Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

ಇನ್ನೂ ನೇಮಕವಾಗದ ಅತಿಥಿ ಉಪನ್ಯಾಸಕರು; ಮಕ್ಕಳಿಗೆ ಪಾಠವಿಲ್ಲ

Team Udayavani, Sep 30, 2024, 7:45 AM IST

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಪದವಿ ತರಗತಿ ಆರಂಭವಾಗಿ 50 ದಿನ ಹತ್ತಿರವಾಗುತ್ತಿದ್ದರೂ, ಸರಕಾರಿ ಕಾಲೇಜುಗಳಲ್ಲಿ ಪಾಠ ಮಾಡಲು ಅತಿಥಿ ಶಿಕ್ಷಕರ ನೇಮಕ ಇನ್ನೂ ಆಗದೆ ಮಕ್ಕಳಿಗೆ “ಪಠ್ಯ ಕೊರತೆ’ ಕಾಡುತ್ತಿದೆ.

ಪದವಿ ತರಗತಿ ಆ. 12ರಿಂದ ಆರಂಭವಾಗಿದೆ. ಖಾಸಗಿ ಕಾಲೇಜುಗಳಲ್ಲಿ ಅಂದಿನಿಂದಲೇ ಪಾಠ ಶುರುವಾಗಿತ್ತು. 35 ಸರಕಾರಿ ಕಾಲೇಜುಗಳು ವಿ.ವಿ. ವ್ಯಾಪ್ತಿಯಲ್ಲಿವೆ. ಇಲ್ಲಿ ಶೇ. 30ರಿಂದ 40ರಷ್ಟು ಮಾತ್ರ ಖಾಯಂ ಉಪನ್ಯಾಸಕರಿದ್ದು, ಶೇ. 60ಕ್ಕಿಂತ ಅಧಿಕವಾಗಿ (600ರಷ್ಟು)ಅತಿಥಿ ಉಪನ್ಯಾಸಕರ ಅಗತ್ಯವಿದೆ. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರಕಾರವು ಅತಿಥಿ ಉಪನ್ಯಾಸಕರ ನೇಮಕ ಮಾಡದೆ ಈಗ ವಿದ್ಯಾರ್ಥಿಗಳಿಗೆ ಕಷ್ಟ ಎದುರಾಗಿದೆ.

ಕೆಲವೆಡೆ ಒಂದೆರಡು ತರಗತಿ ನಡೆಸಿ ಮಕ್ಕಳನ್ನು ವಾಪಸ್‌ ಕಳುಹಿಸುವುದು ಹಾಗೂ ಕೆಲವು ಕಾಲೇಜಿನಲ್ಲಿ ರಜೆಯನ್ನೇ ನೀಡುವ ಪ್ರಮೇಯ ಎದುರಾಗಿದೆ.

ಕಳೆದ ಬಾರಿ (2023-24) ಕಾಲೇಜು ಆ. 23ಕ್ಕೆ ಆರಂಭವಾಗಿದ್ದರೂ, ಅಕ್ಟೋಬರ್‌ 7ಕ್ಕೆ ಕೌನ್ಸಿಲಿಂಗ್‌ ನಡೆಸಿ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿತ್ತು. 45 ದಿನ ಅತಿಥಿ ಉಪನ್ಯಾಸಕರಿಲ್ಲದೆ ಮಕ್ಕಳಿಗೆ ತರಗತಿ ನಷ್ಟವಾಗಿತ್ತು.

