ಸಮಾಜಕ್ಕೆ ಮಾದರಿಯಾಗಿ ಬದುಕೋಣ: ರಾಮಣ್ಣ ದೇವಾಡಿಗ


Team Udayavani, Nov 27, 2017, 11:54 AM IST

27-Nov-7.jpg

ತೋಕೂರು: ಸೇವಾ ಸಂಸ್ಥೆಗಳಲ್ಲಿ ತೊಡಗಿಕೊಂಡು ನಿಷ್ಕಲ್ಮಶ ಮನಸ್ಸಿನಿಂದ ಸೇವೆಯನ್ನು ಕೈಗೊಂಡರೆ ಸಮಾಜವು ನಮ್ಮ ಯಶಸ್ಸಿನಲ್ಲಿ ಭಾಗಿಯಾಗುತ್ತದೆ ಎಂದು ಮುಂಬಯಿಯ ತಿಲಕ್‌ನಗರದ ಪೆಸ್ತಮ್‌ ಸಾಗರ ಕರ್ನಾಟಕ ಸಂಘದ ಅಧ್ಯಕ್ಷ ರಾಮಣ್ಣ ದೇವಾಡಿಗ ತೋಕೂರು ಹೇಳಿದರು.

ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ ಇದರ ತೋಕೂರು ಷಷ್ಠಿ ಮಹೋತ್ಸವದ ಅಂಗವಾಗಿ 21ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಸ್ಪೋರ್ಟ್ಸ್ ಕ್ಲಬ್‌ನ ಕಟ್ಟಡ ಸಮಿತಿಯ ಗೌರವಾಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಅಧ್ಯಕ್ಷತೆವಹಿಸಿ, ಗ್ರಾಮೀಣ ಭಾಗದ ಯುವಜನರಲ್ಲಿ ಸಮಾಜದ ಬಗ್ಗೆ ಸೇವಾ ಸಂಕಲ್ಪದ ದಿಕ್ಕಿನಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಏಳಿಂಜೆ ಕೃಷ್ಣ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು.

ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಶಿಬಾ ಅಸಾದಿ, ಸುಶ್ಮಿತಾ ಬೇಕಲ್‌, ರಿತಿಕಾ ಎಚ್‌. ಪೂಜಾರಿ, ನಿಧಿ ವಿ. ಅಂಚನ್‌, ಸೌಂದರ್ಯಾ ಎಸ್‌. ಕೋಟ್ಯಾನ್‌ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೈಶಾಲಿ ದೇವಾಡಿಗ ತೋಕೂರು ಅವರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಶಶಿಧರ್‌ ಮತ್ತು ಕಾರ್ತಿಕ್‌ ಕೋಟ್ಯಾನ್‌ ಅವರ ವೈದ್ಯಕೀಯ ಚಿಕಿತ್ಸೆಗೆ ತಲಾ 10 ಸಾವಿರ ರೂ.ಗಳ ಆರ್ಥಿಕ ನೆರವು ವಿತರಿಸಲಾಯಿತು.

ರಾಜ್ಯ ಸರಕಾರದಿಂದ ಗಾಂಧಿ  ಗ್ರಾಮ ಪುರಸ್ಕಾರ ಪಡೆದ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮೋಹನ್‌
ದಾಸ್‌, ಪಂಚಾಯತ್‌ ಸದಸ್ಯರು ಮತ್ತು ಸಿಬಂದಿಗಳನ್ನು ವಿಶೇಷವಾಗಿ ಗೌರವಿಸಲಾಯಿತು.ನಿರ್ಮಲಾ ಅರ್‌. ದೇವಾಡಿಗ, ರೆಹಮತುಲ್ಲ, ಯೋಗೀಶ್‌ ಕೋಟ್ಯಾನ್‌, ಸಂಘದ ಅಧ್ಯಕ್ಷ ರತನ್‌ ಶೆಟ್ಟಿ, ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್‌, ಜಗದೀಶ್‌ ಕೋಟ್ಯಾನ್‌, ಪಿ.ಪಿ.ಅಬ್ದುಲ್‌ ಕರೀಮ್‌, ಸಂತೋಷ್‌ ಕುಮಾರ್‌, ಸಂತೋಷ್‌ ದೇವಾಡಿಗ, ಗಣೇಶ್‌ ಬೆಂಗಳೂರು, ಕಿರಣ್‌ ಬೆಳ್ಚಡ, ವಿಪಿನ್‌ ಶೆಟ್ಟಿ, ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಜತೆ ಕಾರ್ಯದರ್ಶಿ ಸಂಪತ್‌ ದೇವಾಡಿಗ ಉಪಸ್ಥಿತರಿದ್ದರು.

ಕೋಶಾಧಿಕಾರಿ ಪ್ರಶಾಂತ್‌ ಕುಮಾರ್‌ ಬೇಕಲ್‌ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ದೀಪಕ್‌ ಸುವರ್ಣ ವಂದಿಸಿದರು. ಸುರೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳಿಂದ ವಿವಿಧ ನೃತ್ಯ ಕಾರ್ಯಕ್ರಮ ನಡೆದು ಬಳಿಕ ತುಳು ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.