Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು
Team Udayavani, Sep 30, 2024, 1:08 AM IST
ಬಜಪೆ: ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯ ನೀರಿನಲ್ಲಿ ರವಿವಾರ ಸಂಜೆ 4ರ ವೇಳೆ ಈಜಾಡಲು ತೆರಳಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಸಂಭವಿಸಿದೆ.
ಸ್ನೇಹಿತರಾದ ಮಂಗಳೂರು ನಗರದ ಕೋಡಿಕಲ್ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ಹೋಗಿದ್ದರು. ಇವರಲ್ಲಿ ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ನದಿ ನೀರಿನ ಸುಳಿಗೆ ಸಿಲುಕಿಕೊಂಡು ನೀರುಪಾಲಾಗಿದ್ದಾರೆ.
ಸುದ್ದಿ ತಿಳಿದು ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿದ್ದು, ನದಿಯ ನೀರಿನಲ್ಲಿ ಇಬ್ಬರ ಹುಡುಕಾಟವನ್ನು ಆರಂಭಿಸಿದರು. ಅಗ್ನಿಶಾಮಕದ ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ಮುಂದುವರಿದಿತ್ತು. ಸ್ಥಳಕ್ಕೆ ಮುಳುಗು ತಜ್ಞರನ್ನು ಕೂಡ ಕರೆಸಿಕೊಳ್ಳಲಾಗಿದೆ. ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಇದ್ದಾರೆ. ಯುವಕರಿಬ್ಬರು ನೀರಿನಲ್ಲಿ ಮುಳುಗಿದ ಸುದ್ದಿ ಕೇಳಿ ಹಲವಾರು ಮಂದಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಗ್ಯಾರೇಜ್ನಲ್ಲಿ ಮೆಕ್ಯಾನಿಕ್ ಸುಮಿತ್ ಅವರು ಕೊಟ್ಟಾರ ಚೌಕಿಯ ಗ್ಯಾರೇಜ್ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇವರ ತಂದೆ ಕೆಲವು ಸಮಯದ ಹಿಂದೆ ಅನಾರೋಗ್ಯಕ್ಕೀಡಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ . ಸುಮಿತ್ ತಂಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.
ರಜಾ ದಿನಗಳಲ್ಲಿ ಈಜಲು ಬರುವ ಯುವಕರು
ಮಳವೂರು ಡ್ಯಾಂ ಪರಿಸರದಲ್ಲಿ ರಜಾ ದಿನಗಳಲ್ಲಿ ಮಂಗಳೂರು ಸಹಿತ ವಿವಿಧ ಪ್ರದೇಶದ ಯುವಕರು ಈಜಲು ಬರುತ್ತಾರೆ. ಮಳೆಗಾಲದಲ್ಲಿ ನದಿಯಲ್ಲಿ ನೀರಿನ ಸೆಳೆತ ಇರುವುದರಿಂದ ನೀರಿಗೆ ಇಳಿಯದಂತೆ ಸ್ಥಳೀಯರು ಎಚ್ಚರಿಸಿದರೂ ಯುವಕರು ಅದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಕೆಲವರು ರೈಲ್ವೇ ಸೇತುವೆಯ ಮೇಲೆ ಕುಳಿತುಕೊಂಡಿರುತ್ತಾರೆ. ಒಂದು ವೇಳೆ ಪೊಲೀಸರು ಅತ್ತ ತೆರಳಿದರೆ ಅವರು ನೀರಿಗೆ ಹಾರಿ ತಪ್ಪಿಸಿಕೊಳ್ಳುತ್ತಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.