ಒಂದು ಸೆಮಿಸ್ಟರ್‌ಗೆ ಮೂರೂವರೆ ತಿಂಗಳು (90 ಕರ್ತವ್ಯದ ದಿನ) ಸಾಮಾನ್ಯವಾಗಿ ಸಿಗುವುದು. ಮೊದಲ ಸೆಮಿಸ್ಟರ್‌ನ ಪರೀಕ್ಷೆ ಡಿಸೆಂಬರ್‌ನಲ್ಲಿ ಆಗಬೇಕಿದೆ. ಈಗ ಒಂದೂವರೆ ತಿಂಗಳು ಅತಿಥಿ ಉಪನ್ಯಾಸಕರು ಇಲ್ಲದೆ ಪಾಠವೂ ಆಗದೆ ಸರಕಾರಿ ಕಾಲೇಜಿನಲ್ಲಿ ಮಕ್ಕಳಿಗೆ ಪರೀಕ್ಷೆ ಎದುರಿಸುವುದು ಹೇಗೆ ಎಂಬ ಭಯ ಆರಂಭವಾಗಿದೆ. ಅತಿಥಿ ಉಪನ್ಯಾಸಕರು ಬಂದರೂ ಮೊದಲ ಸೆಮಿಸ್ಟರ್‌ನ ಪಾಠವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವುದು ಹೇಗೆ ಎಂಬುದು ಕೂಡ ಮತ್ತೊಂದು ಸಂಕಟ!

ಯಾಕೆ ತಡ?
ನೆಟ್‌, ಸ್ಲೆಟ್‌, ಪಿಎಚ್‌ಡಿ ಪದವಿ ಅರ್ಹತೆ ಹೊಂದಿದವರು ಮಾತ್ರ ಯುಜಿಸಿ ನಿಯಮಾವಳಿಯಂತೆ ಬೋಧಿಸಲು ಅರ್ಹರು ಎಂಬ ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಹಾಗೂ ಖಾಯಂ ಉಪನ್ಯಾಸಕರ ವರ್ಗಾವಣೆ ಹಾಗೂ ಹೊಸ ಸಹಾಯಕ ಪ್ರಾಧ್ಯಾಪಕರ
ಆಯ್ಕೆ ಪ್ರಕ್ರಿಯೆ ವಿಳಂಬದಿಂದ ಅತಿಥಿ ಉಪನ್ಯಾಸಕರ ನೇಮಕ ಕಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾ.-ಪ್ರೌ.ಶಾಲೆ; ಎಪ್ರಿಲ್‌ವರೆಗೆ “ಶನಿವಾರ’ ಪೂರ್ಣ ತರಗತಿ!
ದ.ಕ. ಜಿಲ್ಲೆಯಲ್ಲಿ ಮಳೆ ಕಾರಣದಿಂದ ನೀಡಿದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಶನಿವಾರ ಪೂರ್ಣ ತರಗತಿ ಆರಂಭಿಸಲಾಗಿದೆ.

ಮಳೆ ಕಾರಣದಿಂದ ವಿವಿಧ ತಾಲೂಕುಗಳಿಗೆ ಸೂಕ್ತವಾಗುವ ಹಾಗೆ ಜಿಲ್ಲೆಯಲ್ಲಿ ಸುಮಾರು 12 ರಜೆ ನೀಡಲಾಗಿತ್ತು. ಇದನ್ನು ಸರಿದೂಗಿಸುವ ಅನಿವಾರ್ಯತೆಯಿಂದ ಶನಿವಾರ ಪೂರ್ಣ ತರಗತಿ ಆರಂಭಿಸಲಾಗಿದೆ. ಎಪ್ರಿಲ್‌ವರೆಗೂ ಇದು ನಡೆಯುವ ಸಾಧ್ಯತೆಯಿದೆ. ಅ. 3ರಿಂದ ಅ.20ರ ವರೆಗೆ ದಸರಾ ರಜೆ ಹೊರತುಪಡಿಸಿ ಉಳಿದಂತೆ ಈ ತರಗತಿ ನಡೆಯಲಿದೆ.

ಟಾಪ್ ನ್ಯೂಸ್

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fraudd

Cake: ಆರ್ಡರ್‌ ಕೊಟ್ಟು ಅಂಗಡಿಯವರಿಂದಲೇ ಹಣ ವರ್ಗಾಯಿಸಿಕೊಳ್ಳಲು ಯತ್ನಿಸಿದರು!

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.