ರಾ. ಹೆದ್ದಾರಿ 169 ಚತುಷ್ಪಥ ಕಾಮಗಾರಿ: ಭೂಮಾಲಕರ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಸುನಿಲ್‌


Team Udayavani, Jun 14, 2022, 5:20 AM IST

ರಾ. ಹೆದ್ದಾರಿ 169 ಚತುಷ್ಪಥ ಕಾಮಗಾರಿ: ಭೂಮಾಲಕರ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಸುನಿಲ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಕುಲಶೇಖರ-ಸಾಣೂರು ಭಾಗದ ಚತುಷ್ಪಥ ಕಾಮಗಾರಿಗೆ ಕುರಿತಂತೆ ಕೃಷಿ ಭೂಮಿ ಮತ್ತು ಪರಿವರ್ತಿತ ಭೂಮಿ ಎಂದು ತಾರತಮ್ಯ ಮಾಡಿ ಹತ್ತು ಪಟ್ಟು ಕಡಿಮೆ ಪರಿಹಾರ ನೀಡುತ್ತಿರುವ ರಾ. ಹೆ. ಪ್ರಾಧಿಕಾರದ ಧೋರಣೆಯಿಂದ ಆಗುವ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದಾಗಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಹೆದ್ದಾರಿ ಭೂಮಾಲಕರ ಹೋರಾಟ ಸಮಿತಿಯ ನಿಯೋಗದವರು ಸಚಿವರು ಹಾಗೂ ಸಂಸದ ನಳಿನ್‌ ಕುಮಾರ್‌, ಶಾಸಕ ಡಾ| ವೈ. ಭರತ್‌ ಶೆಟ್ಟಿ ಮತ್ತಿತರರನ್ನು ಭೇಟಿ ಮಾಡಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದರು.

ಪದವು ಮತ್ತು ಉಳಿಪಾಡಿ ಗ್ರಾಮಗಳ ಮತ್ತೆ ಕೆಲವು ಗ್ರಾಮಗಳ ಅವಾರ್ಡ್‌ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಬಾಕಿ ಇದ್ದು ಆದಷ್ಟು ಬೇಗ ಇತ್ಯರ್ಥ ಮಾಡಲಿದ್ದೇವೆ ಎಂದು ಯೋಜನಾ ಧಿಕಾರಿ ತಿಳಿಸಿದರು.

ಈ ತನಕ ಭೂಸ್ವಾ ಧೀನ ಆಗಿರುವ ಭೂಮಿಯ ವಿವರಗಳು ಮತ್ತು ಪರಿಹಾರ ನೀಡಿರುವ ಮತ್ತು ನೀಡಲು ಬಾಕಿ ಇರುವ ಭೂಮಿಯ ವಿವರ, ರಾಜ್ಯ ಹೈಕೋರ್ಟಿನಲ್ಲಿ ತಡೆಯಾಜ್ಞೆ ತಂದಿರುವ ಸುಮಾರು 270 ಜನರಿಗೆ ಸಂಬಂಧಿ ಸಿದ ಭೂಮಿಯ ವಿವರಗಳನ್ನು ಸಭೆಯಲ್ಲಿ ನೀಡಲಾಯಿತು.

