ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಬೇಕಿದೆ ಹೊಸ ಕಟ್ಟಡ 


Team Udayavani, Jun 17, 2018, 1:24 PM IST

17-june-9.jpg

ಮಡಂತ್ಯಾರು : ಮಚ್ಚಿನ ಗ್ರಾಮಸ್ಥರ ಬಹುಕಾಲದ ಜನರ ಬೇಡಿಕೆಯಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಕೊನೆಗೂ ಮಂಜೂರುಗೊಂಡು ತಾತ್ಕಾಲಿಕವಾಗಿ ಕಳೆದ ವರ್ಷ ನ. 8ರಂದು ಮಚ್ಚಿನ ಪಂ. ಕಟ್ಟಡದಲ್ಲಿ ಪ್ರಾರಂಭವಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಚ್ಚಿನ ಗ್ರಾಮದ ಬೆರ್ಬಲಾಜೆ ಸಮೀಪ ಜಾಗ ಗೊತ್ತು ಮಾಡಿದ್ದು, ಅರಣ್ಯ ಇಲಾಖೆಯ ಅಡೆತಡೆಗಳಿಂದಾಗಿ ಸದ್ಯಕ್ಕೆ ತಟಸ್ಥವಾಗಿದೆ. ಇದರಿಂದಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ವಿಳಂಬವಾಗಿದ್ದು, ಇನ್ನೂ ತಾತ್ಕಾಲಿಕ ಕಟ್ಟಡದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾತ್ಕಾಲಿಕ ಕಟ್ಟಡ ವಾದ ಕಾರಣ ಹೆಚ್ಚಿನ ಸವ ಲತ್ತು ಸಿಗುತ್ತಿಲ್ಲ ಎನ್ನುತ್ತಾರೆ ಆರೋಗ್ಯ ಸಹಾಯಕಿಯರು.

6 ಗ್ರಾಮಸ್ಥರಿಗೆ ಉಪಯೋಗ
ಮಚ್ಚಿನ ಹೆಚ್ಚು ಜನಸಂಖ್ಯೆ ಹೊಂದಿದ ಗ್ರಾಮವಾಗಿದ್ದು, ಇಲ್ಲಿ ಆರೋಗ್ಯ ಕೇಂದ್ರ ಅವಶ್ಯವಾಗಿತ್ತು. ಸಮೀಪ ದಲ್ಲಿ ಸರಕಾರಿ ಆರೋಗ್ಯ ಕೇಂದ್ರಗಳು ಇಲ್ಲದ ಕಾರಣ ಪುಂಜಾಲಕಟ್ಟೆ ಆರೋಗ್ಯ ಕೇಂದ್ರಕ್ಕೆ ಹೋಗಬೇಕಾಗುತ್ತಿತ್ತು. ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಪರದಾಡಬೇಕಾಗುತ್ತಿತ್ತು. ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಚ್ಚಿನ, ತೆಕ್ಕಾರು, ಬಾರ್ಯ, ತಣ್ಣೀರುಪಂಥ, ಪುತ್ತಿಲ, ಪಾರೆಂಕಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನರಿಗೆ ಪ್ರಯೋಜನ
ಜನತೆ ಇದೀಗ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ವಾರದಲ್ಲಿ ನಾಲ್ಕು ದಿನ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸೋಮವಾರ ಮತ್ತು ಗುರುವಾರ ನೆರಿಯ ಸಂಚಾರಿ ಘಟಕದ ಡಾ| ಅಪರ್ಣಾ ಭೇಟಿ ನೀಡಿ ಚಿಕಿತ್ಸೆ ನೀಡುತ್ತಾರೆ. ಮಂಗಳವಾರ ಮತ್ತು ಶುಕ್ರವಾರ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಲಾವಣ್ಯಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಿರಿಯ ಆರೋಗ್ಯ ಸಹಾಯಕಿಯರಿಂದ ಕರ್ತವ್ಯ
ತಾತ್ಕಾಲಿಕ ಕೇಂದ್ರವಾದ ಕಾರಣ ಇಲ್ಲಿಗೆ ಸ್ಟಾಫ್‌ ನರ್ಸ್‌ ನಿಯೋಜನೆ ಆಗಿಲ್ಲ. ನೂತನ ಕಟ್ಟಡ ಆಗದೆ ಕಿರಿಯ ಆರೋಗ್ಯ ಸಹಾಯಕಿಯರೇ ಆರೋಗ್ಯ ಕೇಂದ್ರದಲ್ಲಿ ಎಲ್ಲ ಕೆಲಸ ಮಾಡುವಂತಾಗಿದೆ. ಆಯ ಕೂಡ ಇಲ್ಲದ ಕಾರಣ ಹೆಚ್ಚು ಸಮಸ್ಯೆಯಾಗಿದೆ. 3 ಮಂದಿ ಕಿರಿಯ ಆರೋಗ್ಯ ಸಹಾಯಕಿಯರು ಕರ್ತವ್ಯ ನಿರ್ವಹಿಸುತ್ತಿದ್ದು, ಗ್ರಾಮದಲ್ಲಿ ಮನೆಗಳಿಗೆ ಕೂಡ ತೆರಳಬೇಕಾದ ಕಾರಣ ಕೆಲಸ ದೊತ್ತಡ ಹೆಚ್ಚಾಗಿದೆ ಎನ್ನುತ್ತಾರೆ ಆರೋಗ್ಯ ಸಹಾಯಕಿಯರು.

