ಹಣ ವಿನಿಮಯ ಕೇಂದ್ರ ಸ್ಥಗಿತ; ಪ್ರಯಾಣಿಕರಿಗೆ ತೊಂದರೆ

ಮಂಗಳೂರು ವಿಮಾನ ನಿಲ್ದಾಣ

Team Udayavani, Dec 16, 2019, 5:10 AM IST

1412MLR40-AIRPORT

ಮಂಗಳೂರು: ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗಿನ ನಗದುವಿನಿಮಯ ಕೇಂದ್ರಗಳು ವಾರದಿಂದ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಇಲ್ಲಿ ಕಾರ್ಯಾಚರಿಸುತ್ತಿದ್ದ ಎರಡು ನಗದು ವಿನಿಮಯ ಕೇಂದ್ರಗಳನ್ನು ನಷ್ಟದ ಕಾರಣ ನೀಡಿ ಟೆಂಡರ್‌ಪಡೆದ ಗುತ್ತಿಗೆದಾರರು ಬಂದ್‌ ಮಾಡಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಅದರಲ್ಲೂ ವಿದೇಶಗಳಿಂದ ಆಗಮಿಸುವವರಿಗೆ ನಗದು ವಿನಿಮಯಕ್ಕೆ ಸಮಸ್ಯೆ
ಯಾಗುತ್ತಿದೆ. ಪರ್ಯಾಯ ವ್ಯವಸ್ಥೆ ರೂಪಿಸುವತ್ತ ವಿಮಾನ ನಿಲ್ದಾಣ ಪ್ರಾಧಿಕಾರವು ಹೆಜ್ಜೆ ಇರಿಸಿದೆ.

ವಿದೇಶಗಳಿಗೆ ತೆರಳುವವರು ಅಲ್ಲಿ ವಹಿವಾಟಿಗಾಗಿ ಅಲ್ಲಿನ ಕರೆನ್ಸಿ ಹೊಂದಿರಬೇಕು. ಇದಕ್ಕಾಗಿ ಮಂಗಳೂರು ನಗರ ಸಹಿತ ಹಲವೆಡೆ ಹಲವಾರು “ನಗದು ವಿನಿಮಯ ಕೇಂದ್ರ’ಗಳಿವೆ. ಸಮಯದ ಅಭಾವ ಅಥವಾ ಇನ್ಯಾವುದೇ ಕಾರಣದಿಂದ ವಿಮಾನ ನಿಲ್ದಾಣದಲ್ಲಿಯೇ ವಿದೇಶೀ ಕರೆನ್ಸಿ ಪಡೆಯಬೇಕಿರುವ ಯಾನಿಗಳ ಅನುಕೂಲಕ್ಕಾಗಿ ನಿಲ್ದಾಣದಲ್ಲೇ ವಿನಿಮಯ ಕೇಂದ್ರ ಆರಂಭಿಸಲಾಗಿತ್ತು. ಈ ಕೇಂದ್ರವಿದ್ದರೆ ಆಗಮಿಸಿದ ವಿದೇಶೀಯರಿಗೂ ಅನುಕೂಲ. ಪ್ರಯಾಣಿಕರಿಗೆ ಸದ್ಯ ಈ ಬಗ್ಗೆ ಮಾಹಿತಿ ನೀಡುತ್ತಿದ್ದರೂ ಕೆಲವರು ಮಾತ್ರ ಬಂದ ಬಳಿಕ ತಬ್ಬಿಬ್ಟಾಗುತ್ತಿದ್ದಾರೆ.

ಏನಿದು ಸಮಸ್ಯೆ?
ನಿಲ್ದಾಣದ ಒಳಭಾಗದ ನಗದು ವಿನಿಮಯ ಕೇಂದ್ರವನ್ನು ಆರ್‌ಬಿಐ ನಿಯಮದ ಪ್ರಕಾರ ಟೆಂಡರ್‌ ಆಧಾರದಲ್ಲಿ ಕೇರಳ ಮೂಲದ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ವಿವಿಧ ಕಾರಣಗಳಿಂದ ನಷ್ಟವಾಗುತ್ತಿದೆ ಎಂಬ ಕಾರಣ ನೀಡಿ ಸಂಸ್ಥೆ ಹಿಂದೆ ಸರದಿದೆ.

ಏರ್‌ಪೋರ್ಟ್‌ ಪ್ರಾಧಿಕಾರದ ಮೂಲಗಳ ಪ್ರಕಾರ ಈ ಕೇಂದ್ರಗಳು ಸ್ಥಗಿತಗೊಳ್ಳುವ ವೇಳೆಯೇ ಹೊಸ ಟೆಂಡರ್‌ ಆಹ್ವಾನಿಸಲಾಗಿತ್ತು. ಆದರೆ ಯಾವುದೇ ಸಂಸ್ಥೆ ಭಾಗವಹಿಸದೆ ಇದ್ದುದರಿಂದ ಮರು ಟೆಂಡರ್‌ ಕರೆಯಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ದಿನಗಳಿಂದ “ನಗದು ವಿನಿಮಯ ಕೇಂದ್ರ’ ಸ್ಥಗಿತಗೊಂಡಿದೆ. ಹೊಸ ಕೇಂದ್ರ ಆರಂಭಿಸಲು ಟೆಂಡರ್‌ ಕರೆಯಲಾಗಿದೆ. ಜತೆಗೆ, ತುರ್ತಾಗಿ ವಿನಿಮಯ ಸೇವೆ ಆರಂಭಿಸುವುದಕ್ಕಾಗಿ ಆರ್‌ಬಿಐ ನಿಯಮ ಪ್ರಕಾರ ಸ್ಥಳೀಯ ಬ್ಯಾಂಕ್‌ಗಳ ಜತೆಗೆ ಮಾತುಕತೆ ನಡೆಸಲಾಗಿದೆ. ಕೆಲವೇ ದಿನಗಳಲ್ಲಿ ಈ ಸಮಸ್ಯೆ ಬಗೆಹರಿಯಲಿದೆ.
–  ಜೈಶಂಕರ್‌ ಕಮರ್ಷಿಯಲ್‌ ಮ್ಯಾನೇಜರ್‌,
ಮಂಗಳೂರು ಅಂ. ವಿಮಾನ ನಿಲ್ದಾಣ

ವಿದೇಶದಿಂದ
ಆಗಮಿಸುವವರಿಗೆ ಸಮಸ್ಯೆ
ನಿಗದಿತ ಪ್ರಮಾಣಕ್ಕಿಂತ ಅಧಿಕ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ವಿದೇಶದಿಂದ ತಂದರೆ ನಿಲ್ದಾಣದಲ್ಲಿ ತೆರಿಗೆ ಪಾವತಿಸಬೇಕು. ಆದರೆ ವಿದೇಶದಿಂದ ಬರುವ ಬಹುತೇಕರಲ್ಲಿ ಭಾರತೀಯ ಕರೆನ್ಸಿ ಇರುವುದಿಲ್ಲ. ನಿಲ್ದಾಣದ ಒಳಗೆಯೇ ವಿನಿಮಯ ಕೇಂದ್ರವಿದ್ದರೆ ಇದಕ್ಕೆ ಅನುಕೂಲ. ಈಗ ಕೇಂದ್ರ ಸ್ಥಗಿತಗೊಂಡು ಸಮಸ್ಯೆಯಾಗಿದೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.