ಜಮೀನು ವಿಭಾಗ ಪತ್ರ ನೋಂದಣಿಗೆ ಲಾಕ್‌ಡೌನ್‌ ಕುತ್ತು

ಸರ್ವೇ ಇಲಾಖೆಯಿಂದ ಅವೈಜ್ಞಾನಿಕ ವಿನಾಯಿತಿ ಅವಧಿ ನಿಗದಿ ; ಪರಿಷ್ಕರಣೆಗೆ ಒತ್ತಡ

Team Udayavani, Jul 1, 2020, 6:43 AM IST

ಜಮೀನು ವಿಭಾಗ ಪತ್ರ ನೋಂದಣಿಗೆ ಲಾಕ್‌ಡೌನ್‌ ಕುತ್ತು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಳ್ತಂಗಡಿ: ರೈತರು ತಮ್ಮ ಜಮೀನಿನ ವಿಭಾಗ ಪತ್ರ ನೋಂದಣಿಗೆ ಸರ್ವೇ ಇಲಾಖೆಯಿಂದ ಪಡೆದ 11 ಇ ನಕ್ಷೆಗಳ ಕಾಲಮಿತಿ ಮುಗಿದುದರಿಂದ ಅವರು ದುಬಾರಿ ಶುಲ್ಕ ಪಾವತಿಸಿ ಮತ್ತೂಮ್ಮೆ ಅಳತೆ ಮಾಡಿಸಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸತತ ಎರಡು ತಿಂಗಳು ಲಾಕ್‌ ಡೌನ್‌ ಇದ್ದುದರಿಂದ ಸರಕಾರಿ ಕೆಲಸಗಳು ಮಂದಗತಿಯಲ್ಲಿವೆ. ಈ ನಡುವೆ ಭೂ ಪರಭಾರೆಗೆ ಪಡೆದ 11ಇ ನಕ್ಷೆ ನೋಂದಣಿಗೆ ಸರ್ವೇ ಇಲಾಖೆ ಕೇವಲ 1 ತಿಂಗಳ ವಿನಾಯಿತಿ ನೀಡಿತ್ತು.

ಈ ಅವಧಿಯಲ್ಲಿ ಇದಕ್ಕಾಗಿ ಸರ್ವೇ ಇಲಾಖೆ ಟೋಕನ್‌ ವ್ಯವಸ್ಥೆ ಆರಂಭಿಸಿತ್ತು. ಹೆಚ್ಚಿನ ಮಂದಿ ದೂರದೂರಿನಲ್ಲಿ ಸಿಲುಕಿದ್ದು, ವಿನಾಯಿತಿ ಅವಧಿ ವಿಸ್ತರಿಸುವುದು ಅಗತ್ಯವಾಗಿತ್ತು.

ಪ್ರತೀ ಸರ್ವೇ ನಂ.ಗೆ 1,200 ರೂ.
ಈ ಮಧ್ಯೆ ಸರ್ವರ್‌ ಸಮಸ್ಯೆ ಮತ್ತಿತರ ತೊಂದರೆ ಎದುರಾದ್ದರಿಂದ ಈಗಾಗಲೇ ಅರ್ಜಿ ಸಲ್ಲಿಸಿದವರ ಕಾಲಮಿತಿ ಮುಗಿದಿದೆ. ವಿನಾಯಿತಿ ಅವಧಿ ವಿಸ್ತರಿಸದೆ ಇರುವುದರಿಂದ ಕಾಲಮಿತಿ ಮುಗಿದಿರುವ ರೈತರು ಒಂದು ಸರ್ವೇ ನಂಬರಿಗೆ 1,200 ರೂ.ಗಳಂತೆ ಪಾವತಿಸಿ ಮತ್ತೂಮ್ಮೆ ಅಳತೆಗೊಳಪಡಿಸಿ ಹೊಸ ನಕ್ಷೆ ತಯಾರಿಸಿಕೊಳ್ಳಬೇಕಾದ ಅನಿವಾರ್ಯತೆ ಒದಗಿದೆ.

