಿಕೆಯ ನೋಟಿಸ್‌
ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಆಧರಿಸಿ ನಿರ್ಮಾಣ ಮಾಡ ದಿರುವ ಹಾಗೂ ಅನುಮತಿ ಪಡೆದಿರುವ ಮಾಹಿತಿ ಲಭ್ಯವಿಲ್ಲದ ಕಾರಣ ಪ್ರೋಟೆಕ್ಷನ್‌ ಆಫ್‌ ಪಬ್ಲಿಕ್‌ ಪ್ರಾಪರ್ಟಿ ಕಾಯ್ದೆ ಅಡಿ ತೆರವಿಗೆ ಅವಕಾಶ ಇದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ನ.ಪಂ.ಗೆ ನೋಟಿಸ್‌ ನೀಡಿದ್ದಾರೆ. ಅನುಮತಿ ಇದ್ದಲ್ಲಿ 10 ದಿನಗಳ ಒಳಗಾಗಿ ಸಂಬಂಧಪಟ್ಟರುವ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ.

ಸಂಘಟನೆಗಳಿಗೆ ನೋಟಿಸ್‌
2015ರ ನ.ಪಂ. ನಿರ್ಣಯ ಆಧರಿಸಿ ಪುತ್ಥಳಿ ನಿರ್ಮಾಣಕ್ಕೆ ಬೇಡಿಕೆ ಇರಿಸಿದ ಸಂಘ ಸಂಸ್ಥೆಗಳಿಗೆ ನೋಟಿಸ್‌ ನೀಡಲಾಗಿದೆ. ಅನುಮತಿ ಪೂರಕ ದಾಖಲೆ ಇದ್ದರೆ ಸಲ್ಲಿಸುವಂತೆ ಮುಖ್ಯಾಧಿಕಾರಿ ಮೂಲಕ ಕಾರ್ಯನಿರತ ಪತ್ರಕರ್ತರ ಸಂಘ, ಗಾಂಧಿ ಚಿಂತನೆ ವೇದಿಕೆ ಸಂಚಾಲಕರಿಗೆ ಪ್ರತಿ ಕಳುಹಿಸಲಾಗಿದೆ.

ತಿಂಗಳ ಹಿಂದೆ ಉದ್ಘಾಟನೆ
ಶಿಕ್ಷಣದ ಮೂಲಕ ಸುಳ್ಯವನ್ನು ಜಗತ್ತಿನ ಭೂಪಟದಲ್ಲಿ ಗುರುತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕುರುಂಜಿ ವೆಂಕಟರಮಣ ಗೌಡ ಅವರ ಪುತ್ಥಳಿಯನ್ನು ಡಾ| ಕುರುಂಜಿ ವೆಂಕಟ್ರಮಣ ಗೌಡ ಸ್ಮಾರಕ ಸಮಿತಿ ಆಶ್ರಯದಲ್ಲಿ 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಡಿ. 11ರಂದು ಕೇಂದ್ರ ಸಚಿವ ಸುರೇಶ್‌ ಪ್ರಭು ಅವರ ಉಪಸ್ಥಿತಿ ಯಲ್ಲಿ ಉದ್ಘಾಟಿಸಲಾಗಿತ್ತು. 1.5 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಅನುಮತಿ ನೀಡಿಲ್ಲ
ಪುತ್ಥಳಿ ಸ್ಥಾಪನೆಗೆ ಸಂಬಂಧಿಸಿದ ದಾಖಲೆಗಳು ಇದ್ದಲ್ಲಿ 10 ದಿನಗಳೊಳಗೆ ಸಲ್ಲಿಸಬೇಕು. ಇಲ್ಲದಿದ್ದರೆ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ನೋಟಿಸ್‌ ನೀಡಿದ್ದಾರೆ. ಪುತ್ಥಳಿ ನಿರ್ಮಾಣದ ಸ್ಥಳ ರಾ.ಹೆ. ವ್ಯಾಪ್ತಿಗೆ ಸೇರಿದೆ. ನಿರ್ಮಾಣ ಮಾಡುವವರು ಅಲ್ಲಿಂದ ಎನ್‌ಒಸಿ ಪಡೆದು, ನ.ಪಂ.ಗೆ ಅರ್ಜಿ ಸಲ್ಲಿಸಬೇಕು. ಸಾರ್ವಜನಿಕ ಆಕ್ಷೇಪಣೆಗಳಿದ್ದರೆ ಪಡೆದುಕೊಂಡು ನಾವು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸುವುದು ನಿಯಮ. ಈ ಪ್ರಕ್ರಿಯೆ ನ.ಪಂ. ಮೂಲಕ ಆಗಿಲ್ಲ. ಹಾಗಾಗಿ ಪುತ್ಥಳಿ ನಿರ್ಮಾಣಕ್ಕೆ ನ.ಪಂ. ಅನುಮತಿ ನೀಡಿಲ್ಲ.
 – ಮತ್ತಡಿ,ಮುಖ್ಯಾಧಿಕಾರಿ, ನ.ಪಂ. ಸುಳ್ಯ

ಸಾರ್ವಜನಿಕರಿಗೆ ತೊಂದರೆ
ಸಾರ್ವಜನಿಕರು ಓಡಾಟ ನಡೆಸುವ ಪ್ರದೇಶ ಆಗಿರುವ ಬಸ್‌ ನಿಲ್ದಾಣದಲ್ಲಿ ಪುತ್ಥಳಿ ನಿರ್ಮಿಸುವಂತಿಲ್ಲ. ಈ ಬಗ್ಗೆ ಹೈಕೋರ್ಟ್‌ ಆದೇಶ ಇತ್ತು. ನಿರ್ಮಾಣದ ಮೊದಲು ಕಾನೂನನ್ನು ಪಾಲಿಸಬೇಕಿತ್ತು. ಆರಂಭದಲ್ಲಿ ನ.ಪಂ.ಗೆ ಮಾಹಿತಿ ಕೇಳಿದ ಸಂದರ್ಭದಲ್ಲಿ ಅಲ್ಲಿಂದ ಸರಿಯಾದ ಉತ್ತರ ನೀಡದೆ ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಯೋಜನಾ ನಿರ್ದೇಶಕರಿಗೆ ದೂರು ನೀಡಿದ್ದೆ. ಕಾನೂನು ಎಲ್ಲರಿಗೂ ಒಂದೇ ಎನ್ನುವುದು ನನ್ನ ನಿಲುವು. ಅದು ಪಾಲನೆ ಆಗಬೇಕು.
– ಡಿ.ಎಂ. ಶಾರೀಕ್‌ , ದೂರು ಸಲ್ಲಿಸಿದವರು

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.