ತಡೆಯಾಜ್ಞೆ ತೆರವಿಗೆ ಕ್ರಮ
ಸಾಣೂರು ಗ್ರಾಮದಿಂದ ಪ್ರಾರಂಭಿಸಿ ಕುಲಶೇಖರ ತನಕ 92 ಹೆಕ್ಟೇರ್‌ ಖಾಸಗಿ ಜಮೀನಿಗೆ ನೋಟಿಫಿಕೇಶನ್‌ ಆಗಿದ್ದು ಇದರಲ್ಲಿ 65 ಹೆಕ್ಟೇರ್‌ ಜಮೀನಿಗೆ ಅವಾರ್ಡ್‌ ಆಗಿದೆ. 27 ಹೆಕ್ಟೇರ್‌ ಜಮೀನಿಗೆ ಅವಾರ್ಡ್‌ ಇನ್ನೂ ಬಾಕಿ ಇದೆ. ಅವಾರ್ಡ್‌ ಆಗಿರುವಂತಹ 65 ಹೆಕ್ಟೇರ್‌ನಲ್ಲಿ 30 ಹೆಕ್ಟೇರ್‌ ಜಮೀನಿಗೆ ತಡೆಯಾಜ್ಞೆ ಇದೆ. ಜೂ.16ರ ಒಳಗೆ ಎಲ್ಲಾ ತಡೆಯಾಜ್ಞೆಗಳಿಗೆ ಕೋರ್ಟಿನಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಯೋಜನಾಧಿಕಾರಿ ವಿವರಿಸಿದರು.

ಪರಿಹಾರದ ಮೊತ್ತವನ್ನು ನಿರ್ಧರಿಸುವಾಗ ಗ್ರಾಮೀಣ ಭಾಗದಲ್ಲಿ 12.5 ಸೆಂಟ್ಸ್‌ ಮತ್ತು ನಗರ ವ್ಯಾಪ್ತಿಯಲ್ಲಿ 20 ಸೆಂಟ್ಸ್‌ ಜಾಗಗಳ ರಿಜಿಸ್ಟ್ರೇಷನ್‌ ಬೆಲೆಯನ್ನು ಗಣನೆಗೆ ತೆಗೆದುಕೊಂಡಿಲ್ಲ, ಆದರೆ ಹಿಂದೆ ಕುಂದಾಪುರ-ಸುರತ್ಕಲ್‌ ಭಾಗದ ಹೈವೇ ಭೂಸ್ವಾಧೀನದಲ್ಲಿ ಅದನ್ನು ಪರಿಗಣಿಸಲಾಗಿತ್ತು, ಇಲ್ಲಿ ಅದನ್ನು ಕೈಬಿಟ್ಟಿರುವುದರಿಂದ ಭೂಮಾಲಕರಿಗೆ ವಂಚನೆಯಾಗಿದೆ ಎಂದು ಹೋರಾಟ ಸಮಿತಿಯವರು ಸಚಿವರಿಗೆ ತಿಳಿಸಿದರು.

ಕೆಲಸ ತ್ವರಿತಕ್ಕೆ ಸಂಸದರ ಸೂಚನೆ
ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಪೂರ್ವಸಿದ್ಧತೆಯ ಕೆಲಸಗಳನ್ನು ಕೈಗೊಳ್ಳಬೇಕು ಎಂದು ಸಂಸದ ನಳಿನ್‌ ಇದೇ ವೇಳೆ ಗುತ್ತಿಗೆದಾರ ಕಂಪೆನಿ ಡಿಬಿಎಲ್‌ ಪ್ರತಿನಿಧಿಗಳಿಗೆ ಸೂಚಿಸಿದರು.

ಹೆದ್ದಾರಿ ಹೋರಾಟ ಸಮಿತಿಯ ಮರಿಯಮ್ಮ ಥಾಮಸ್‌, ಸಂಚಾಲಕ ಪ್ರಕಾಶ್‌ ಚಂದ್ರ, ಕಾರ್ಯದರ್ಶಿ ವಿಶ್ವಜಿತ್‌, ಸದಸ್ಯರಾದ ಜಯರಾಮ್‌ ಪೂಜಾರಿ, ರತ್ನಾಕರ ಶೆಟ್ಟಿ, ಬೃಜೇಶ್‌ ಶೆಟ್ಟಿ, ನರಸಿಂಹ ಕಾಮತ್‌, ಭೂ ಮಾಲಕರಾದ ಅನ್ನ ಮರಿಯ, ಪವನ್‌ ಕೋಟ್ಯಾನ್‌, ಪ್ರಸಾದ್‌ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.