ಭಾರತ ವಿಭಜನೆಯ ನೈಜ ಇತಿಹಾಸ ಅರಿಯಿರಿ: ಪ್ರೊ| ಭೈರಪ್ಪ
Team Udayavani, Feb 11, 2018, 8:15 AM IST
ಬಂಟ್ವಾಳ: ಐದು ಸಹಸ್ರ ವರ್ಷಗಳ ಹಿಂದೆ ಇದ್ದ ಅಖಂಡ ಭಾರತ ಹಂತಹಂತವಾಗಿ ವಿಭಜನೆಗೊಂಡು ಹಲವು ಪ್ರತ್ಯೇಕ ದೇಶಗಳು ಸೃಷ್ಟಿಯಾಗಿರುವ ನೈಜ ಇತಿಹಾಸವನ್ನು ವಿದ್ಯಾರ್ಥಿ ಸಮೂಹ ಅರಿತುಕೊಳ್ಳಬೇಕು ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ| ಕೆ. ಭೈರಪ್ಪ ಹೇಳಿದರು.
ಅವರು ಶನಿವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೀರ ಸಾವರ್ಕರ್ ಮಂಟಪದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆದ “ಭಾರತೀಯ ಶೌರ್ಯ ಪರಂಪರೆ’ ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಶಿಸ್ತುಬದ್ಧ, ರಾಷ್ಟ್ರಭಕ್ತ ವಿದ್ಯಾರ್ಥಿ ಗಳನ್ನು ಹೊಂದಿರುವ ಕಲ್ಲಡ್ಕ ವಿದ್ಯಾ ಕೇಂದ್ರದಲ್ಲಿ ಮುಂದಿನ ವರ್ಷಗಳಲ್ಲಿ ಈ ವಿಚಾರ ಸಂಕಿರಣವನ್ನು ರಾಷ್ಟ್ರ ಮಟ್ಟದಲ್ಲಿ ಎರಡು ದಿನ ನಡೆಸಿದರೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಲಾಭ ವಾಗುತ್ತದೆ ಎಂದವರು ಹೇಳಿದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಕರ್ನಲ್ ಪ್ರೊ| ಅರವಿಂದ ಕುಮಾರ್ ಗುಪ್ತ ಮಾತನಾಡಿ, ಯುವ ವಿದ್ಯಾರ್ಥಿಗಳ ಮೇಲೆ ಸಾಮಾಜಿಕ ಹೊಣೆ ಇದ್ದು, ಸೈನ್ಯ ಸೇರುವ ಮೂಲಕ ಅದನ್ನು ನಿರ್ವಹಿಸಿ ಎಂದು ಕರೆ ನೀಡಿದರು.
ಸುಳ್ಳು ಇತಿಹಾಸ
ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕೆ. ಪ್ರಭಾಕರ ಭಟ್ ಪ್ರಸ್ತಾವನೆ ನೀಡಿ, ರಾಜಕೀಯ ನಾಯಕರು ಸ್ವಾರ್ಥಕ್ಕಾಗಿ ಸುಳ್ಳು ಇತಿಹಾಸ ಸೃಷ್ಟಿಸಿದ್ದಾರೆ. ದೇಶಕ್ಕಾಗಿ ಬಲಿದಾನ ಮಾಡುವುದರ ಬದಲಾಗಿ ದೇಶಕ್ಕಾಗಿ ಬದುಕುವ ಜನರ ಅಗತ್ಯವಿದೆ. ಐರೆಲಂಡ್ ದೇಶದಲ್ಲಿ ನವ ದಂಪತಿ ವೀರ ಯೋಧರ ಸ್ಮಾರಕ ವೀಕ್ಷಿಸುವುದನ್ನೇ ಮಧುಚಂದ್ರವಾಗಿ ಆಚರಿಸುವ ಪರಿಪಾಠವಿದ್ದು, ಇದು ಮಾದರಿ ಎಂದರು.
