ಮಂಗಳೂರು ಲಾಕ್ ಡೌನ್ ಪ್ರಸಂಗ: ರೂಮ್ ಗೆ ಸೂಟ್ ಕೇಸ್ ನಲ್ಲಿ ಗೆಳೆಯನನ್ನು ತಂದು ಸಿಕ್ಕಿಬಿದ್ದ!


Team Udayavani, Apr 12, 2020, 1:31 PM IST

12-April-8

ಸಾಂದರ್ಭಿಕ ಚಿತ್ರ

ಮಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ನಿಯಮ ಮೀರಿ ಗೆಳೆಯನನ್ನು ಸೂಟ್ ಕೇಸ್ ನಲ್ಲಿ ತುಂಬಿಸಿ ರೂಮಿಗೆ ಕರೆದೊಯ್ದು ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಆರ್ಯಸಮಾಜ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ ವಾಸವಾಗಿದ್ದ. ವಸತಿ ಸಮುಚ್ಚಯ ಅಸೋಸಿಯೇಷನ್ ಲಾಕ್ ಡೌನ್ ಹಿನ್ನಲೆಯಲ್ಲಿ ವಾಸ್ತವ್ಯ ಇರುವವರು ಹೊರತುಪಡಿಸಿ ಇತರರಿಗೆ ಪ್ರವೇಶ ನಿರಾಕರಿಸಲಾಗಿತ್ತು. ವಿದ್ಯಾರ್ಥಿ ಮಾತ್ರ ತನ್ನ ಗೆಳೆಯನನ್ನು ರೂಮಿಗೆ ಕರೆತರುತ್ತೇನೆ ಎಂದು ಹೇಳುತ್ತಲೇ ಇದ್ದ. ಇದಕ್ಕೆ ಅಪಾರ್ಟ್ ಮೆಂಟ್ ನವರು ಅವಕಾಶ ನೀಡಿರಲಿಲ್ಲ.

ಆದರೂ ಹಠ ಬಿಡದ ಯುವಕ ರವಿವಾರ ಬೆಳಗ್ಗೆ ತನ್ನ ಗೆಳೆಯನನ್ನು ಸೂಟ್ ಕೇಸಿನಲ್ಲಿ ತುಂಬಿಸಿ ರೂಮಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾನೆ. ಈ ವೇಳೆ ಸೂಟ್ ಕೇಸ್ ನಲ್ಲಿ ಸಂಚಲನ ಕಂಡು ಬಂದಿದ್ದು, ವಸತಿ ಸಮುಚ್ಚಯದಲ್ಲಿರುವ ಇತರರ ಗಮನಕ್ಕೆ ಬಂದಿದೆ. ಕೂಡಲೇ ಎಲ್ಲರೂ ಸೇರಿ ಸೂಟ್ ಕೇಸ್ ತೆರೆಯುವಂತೆ ಒತ್ತಾಯಿಸಿದ್ದಾರೆ. ಸಂದಿಗ್ಧ ಸ್ಥಿತಿಗೆ ಸಿಲುಕಿದ ಯುವಕ ಸೂಟ್ ಕೇಸ್ ತೆರೆಯುವಾಗ ಸತ್ಯಾಂಶ ಬಹಿರಂಗವಾಗಿದೆ.

ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಇಬ್ಬರನ್ನೂ ಠಾಣೆಗೆ ಕರೆಸಿದ್ದಾರೆ. ಬಳಿಕ ಮನೆಮಂದಿಯನ್ನು ಕರೆಸಿ ಯುವಕರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.