ಕಷ್ಟವಾದುದನ್ನು ಸಾಧಿಸಬೇಕಾದರೆ ಸಮಾಜ, ಮಠ ಒಟ್ಟಾಗಲಿ’

15ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ

Team Udayavani, Jul 4, 2019, 5:51 AM IST

0307MLR2

ಮಹಾನಗರ: ಸಮಾಜ, ಮಠ ಹಾಗೂ ದೇವಸ್ಥಾನಗಳು ಒಟ್ಟು ಸೇರಿ ಕೆಲಸ ಮಾಡಿದರೆ ಕಷ್ಟವಾದುದನ್ನು ಸಾಧಿಸ‌ಬಹುದು ಎಂದು ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು.

ಮಂಗಳೂರಿನ ರಥಬೀದಿಯ ಶ್ರೀ ವಿನಾಯಕ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಕಾರಿ ನಾಮ ಸಂವತ್ಸರದ 15ನೇ ಚಾತುರ್ಮಾಸ್ಯ ವ್ರತಾಚಾರಣೆಯ ಅಂಗವಾಗಿ 2ನೇ ದಿನದ ದೇಗುಲ ಭೇಟಿಯ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು.

ಕಟಪಾಡಿಯಲ್ಲಿ ಮಠ ನಿರ್ಮಾಣದ ಬಗ್ಗೆ ವಿಚಾರ ವಿನಿಮಯ ಮಾಡಿದ ಶ್ರೀಗಳು, ಮಠದ ಬೆಳವಣಿಗೆಯಲ್ಲಿ ಮಂಗಳೂರು ದೇವಸ್ಥಾನದ ಕೊಡುಗೆ ಅಪಾರ ಎಂದ‌ರು.

ಮೊದಲು ಮಠ, ಸನ್ನಿಧಿಯನ್ನು ಕೋ- ಆಪರೇಟಿವ್‌ ಸೊಸೈಟಿ ಆ್ಯಕ್ಟ್ ಅಡಿಯಲ್ಲಿ ಹಾಗೂ ಬಳಿಕ ಅದನ್ನು ಟ್ರಸ್ಟ್‌ ಅಡಿಯಲ್ಲಿ ತಂದು ಸಂಸ್ಥೆ ಮಾಡಬೇಕು ಎಂಬ ಯೋಜನೆ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ಮಠದ ಅಭಿವೃದ್ಧಿ ಆಗಬೇಕು ಎಂಬ ನಿಟ್ಟಿನಲ್ಲಿ ಅಂದು ಇದ್ದಂತಹ ಸಮಿತಿಯನ್ನು ಬರ್ಖಾಸ್ತು ಮಾಡಿ ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಮಠದ ನಿರ್ಮಾಣಕ್ಕೆ ಶ್ರಮಿಸಿದ ವ್ಯಕ್ತಿಗಳನ್ನು ಅವರು ಸ್ಮರಿಸಿದರು. ರಥಬೀದಿ ಎಂದರೆ ಕೇವಲ ಬೀದಿ ಮಾತ್ರವಾಗಿರದೆ ರಥವನ್ನೂ ಎಳೆಯುವ ಬೀದಿಯಾಗಬೇಕು. ಈ ನಿಟ್ಟಿಯಲ್ಲಿ ಬ್ರಹ್ಮರಥ ಆಗಬೇಕು ಎನ್ನುವ ಅಧ್ಯಕ್ಷರ ಆಶಯವನ್ನು ವಿಶ್ಲೇಷಿಸಿದ ಶ್ರೀಗಳು, ಶೀಘ್ರವಾಗಿ ಅವರ ಆಸೆ ಈಡೇರುವಂತಾಗಲಿ ಎಂದು ಆಶಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಆನೆಗುಂದಿ ಶ್ರೀ ಸರಸ್ವತಿ ಎಜುಕೇಶನ್‌ ಟ್ರಸ್ಟ್‌, ಈಗ ‘ಆನೆಗುಂದಿ ಸಮಾಜ ಸೇವಾ ಎಜುಕೇಶನ್‌ ಟ್ರಸ್ಟ್‌ (ಎಸ್ಸೆಟ್) ಎನ್ನುವ ಹೆಸರಿನಲ್ಲಿ ನೋಂದಣಿ ಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 1ನೇ ಮೊಕ್ತೇಸರ ಕೇಶವ ಆಚಾರ್ಯ, 2ನೇ ಮೊಕ್ತೇಸರ ಸುಂದರ್‌ ಆಚಾರ್ಯ, 3ನೇ ಮೊಕ್ತೇಸ ರರಾದ ಲೋಕೇಶ್‌ ಆಚಾರ್ಯ, ಬೊಳ್ಳೂರು ಸೂರ್ಯ ಕುಮಾರ್‌, ತ್ರಾಸಿ ಪ್ರಭಾಕರ ಆಚಾರ್ಯ ಹಾಗೂ ಅಲೆವೂರು ಯೋಗೀಶ್‌ ಆಚಾರ್ಯ ಉಪಸ್ಥಿತರಿದ್ದರು. ಸುಂದರ್‌ ಆಚಾರ್ಯ ಸ್ವಾಗತಿಸಿದರು. ಚಾತುರ್ಮಾಸ್ಯ ಸಮಿತಿಯ ಗಂಗಾಧರ್‌ ಆಚಾರ್ಯ ಚಾತುರ್ಮಾಸ್ಯದ ಬಗ್ಗೆ ವಿವರಿಸಿದರು. ವಿನೋದ್‌ ಸುಜೀರ್‌ ನಿರೂಪಿಸಿದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.