
ಕಷ್ಟವಾದುದನ್ನು ಸಾಧಿಸಬೇಕಾದರೆ ಸಮಾಜ, ಮಠ ಒಟ್ಟಾಗಲಿ’
15ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ
Team Udayavani, Jul 4, 2019, 5:51 AM IST

ಮಹಾನಗರ: ಸಮಾಜ, ಮಠ ಹಾಗೂ ದೇವಸ್ಥಾನಗಳು ಒಟ್ಟು ಸೇರಿ ಕೆಲಸ ಮಾಡಿದರೆ ಕಷ್ಟವಾದುದನ್ನು ಸಾಧಿಸಬಹುದು ಎಂದು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು.
ಮಂಗಳೂರಿನ ರಥಬೀದಿಯ ಶ್ರೀ ವಿನಾಯಕ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಕಾರಿ ನಾಮ ಸಂವತ್ಸರದ 15ನೇ ಚಾತುರ್ಮಾಸ್ಯ ವ್ರತಾಚಾರಣೆಯ ಅಂಗವಾಗಿ 2ನೇ ದಿನದ ದೇಗುಲ ಭೇಟಿಯ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು.
ಕಟಪಾಡಿಯಲ್ಲಿ ಮಠ ನಿರ್ಮಾಣದ ಬಗ್ಗೆ ವಿಚಾರ ವಿನಿಮಯ ಮಾಡಿದ ಶ್ರೀಗಳು, ಮಠದ ಬೆಳವಣಿಗೆಯಲ್ಲಿ ಮಂಗಳೂರು ದೇವಸ್ಥಾನದ ಕೊಡುಗೆ ಅಪಾರ ಎಂದರು.
ಮೊದಲು ಮಠ, ಸನ್ನಿಧಿಯನ್ನು ಕೋ- ಆಪರೇಟಿವ್ ಸೊಸೈಟಿ ಆ್ಯಕ್ಟ್ ಅಡಿಯಲ್ಲಿ ಹಾಗೂ ಬಳಿಕ ಅದನ್ನು ಟ್ರಸ್ಟ್ ಅಡಿಯಲ್ಲಿ ತಂದು ಸಂಸ್ಥೆ ಮಾಡಬೇಕು ಎಂಬ ಯೋಜನೆ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ಮಠದ ಅಭಿವೃದ್ಧಿ ಆಗಬೇಕು ಎಂಬ ನಿಟ್ಟಿನಲ್ಲಿ ಅಂದು ಇದ್ದಂತಹ ಸಮಿತಿಯನ್ನು ಬರ್ಖಾಸ್ತು ಮಾಡಿ ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಮಠದ ನಿರ್ಮಾಣಕ್ಕೆ ಶ್ರಮಿಸಿದ ವ್ಯಕ್ತಿಗಳನ್ನು ಅವರು ಸ್ಮರಿಸಿದರು. ರಥಬೀದಿ ಎಂದರೆ ಕೇವಲ ಬೀದಿ ಮಾತ್ರವಾಗಿರದೆ ರಥವನ್ನೂ ಎಳೆಯುವ ಬೀದಿಯಾಗಬೇಕು. ಈ ನಿಟ್ಟಿಯಲ್ಲಿ ಬ್ರಹ್ಮರಥ ಆಗಬೇಕು ಎನ್ನುವ ಅಧ್ಯಕ್ಷರ ಆಶಯವನ್ನು ವಿಶ್ಲೇಷಿಸಿದ ಶ್ರೀಗಳು, ಶೀಘ್ರವಾಗಿ ಅವರ ಆಸೆ ಈಡೇರುವಂತಾಗಲಿ ಎಂದು ಆಶಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಆನೆಗುಂದಿ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್, ಈಗ ‘ಆನೆಗುಂದಿ ಸಮಾಜ ಸೇವಾ ಎಜುಕೇಶನ್ ಟ್ರಸ್ಟ್ (ಎಸ್ಸೆಟ್) ಎನ್ನುವ ಹೆಸರಿನಲ್ಲಿ ನೋಂದಣಿ ಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 1ನೇ ಮೊಕ್ತೇಸರ ಕೇಶವ ಆಚಾರ್ಯ, 2ನೇ ಮೊಕ್ತೇಸರ ಸುಂದರ್ ಆಚಾರ್ಯ, 3ನೇ ಮೊಕ್ತೇಸ ರರಾದ ಲೋಕೇಶ್ ಆಚಾರ್ಯ, ಬೊಳ್ಳೂರು ಸೂರ್ಯ ಕುಮಾರ್, ತ್ರಾಸಿ ಪ್ರಭಾಕರ ಆಚಾರ್ಯ ಹಾಗೂ ಅಲೆವೂರು ಯೋಗೀಶ್ ಆಚಾರ್ಯ ಉಪಸ್ಥಿತರಿದ್ದರು. ಸುಂದರ್ ಆಚಾರ್ಯ ಸ್ವಾಗತಿಸಿದರು. ಚಾತುರ್ಮಾಸ್ಯ ಸಮಿತಿಯ ಗಂಗಾಧರ್ ಆಚಾರ್ಯ ಚಾತುರ್ಮಾಸ್ಯದ ಬಗ್ಗೆ ವಿವರಿಸಿದರು. ವಿನೋದ್ ಸುಜೀರ್ ನಿರೂಪಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.