ನೋಂದಣಿ ಮೇಯಲ್ಲಿ ಆರಂಭಗೊಂಡರೂ ವೇಗವಾಗಿ ಆಗುತ್ತಿಲ್ಲ. ಪ್ರಸ್ತುತ ಜನರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನೋಂದಣಿ ಕಚೇರಿಗೆ ಸ್ಕಾ éನ್‌ ಮಾಡಿದ ದಸ್ತಾವೇಜು ಪ್ರತಿ ಇಮೇಲ್‌ ಮಾಡಿ, ಬಳಿಕ ಉಪನೋಂದಣಾಧಿಕಾರಿಗಳು ನಿಗದಿಪಡಿಸಿದ ದಿನ ಕಡತ ಹಾಜರುಪಡಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗೆ ಕನಿಷ್ಠ ಎರಡು ವಾರ ತಗಲುತ್ತದೆ.

ತಮ್ಮದಲ್ಲದ ತಪ್ಪಿನಿಂದ ಜನರಿಗೆ ಸಂಕಷ್ಟ
ಸರಕಾರವು ಎಲ್ಲ  ಕ್ಷೇತ್ರಗಳಲ್ಲಿ  ಕನಿಷ್ಠ 3 ತಿಂಗಳ ವಿನಾಯಿತಿ ಘೋಷಿಸಿದ್ದರೂ ಸರ್ವೇ ಇಲಾಖೆ ವ್ಯಾಪ್ತಿಗೆ ಕೇವಲ ಒಂದು ತಿಂಗಳು ಮಿತಿಗೊಳಿಸಿದೆ. ವಿನಾಯಿತಿ 3 ತಿಂಗಳು ಇದ್ದರೂ ಕೆಲವು ಕಡತಗಳಿಗೆ ಒಂದು ತಿಂಗಳ ಅವಧಿ ಸೂಚಿಸುತ್ತಿದೆ. ಈ ಕುರಿತು ಉಪನೋಂದಣಾಧಿಕಾರಿಗಳಿಗೂ ಸಮರ್ಪಕ ಮಾಹಿತಿ ಇಲ್ಲ.

ಇಲಾಖೆ ಈ ಬಗ್ಗೆ  ಸಾರ್ವಜನಿಕ ಪ್ರಕಟನೆ ನೀಡದಿರುವುದರಿಂದ ರೈತರಿಗೆ ಮಾಹಿತಿ ಲಭಿಸಿಲ್ಲ. ಇಲಾಖೆಯ ಈ ಕ್ರಮದಿಂದ 11ಇ ನಕ್ಷೆ ಪಡೆದು ಲಾಕ್‌ ಡೌನ್‌ನಿಂದಾಗಿ ನೋಂದಣಿಗೆ ಬಾಕಿಯಾಗಿರುವ ಎಲ್ಲ ಕಡತಗಳ ವಿಚಾರದಲ್ಲಿ ಜನರು ತಮ್ಮದಲ್ಲದ ತಪ್ಪಿಗೆ ದುಬಾರಿ ಮೊತ್ತ ತೆತ್ತು ಮತ್ತೆ ಅಳತೆ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಇದರಿಂದ ಬ್ಯಾಂಕ್‌ ವ್ಯವಹಾರ, ಜಮೀನು ವಿಭಾಗ ಪರಭಾರೆಗೂ ಹೊಡೆತ ಬಿದ್ದಿದೆ.

ಆರಂಭದಲ್ಲಿ  11ಇ ನಕ್ಷೆ ಪಡೆದು ನೋಂದಣಿಗೆ 6 ತಿಂಗಳ ಅವಧಿ ನೀಡಲಾಗಿತ್ತು. ಕೋವಿಡ್‌ ಕಾರಣದಿಂದ ಮೂರು ತಿಂಗಳ ಹೆಚ್ಚುವರಿ ಅವಧಿ ನೀಡಲಾಗಿದೆ. ಈ ಮಧ್ಯೆಯೂ ತಾಂತ್ರಿಕ ದೋಷದಿಂದ ನೋಂದಣಿಗೆ ಬಾಕಿ ಉಳಿದಿರುವ ಕಡತಗಳಿದ್ದಲ್ಲಿ  ಮತ್ತೂಮ್ಮೆ  ಪರಿಶೀಲಿಸಲು ಉಪನೋಂದಣಾಧಿಕಾರಿಗಳಿಗೆ ಸೂಚಿಸುತ್ತೇನೆ.
– ಶ್ರೀಧರ್‌ ಹೆಚ್ಚುವರಿ ನಿರ್ದೇಶಕರು, ಸರ್ವೇ ಇಲಾಖೆ, ಬೆಂಗಳೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.