‘ಕಾರ್ಮಿಕರಿಗೆ ಕನ್ನಡದಲ್ಲೇ ಪುಸ್ತಕಗಳು ಲಭ್ಯವಾಗಲಿ’
Team Udayavani, Nov 19, 2017, 10:12 AM IST
ಮಹಾನಗರ: ಕಾರ್ಮಿಕರು ತಮ್ಮ ಹಕ್ಕಿನ ಕೊರತೆಯಿಂದ ಶೋಷಣೆಗೊಳಗಾಗುತ್ತಿದ್ದು, ಅಂತಹ ಶೋಷಿತ ವರ್ಗಕ್ಕೆ ಮಾಹಿತಿ ಪುಸ್ತಕಗಳು ಕನ್ನಡದಲ್ಲಿ ಲಭ್ಯವಾದಾಗ ಕಾರ್ಮಿಕರು ಕೂಡ ಕಾನೂನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರು ಆಲೋಚಿಸಬೇಕಿದೆ ಎಂದು ಮಂಗಳೂರು ಕಾರ್ಮಿಕ ಇಲಾಖೆಯ ಸಹಾಯಕ ಕಮಿಷನರ್ ಕೆ.ಬಿ.ನಾಗರಾಜ್ ಸಲಹೆ ನೀಡಿದರು.
ಅವರು ಶನಿವಾರ ನಗರದ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಕರ್ನಾಟಕ ಎಲೈಟ್ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಮಂಗಳೂರು ಆಯೋಜಿಸಿದ್ದ ಕಾರ್ಮಿಕ ಕಾನೂನು ಕುರಿತ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಮಿಕರ ಜತೆಗೆ ಉದ್ಯೋಗದಾತರಿಗೂ ಕಾನೂನಿನ ಕೊರತೆ ಇದೆ. ಹೀಗಾಗಿ ತಮ್ಮ ಸಂಸ್ಥೆಯನ್ನು ಮುನ್ನಡೆಸಲು
ವಿಫಲರಾಗಿರುತ್ತಾರೆ. ಈ ನಿಟ್ಟಿನಲ್ಲಿ ಚಂದ್ರ ಶೇಖರ್ ಹೊಳ್ಳ ಹಾಗೂ ಲತಾ ಹೊಳ್ಳ ಅವರು ಕಾರ್ಮಿಕರ ಕಾನೂನಿನ ಕುರಿತು ಪುಸ್ತಕ ಹೊರತಂದಿರುವುದು ಶ್ಲಾಘನೀಯ ಎಂದರು.
ಕಾನೂನು ಪುಸ್ತಕಗಳ ಅನಾವರಣ
ಕಾನೂನು ತಜ್ಞರಾದ ಚಂದ್ರಶೇಖರ ಹೊಳ್ಳ, ಲತಾ ಸಿ. ಹೊಳ್ಳ ಹಾಗೂ ಲಕ್ಷ್ಮೀಶ್ ರೈ ಅವರು ಬರೆದಿರುವ ಇಂಡಸ್ಟ್ರಿಯಲ್ ಲೇಬರ್ ಲಾ, ಸಿಂಪಲ್ ವೇ ಆಫ್ ಡ್ರಾಫ್ಟಿಂಗ್ ಮತ್ತು ಬೇಸಿಕ್ಸ್ ಆಫ್ ಲೇಬರ್ ಲಾ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಮಿಕರಿಗೆ ಕಾನೂನು ಅಗತ್ಯ
ಎ.ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್ ಮಾರ್ಲ ಮಾತನಾಡಿ, ಯಾವುದೇ ಸಂಸ್ಥೆಯಲ್ಲಿ ನೌಕರರು ಉತ್ತಮವಾಗಿದ್ದರೆ ಮಾತ್ರ ಆ ಸಂಸ್ಥೆ ಬೆಳೆಯುತ್ತದೆ ಈ ನಿಟ್ಟಿನಲ್ಲಿ ಸಂಸ್ಥೆಯ ಮಾಲಕರು ಕಾರ್ಮಿಕರ ಕಾನೂನುಗಳನ್ನು ಅರಿತುಕೊಂಡಾಗ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದರು.
ರಾಜ್ಯ ಕಾನೂನು ವಿವಿಯ ಸಿಂಡಿಕೇಟ್ ಸದಸ್ಯೆ ರಾಜೇಶ್ವರಿ ಎ., ಎಸ್ಡಿಎಂ ಕಾನೂನು ಕಾಲೇಜು ಪ್ರಾಂಶುಪಾಲ ಡಾ|
ತಾರಾನಾಥ್ ಉಪಸ್ಥಿತರಿದ್ದರು. ಎಲೈಟ್ನ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ್ ರೈ ಸ್ವಾಗತಿಸಿದರು. ನ್ಯಾಯವಾದಿ ವಿವೇಕ್ ವಲ್ಲಬ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.