ಕಂಪ್ಯೂಟರ್‌ ಇಲ್ಲ
ಮಚ್ಚಿನ ಆರೋಗ್ಯ ಕೇಂದ್ರವೊಂದರಲ್ಲೆ ತಿಂಗಳಿಗೆ 35ರಿಂದ 40 ತಾಯಿ ಕಾರ್ಡ್‌ ನೋಂದಣಿಯಾಗುತ್ತಿದೆ. ಆದರೆ ಕಂಪ್ಯೂಟರ್‌, ಇಂಟರ್‌ನೆಟ್‌ ಇಲ್ಲದ ಕಾರಣ ಕಿರಿಯ ಆರೋಗ್ಯ ಸಹಾಯಕಿರು ಕಣಿಯೂರು ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ
ತೆರೆಳಿ ಡಾಟಾ ಎಂಟ್ರಿ ಮಾಡಬೇಕಾಗುತ್ತದೆ. ಅಲ್ಲಿ ಕೂಡ ಕ್ಲರ್ಕ್‌, ಡಾಟಾ ಎಂಟ್ರಿಗೆ ಸಿಬಂದಿ ಇಲ್ಲದ ಕಾರಣ ತಾವೇ ಎಲ್ಲ ಕೆಲಸ ಮಾಡಬೇಕಾದ ಪರಿಸ್ಥಿತಿ ಇದೆ.

ಜಾಗದ ಸಮಸ್ಯೆ
ನೂತನ ಕಟ್ಟಡಕ್ಕೆ ಜಾಗದ ಸಮಸ್ಯೆ ಇದೆ. ಬೆರ್ಬಲಾಜೆಯಲ್ಲಿ ಒಂದೂವರೆ ಎಕ್ರೆ ಜಾಗವಿದೆ. ಅರಣ್ಯ ಇಲಾಖೆಯಿಂದ ಸಮಸ್ಯೆ ಇದ್ದು, ಬಗೆಹರಿಯುವ ಹಂತದಲ್ಲಿದೆ. ನೀತಿ ಸಂಹಿತೆ ಕಾರಣ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ಶಾಸಕರ ಜತೆ ಮಾತುಕತೆ ನಡೆಸಲಾಗುವುದು. ತಾತ್ಕಾಲಿಕ ಕಾರಣ ಖಾಯಂ ಡಾಕ್ಟರ್‌, ಸಿಬಂದಿ ನಿಯೋಜನೆ ಆಗಿಲ್ಲ.ಅನುಮತಿ ದೊರೆತ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು.
– ಡಾ| ಕಲಾಮಧು ಶೆಟ್ಟಿ, ತಾಲೂಕು ವೈದ್ಯಾಧಿಕಾರಿ, ಬೆಳ್ತಂಗಡಿ

ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.