Madras Eye: ಕರಾವಳಿಯಲ್ಲಿ ಹೆಚ್ಚುತ್ತಿದೆ ಪ್ರಕರಣ: ದ.ಕ.504, ಉಡುಪಿ 794 ಮಂದಿಗೆ ಕೆಂಗಣ್ಣು


Team Udayavani, Aug 18, 2023, 6:45 AM IST

Madras Eye: ಕರಾವಳಿಯಲ್ಲಿ ಹೆಚ್ಚುತ್ತಿದೆ ಪ್ರಕರಣ: ದ.ಕ.504, ಉಡುಪಿ 794 ಮಂದಿಗೆ ಕೆಂಗಣ್ಣು

ಮಂಗಳೂರು/ಉಡುಪಿ: ಹವಾಮಾನ ವೈಪರೀತ್ಯದ ಪರಿಣಾಮ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಂಗಣ್ಣು (ಮದ್ರಾಸ್‌ ಐ) ಪ್ರಕರಣಗಳು ಹೆಚ್ಚಾಗುತ್ತಿವೆ. ದ.ಕ.ದಲ್ಲಿ ಈವರೆಗೆ 504, ಉಡುಪಿ ಜಿಲ್ಲೆಯಲ್ಲಿ 794 ಮಂದಿಗೆ ಕೆಂಗಣ್ಣು ಕಾಣಿಸಿಕೊಂಡಿದೆ.

ಕೆಲವು ದಿನಗಳ ಹಿಂದೆ ಕೆಂಗಣ್ಣು ಪ್ರಕರಣ ಮಂಗಳೂರು ಗ್ರಾಮಾಂತರ ಮತ್ತು ಬಂಟ್ವಾಳ ತಾಲೂಕಿನಲ್ಲಿ ಹೆಚ್ಚು ಇತ್ತು. ಆದರೆ ಸದ್ಯ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಏರಿಕೆಯಾಗಿದೆ. ಪ್ರತೀ ದಿನ 20ರಿಂದ 25 ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.

“ಸಾಮಾನ್ಯವಾಗಿ ಸೆಪ್ಟಂಬರ್‌-ಅಕ್ಟೋಬರ್‌ನಲ್ಲಿ ಕರಾವಳಿಯಲ್ಲಿ ಕೆಂಗಣ್ಣು ಪ್ರಕರಣ ಕಂಡುಬರುತ್ತದೆ. ಆದರೆ ಈ ಬಾರಿ ಬಿಟ್ಟು ಬಿಟ್ಟು ಮಳೆ ಸೇರಿದಂತೆ ವಾತಾವರಣದ ಬದಲಾವಣೆ ಕಾರಣದಿಂದಾಗಿ ಜುಲೈ-ಆಗಸ್ಟ್‌ನಲ್ಲಿಯೇ ಕೆಂಗಣ್ಣು ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರಕರಣ ಹೆಚ್ಚು. 3ರಿಂದ 5 ದಿನಗಳಲ್ಲಿ ಗುಣವಾಗುತ್ತದೆಯಾದರೂ, ನಿರ್ಲಕ್ಷé ತೋರಬಾರದು’ ಎನ್ನುತ್ತಾರೆ ಉಭಯ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ| ಕಿಶೋರ್‌ ಕುಮಾರ್‌ ಹಾಗೂ ಡಾ| ನಾಗಭೂಷಣ್‌ ಉಡುಪ.

ಶಿಕ್ಷಣ ಸಂಸ್ಥೆ, ಪಿಎಚ್‌ಸಿಗೆ ಸುತ್ತೋಲೆ
ಕೆಂಗಣ್ಣಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಈಗಾಗಲೇ ಶಾಲೆ, ಕಾಲೇಜು ಅಂಗನವಾಡಿಗಳಿಗೆ ಮತ್ತು ಅಗತ್ಯ ಮುನ್ನೆಚ್ಚರಿಕೆ ಉದ್ದೇಶಕ್ಕೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುತ್ತೋಲೆ ಕಳುಹಿಸಲಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಈ ಸಂಬಂಧ ಕಣ್ಣಿಗೆ ಹಾಕುವ ಆ್ಯಂಟಿ ಬಯೋಟಿಕ್‌ ಡ್ರಾಪ್ಸ್‌ಗಳನ್ನು ಸಾಕಷ್ಟು ಸಂಗ್ರಹಿಸಿ ಇಟ್ಟುಕೊಳ್ಳವಂತೆ ಇಲಾಖೆ ಸೂಚಿಸಿದೆ.

ಮುನ್ನೆಚ್ಚರಿಕೆ ಅಗತ್ಯ
ಕೆಂಗಣ್ಣು ರೋಗ ವೈರಸ್‌ ಮೂಲಕ ಹರಡುತ್ತದೆ. ಸೋಂಕು ತಗಲಿದವರ ಕಣ್ಣು ಕೆಂಬಣ್ಣದಿಂದ ಕೂಡಿರುತ್ತದೆ. ಈ ವೇಳೆ ಮುನ್ನೆಚ್ಚರಿಕೆ ಅತೀ ಅಗತ್ಯ ಕಣ್ಣೀರನ್ನು ಒರಸುವಾಗ ಶುದ್ಧ ಕರವಸ್ತ್ರವನ್ನೇ ಬಳಸಬೇಕು. ಕೆಂಗಣ್ಣಿಗೆ ತುತ್ತಾದ ವ್ಯಕ್ತಿ ಬಳಸಿದ ವಸ್ತುವನ್ನು ಮತ್ತೂಬ್ಬ ವ್ಯಕ್ತಿ ಬಳಸಿದಾಗ ರೋಗ ಹರಡುವ ಸಾಧ್ಯತೆ ಹೆಚ್ಚು. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು. ಕೈ, ಟವೆಲ್‌, ಪುಸ್ತಕ, ಮೊಬೈಲ್‌ ಮುಂತಾದವುಗಳನ್ನು ಪ್ರತ್ಯೇಕವಾಗಿ ಬಳಸಬೇಕು. ಕಣ್ಣಿನ ಶುಚಿತ್ವ ಕಾಪಾಡಿಕೊಳ್ಳಬೇಕು. ಮನೆಯಲ್ಲೇ ವಿಶ್ರಾಂತಿ ಪಡೆಯಬೇಕು. ಹೆಚ್ಚಿನ ಚಿಕಿತ್ಸೆಗೆ ವೈದ್ಯರನ್ನು ಭೇಟಿಯಾಗಬೇಕು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.