ಗಾಂಜಾ ಪ್ರಕರಣ: ಮತ್ತೆ ಏಳು ಮಂದಿ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಬಂಧನ


Team Udayavani, Jan 21, 2023, 3:55 PM IST

mangalore doctors drug case; Nine more arrested

ಮಂಗಳೂರು: ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಮಾದಕ ದ್ರವ್ಯ ಪ್ರಕರಣದಲ್ಲಿ ಪೊಲೀಸರು ಬೇಟೆ ಮುಂದುವರಿಸಿದ್ದು, ಮತ್ತೆ ಏಳು ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ನಗರದ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ.

ಬಂಧಿತರನ್ನು ವಿದುಶ್ ಕುಮಾರ್, ಶರಣ್ಯಾ, ಸಿದ್ದಾರ್ಥ ಪವಾಸ್ಕರ್, ಸೂರ್ಯಜಿತ ದೇವ್, ಆಯುಷಾ ಮೊಹಮ್ಮದ್, ಪ್ರಣಯ್ ನಟರಾಜ್, ಚೈತನ್ಯ ಆರ್ ತುಮುಲುರಿ, ಸುಧೀಂದ್ರ ಮತ್ತು ಇಶಾ ಮಿಡ್ಡಾ ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ನಗರದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 7 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಇಬ್ಬರು ವೈದ್ಯರನ್ನು ಸೇವೆಯಿಂದ ಗುರುವಾರ ವಜಾಗೊಳಿಸಲಾಗಿದೆ.

3 ಪಟ್ಟು ಹೆಚ್ಚು ಬೆಲೆಗೆ ಮಾರಾಟ: ಆರೋಪಿಗಳ ಪೈಕಿ ಕೆಲವರು ಪೆಡ್ಲರ್‌ ಗಳು. ಇವರು ಮಾದಕ ದ್ರವ್ಯವನ್ನು ಹೊರಗಡೆಯಿಂದ ಕಡಿಮೆ ಬೆಲೆಗೆ ಖರೀದಿಸಿ ಮಂಗಳೂರಿನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಆರೋಪಿಗಳನ್ನು ವಿಚಾರಿಸಿದಾಗ ಅವರು ಕಾಲೇಜು ಆವರಣದಿಂದ ಹೊರಗೆ ಪಿಜಿ, ಅಪಾರ್ಟ್‌ಮೆಂಟ್‌, ಬಾಡಿಗೆ ಮನೆಯಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಮಾಡಿರುವುದು ತಿಳಿದುಬಂದಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಆಯುಕ್ತರು ಗುರುವಾರ ತಿಳಿಸಿದ್ದರು.

ನಿಗಾ ಇಡಲು ಸೂಚನೆ: ನಗರದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಪಿಜಿ, ಅಪಾರ್ಟ್‌ಮೆಂಟ್‌, ಬಾಡಿಗೆ ಮನೆಗಳಲ್ಲಿಯೂ ಉಳಿದುಕೊಂಡಿದ್ದಾರೆ. ಆದರೆ ಕೆಲವೆಡೆ ಅಕ್ರಮ ಚಟುವಟಿಕೆ ನಡೆಯುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಹೆಚ್ಚಿನ ನಿಗಾ ಇಡುವಂತೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಿಜಿ, ಬಾಡಿಗೆ ಮನೆ ಮಾಲಕರಿಗೂ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತ ನಡೆಯುವ ಚಟುವಟಿಕೆ ಗಮನಿಸಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಹೇಳಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.