ಅರ್ಪಾಜೆ ಕೆರೆ ಒತ್ತುವರಿ ಆರೋಪ: ಗಡಿ ಗುರುತಿಗೆ ವಿಳಂಬ


Team Udayavani, Jun 26, 2018, 3:20 AM IST

kadaba-kere-25-6.jpg

ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ. 33/3ರಲ್ಲಿ  0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ, ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ ಅವರು, ಕೆರೆಯನ್ನು ಅಳೆದು ಗಡಿ ಗುರುತು ಮಾಡಿ, ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ ನಿರೀಕ್ಷಕರಿಗೆ ಮೌಖಿಕ ಆದೇಶ ನೀಡಿದ್ದರು. ಅದರಂತೆ ಕಂದಾಯ ನಿರೀಕ್ಷಕರು ಕೆರೆಯನ್ನು ಅಳತೆ ಮಾಡಿ ಗಡಿ ಗುರುತು ಮಾಡಿಕೊಡಲು ಪತ್ರ ಬರೆದಿದ್ದರೂ ಭೂಮಾಪನ ಇಲಾಖೆ ಗಡಿ ಗುರುತು ಮಾಡಿಲ್ಲ. ಕೆರೆಯ ಜಮೀನಿನ ಗಡಿ ಗುರುತು ಮಾಡಲು ಭೂಮಾಪನ ಇಲಾಖೆ ಮುಂದಾಗದಿರುವುದು ಸ್ಥಳೀ ಯರ ಆಕ್ರೋಶಕ್ಕೆ ಕಾರಣವಾಗಿದೆ.

ಪರಿಸರಕ್ಕೆ ನೀರುಣಿಸುತ್ತಿದ್ದ ಕೆರೆ
ಅರ್ಪಾಜೆಯ ಸರಕಾರಿ ಕೆರೆ ಉದೇರಿ, ನಾಲ್ಗುತ್ತು ಹಾಗೂ ಅರ್ಪಾಜೆ ಪರಿಸರದ ಕೃಷಿ ತೋಟಗಳಿಗೆ ಹಾಗೂ ಭತ್ತದ ಗದ್ದೆಗಳಿಗೆ ನೀರುಣಿಸುತ್ತಿತ್ತು. ಪರಿಸರದಲ್ಲಿ ಅಂತರ್ಜಲಮಟ್ಟ ಏರಿಕೆಗೂ ಕಾರಣವಾಗಿತ್ತು. ಆದರೆ ಇದೀಗ ಸದ್ರಿ ಕೆರೆಯಲ್ಲಿ ಮಳೆಗಾಲದಲ್ಲಿಯೂ ನೀರು ನಿಲ್ಲಲು ಅವಕಾಶ ನೀಡುತ್ತಿಲ್ಲ. ಕಾಲುವೆಯನ್ನು 7ರಿಂದ 8 ಅಡಿ ಆಳಗೊಳಿಸಿರುವುದರಿಂದ ನಿರಂತರ ಮಳೆ ಸುರಿದರೂ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಕೆರೆಯಲ್ಲಿ ನೀರು ನಿಲ್ಲದೇ ಇರುವುದರಿಂದ ಕೆರೆಯು ಬಯಲು ಪ್ರದೇಶದಂತಾಗಿದ್ದು, ಪರಿಸರ ದಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಆದುದರಿಂದ ಕೆರೆಯ ಒತ್ತುವರಿಯನ್ನು ತೆರವುಗೊಳಿಸಿ ಕೆರೆಯ ನೀರು ಹರಿದು ಹೋಗುವ ಕಾಲುವೆಯನ್ನು ಮುಚ್ಚಿಸಿ ಕೆರೆಯನ್ನು ಸಂರಕ್ಷಣೆ ಮಾಡಬೇಕೆಂದು ಡಿಸಿ ನೀಡಿದ ದೂರಿನಲ್ಲಿ ಮನವಿ ಮಾಡಿದ್ದರು.

ಕೃಷಿಕರ ಮನವಿ
ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸಿದರೆ ಮಳೆ ನೀರು ಇಂಗಿ ಪರಿಸರದ ಕೃಷಿ ಚಟುವಟಿಕೆಗಳಿಗೆ ಅನುಕೂಲ. ಬಾವಿಗಳಲ್ಲಿ ನೀರಿನ ಮಟ್ಟ ಏರುತ್ತದೆ. ಅರ್ಪಾಜೆ ಕೆರೆಯನ್ನು ಸ್ವಂತ ಖರ್ಚಿನಲ್ಲಿ ಗ್ರಾಮಸ್ಥರ ನೆರವಿನೊಂದಿಗೆ ಅಭಿವೃದ್ಧಿಪಡಿಸಲು ತಾಂತ್ರಿಕ ಅನುಮತಿ ನೀಡುವಂತೆ ಕೃಷಿಕ ಚಾಕೋ ಫಿಲಿಪ್‌ ಕಡಬ ಗ್ರಾ.ಪಂ. ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಆದರೆ ಕೆರೆಯ ಗಡಿ ಗುರುತು ಆಗದೆ ಅವರ ಮನವಿಗೆ ಇಲಾಖೆಗಳಿಂದೂ ಯಾವುದೇ ಪೂರಕ ಸ್ಪಂದನೆ ಸಿಕ್ಕಿಲ್ಲ.

ಅಭಿವೃದ್ಧಿಗೆ ಉತ್ಸುಕ
ಕೆರೆಯನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಕೃಷಿಕ ಚಾಕೋ ಫಿಲಿಪ್‌ ಅವರು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದಾರೆ. ಕೆರೆಗಳನ್ನು ಅಭಿವೃದ್ಧಿಪಡಿಸಲು ಪಂಚಾಯತ್‌ ಉತ್ಸುಕವಾಗಿದೆ. ಆದರೆ ಕೆರೆಯ ಗಡಿ ಗುರುತು ಆದ ಬಳಿಕವಷ್ಟೇ ನಾವು ಮುಂದುವರಿಯಲು ಸಾಧ್ಯ. ಕಂದಾಯ ಇಲಾಖೆಯಿಂದ ಕೆರೆಯನ್ನು ಅಳೆದುಕೊಡುವಂತೆ ಭೂಮಾಪನ ಇಲಾಖೆಗೆ ಪತ್ರ ಬರೆಯಲಾಗಿದೆ. ನಾವೂ ಪ್ರತ್ಯೇಕ ಪತ್ರ ಬರೆದಿದ್ದೇವೆ.
– ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಪಿಡಿಒ

— ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.