Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು
Team Udayavani, Oct 2, 2024, 11:48 PM IST
ಮಂಗಳೂರು: ಕೆಎಸ್ಆರ್ ಬೆಂಗಳೂರು- ಕಣ್ಣೂರು-ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್, ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಆಂಶಿಕವಾಗಿ ಹಿಂಪಡೆದಿದೆ.
ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ.
ಈಗಿನ ಮಾಹಿತಿಯಂತೆ 16511 ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲು ಕೆಎಸ್ಆರ್ನಿಂದ ರಾತ್ರಿ 9.35ಕ್ಕೆ ಹೊರಡುವ ಬದಲು ಎಸ್ಎಂವಿಟಿಬಿಯಿಂದ ರಾತ್ರಿ 8ಕ್ಕೆ ಹೊರಟು ಕೆಎಸ್ಆರ್ಗೆ ಹೋಗದೆ ಯಶವಂತಪುರಕ್ಕೆ 9.25ಕ್ಕೆ ಆಗಮಿಸುವುದು, ಅಲ್ಲಿಂದ 9.45ಕ್ಕೆ ಹೊರಡಲಿದೆ. ನಂ.16512 ರೈಲು ಕಣ್ಣೂರಿನಿಂದ 5.05ಕ್ಕೆ ಸಂಜೆ ಹೊರಟು ಯಶವಂತಪುರಕ್ಕೆ ಮರುದಿನ ಬೆಳಗ್ಗೆ 6.10ಕ್ಕೆ ತಲಪುವುದು, ಅಲ್ಲಿಂದ 6.30ಕ್ಕೆ ಹೊರಟು ಎಸ್ಎಂವಿಟಿಬಿಗೆ 7.45ಕ್ಕೆ ತಲುಪಲಿದೆ. ಆದರೆ ಕೆಎಸ್ಆರ್ ಸ್ಟೇಷನ್ಗೆ ಹೋಗುವುದಿಲ್ಲಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.