ಈ ಸಂದರ್ಭದಲ್ಲಿ 62 ಮಂದಿ ನಿವೃತ್ತ ಯೋಧರನ್ನು ಸಮ್ಮಾನಿಸಲಾಯಿತು. ಆರ್ಎಸ್ಎಸ್ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ “ವೀರ ಯೋಧರ ಪರಿಚಯ ಪುಸ್ತಕ’ ಬಿಡುಗಡೆಗೊಳಿಸಿದರು. ಪ್ರಗತಿಪರ ಕೃಷಿಕ ಶಂಭು ಭಟ್ ಮಿಲಿಟರಿ ನಿಧಿಗೆ 1 ಲಕ್ಷ ರೂ. ದೇಣಿಗೆ ಸಮರ್ಪಿಸಿದರು. ಮಿಲಿಟರಿ ವೈದ್ಯ ಕ| ಡಾ| ಮೋಹನ ಕೃಷ್ಣ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಸ್ವಾಗತಿಸಿ, ಸಂಚಾಲಕ ವಸಂತ ಮಾಧವ ವಂದಿಸಿ ದರು. ಉಪನ್ಯಾಸಕಿ ಹರ್ಷಿತಾ ಯೋಧರನ್ನು ಪರಿಚಯಿಸಿದರು. ಉಪನ್ಯಾಸಕ ಯತಿರಾಜ್ ಮತ್ತು ವಿದ್ಯಾರ್ಥಿನಿ ಭವ್ಯಶ್ರೀ ನಿರೂಪಿಸಿದರು.
ವಿಷಯ ಮಂಡನೆ
“ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಶೌರ್ಯ ಪರಂಪರೆ’ ಬಗ್ಗೆ ಆರ್ಎಸ್ಎಸ್ ಪ್ರಾಂತ ಸಹ ಬೌದ್ಧಿಕ್ ಡಾ| ರವೀಂದ್ರ, “ಸ್ವಾತಂತ್ರೊéàತ್ತರ ಭಾರತ ದಲ್ಲಿ ಶೌರ್ಯ ಪರಂಪರೆ’ ಬಗ್ಗೆ ಸಂಸ್ಕಾರ ಭಾರತಿ ಪ್ರಾಂತ ಕಾರ್ಯದರ್ಶಿ ಆದರ್ಶ ಗೋಖಲೆ ಉಪನ್ಯಾಸ ನೀಡಿದರು. ಯೋಧರೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳು ಸ್ಫೂರ್ತಿ ಪಡೆದರು.
62 ಮಂದಿ ನಿವೃತ್ತ ಯೋಧರಿಗೆ ವೇದಿಕೆಯಲ್ಲಿ ಸಮ್ಮಾನ, ಭಾರತೀಯ ಮಿಲಿಟರಿಯಲ್ಲಿ ಬಳಕೆಯಲ್ಲಿರುವ “ಟಿ 90 ಭೀಷ್ಮ’ ಟ್ಯಾಂಕರ್ ಮಾದರಿಯ ವೇದಿಕೆ, ವೇದಿಕೆಯ ಹೊರಾಂಗಣದಲ್ಲಿ ಗಾಳಿಯಲ್ಲಿ ತೇಲುತ್ತಿದ್ದ ದೇಶೀ ನಿರ್ಮಿತ ಚೀತಾ ಹೆಲಿಕಾಪ್ಟರ್ನ ಪ್ರತಿಕೃತಿ, ಸೈನಿಕರ ಬಂಕರ್ ಮಾದರಿ, ಛತ್ರಪತಿ ಶಿವಾಜಿ, ಕೋಟಿ-ಚೆನ್ನಯ, ವೀರರಾಣಿ ಅಬ್ಬಕ್ಕ, ಒನಕೆ ಓಬವ್ವ ಮತ್ತಿತರ ವೇಷಧಾರಿಗಳಿದ್ದ ಸ್ತಬ್ಧಚಿತ್ರಗಳು ಗಮನ ಸೆಳೆದವು.
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲಡ್ಕಕ್ಕೆ ಆಗಮಿಸಿ ಈ ವಿಶಿಷ್ಟ ವಿಚಾರಸಂಕಿರಣವನ್ನು ಉದ್ಘಾಟಿಸಬೇಕಿತ್ತು. ಆದರೆ ಜಮ್ಮುವಿನ ಸಂಜ್ವಾನ್ ಮಿಲಿಟರಿ ನೆಲೆಯ ಮೇಲೆ ಉಗ್ರರ ದಾಳಿ ನಡೆದಿದ್ದು, ಸಚಿವೆ ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Mangaluru: ಪ್ಲಾಸ್ಟಿಕ್ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.