ಗೋಡೆಗಳಲ್ಲಿ ಮಧುಬನಿ ಚಿತ್ರಗಳ ಮೆರುಗು

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆ

Team Udayavani, Apr 11, 2022, 11:19 AM IST

madhubani

ಬಂಟ್ವಾಳ: ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಮೂಲಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣದಲ್ಲಿ ಮಿಂಚಿರುವ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಗೋಡೆಗಳು ಇದೀಗ ಬಣ್ಣ ಬಣ್ಣದ ಚಿತ್ತಾರಗಳಿಂದ ಮಿಂಚುತ್ತಿದ್ದು, ಚಿತ್ರಕಲಾ ಶಿಕ್ಷಕರ ಕೈಚಳಕದಿಂದ ಮಧುಬನಿ ಚಿತ್ರಗಳ ಮೆರುಗು ಗೋಡೆಗಳಲ್ಲಿವೆ.

ಒಂದು ಕಾಲದಲ್ಲಿ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪಿದ್ದ ಸರಕಾರಿ ಶಾಲೆಯು ದಡ್ಡಲಕಾಡು ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ನಿಂದ ದತ್ತು ಪಡೆಯಲ್ಪಟ್ಟು, ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಹಂತ ಹಂತವಾಗಿ ಅಭಿವೃದ್ಧಿ ಕಂಡ ಶಾಲೆಯಂತೆಯೇ ಮುಂದೆ ಶಾಲೆಯ ಗೋಡೆಗಳು ಕೂಡ ಚಿತ್ತಾರಗಳಿಂದ ಆಕರ್ಷಣೆಯ ಕೇಂದ್ರಗಳಾಗಲಿವೆ.

ಶಾಲೆಯ ಕೆಳ ಅಂತಸ್ತಿನ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಬಿಡಿಸಲಾಗಿದ್ದು, ಪ್ರಾಣಿ-ಪಕ್ಷಿ, ಚಿರತೆ ಮೊದ ಲಾದ ವರ್ಣರಂಜಿತ ಚಿತ್ರಗಳ ಜತೆಗೆ ಸಂಸ್ಕೃತಿ, ನಂಬಿಕೆ, ಆರಾಧನೆಯ ಚಿತ್ರಗಳು ಮಧುಬನಿಯ ಶೈಲಿಯ ಮೂಲಕ ಮೂಡಿಬಂದಿವೆ. ವಿವಿಧ ಬಗೆಯ ಸುಮಾರು 16 ಚಿತ್ರಗಳನ್ನು ರಚಿಸಲಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಚಿತ್ರಗಳು ಮೂಡಿಬರಲಿವೆ.

ತಾಲೂಕಿನ ವಿವಿಧ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ಮುರಳೀಕೃಷ್ಣ ರಾವ್‌, ಬಾಲಕೃಷ್ಣ ಶೆಟ್ಟಿ, ಧನಂಜಯ ಪಿ., ಚೆನ್ನಕೇಶವ ಡಿ., ತಾರಾನಾಥ ಕೈರಂಗಳ, ಅಮೀನಾ ಶೇಖ್‌ ಅವರು ಕಳೆದ 10 ದಿನಗಳಿಂದ ಮಧುಬನಿ ಚಿತ್ರರಚನೆಯಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ಚಿತ್ರ ರಚನೆಯ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಶಿಕ್ಷಕರ ಜತೆಗೆ ಶಾಲೆಯ ವಿದ್ಯಾರ್ಥಿಗಳಾದ ಗೌರವ್‌, ಶ್ರೀಜಲ್‌, ಭೂಮಿಕಾ, ಯತೀಕ್ಷ್ ಅವರು ಕೂಡ ಚಿತ್ರಕಲಾ ಶಿಕ್ಷಕರಿಗೆ ಸಹಕಾರ ನೀಡಿದ್ದಾರೆ. ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌ ಹಾಗೂ ಶಾಲಾ ಮುಖ್ಯಶಿಕ್ಷಕ ರಮಾನಂದ ಅವರ ಮುತುವರ್ಜಿಯಲ್ಲಿ ಮಧುಬನಿ ಶೈಲಿಯ ಚಿತ್ರಗಳು ಗೋಡೆಯನ್ನು ಅಲಂಕರಿಸಿವೆ.

ಚಿತ್ರಕಲೆಯ ಆಸಕ್ತಿ ಮೂಡಲು ಸಾಧ್ಯ

ಶಾಲೆಯ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಚಿತ್ರಕಲಾ ಶಿಕ್ಷಕರು ರಚಿಸಿದ್ದು, ಆಕರ್ಷಕವಾಗಿ ಮೂಡಿಬಂದಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಚಿತ್ರಗಳಿಗೆ ಬಣ್ಣ ತುಂಬುವ ಕಾರ್ಯ ನಡೆಸಿದ್ದಾರೆ. ಇದು ಇತರ ವಿದ್ಯಾರ್ಥಿಗಳಲ್ಲಿಯೂ ಚಿತ್ರಕಲೆಯ ಕುರಿತು ಆಸಕ್ತಿ ಮೂಡಲು ಕಾರಣವಾಗಲಿದೆ. ಇಂತಹ ಚಿತ್ರಗಳಿಂದ ಶಾಲೆಯ ಆಕರ್ಷಣೆ ಇನ್ನೂ ಹೆಚ್ಚಾಗಲಿದೆ. ಪ್ರಕಾಶ್‌ ಅಂಚನ್‌, ಅಧ್ಯಕ್ಷರು, ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌, ದಡ್ಡಲಕಾಡು

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.